ಚಾಮರಾಜನಗರ: ಮದುವೆ ಅಂದ್ರೆ ವರನಿಗೆ ಐಷಾರಾಮಿ ಕಾರು, ಬೈಕ್ ತಂದು ನಿಲ್ಲಿಸುವುದು ಸಾಮಾನ್ಯ. ಆದರೆ, ಇಲ್ಲೋರ್ವ ಯುವ ರೈತ ತನ್ನ ನೆಚ್ಚಿನ ಜೋಡೆತ್ತುಗಳಿಗೆ ವಿಶೇಷ ವೇದಿಕೆ ನಿರ್ಮಿಸಿ ತನ್ನ ಮದುವೆಯನ್ನು ವಿಶಿಷ್ಟವಾಗಿ ನೆರವೇರಿಸಿಕೊಂಡಿದ್ದಾರೆ.
ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಗ್ರಾಮದಲ್ಲಿ ಇಂದು ವಿಶೇಷ ಮದುವೆಯೊಂದು ನಡೆದಿದ್ದು, ಕೃಷಿ ಚಟುವಟಿಕೆಗೆ ನೆರವಾಗುವ ತಮ್ಮ ಎತ್ತುಗಳನ್ನು ಮದುವೆ ಛತ್ರಕ್ಕೆ ಕರೆತಂದು ಅದಕ್ಕಾಗಿಯೇ ವೇದಿಕೆ ನಿರ್ಮಿಸಿ ಗೋಪ್ರೀತಿ ತೋರುವ ಮೂಲಕ ಮದುವೆ ಸಂಭ್ರಮವನ್ನು ಹೆಚ್ಚಿಸಿದ್ದಾರೆ.ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮದ ಮಹೇಶ್ ಅವರೊಟ್ಟಿಗೆ ತೊರವಳ್ಳಿ ಗ್ರಾಮದ ಯೋಗಿತಾ ಸಪ್ತಪದಿ ತುಳಿದಿದ್ದಾರೆ. ಮದುವೆ ಸಮಾರಂಭಕ್ಕೆ ತಾವು ಸಾಕಿದ ಎತ್ತುಗಳನ್ನು ಕರೆತಂದು ಅವುಗಳು ಕೂಡ ವಿವಾಹಕ್ಕೆ ಸಾಕ್ಷೀಕರಿಸಬೇಕು ಎಂಬ ವರನ ಆಸೆಯನ್ನು ಇಲ್ಲ ಎನ್ನದ ಕುಟುಂಬಸ್ಥರು ಎತ್ತುಗಳನ್ನು ಸಿಂಗರಿಸಿ- ಅದಕ್ಕಾಗಿ ವೇದಿಕೆಯನ್ನು ನಿರ್ಮಿಸಿ ವಧು – ವರರಿಗೆ ಜೋಡೆತ್ತುಗಳಿಂದ ಆಶೀರ್ವಾದವನ್ನು ಕೊಡಿಸಿ ವಿಶೇಷವಾಗಿ ಮದುವೆ ನಡೆಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…