ಚಾಮರಾಜನಗರ: ಮದುವೆ ಅಂದ್ರೆ ವರನಿಗೆ ಐಷಾರಾಮಿ ಕಾರು, ಬೈಕ್ ತಂದು ನಿಲ್ಲಿಸುವುದು ಸಾಮಾನ್ಯ. ಆದರೆ, ಇಲ್ಲೋರ್ವ ಯುವ ರೈತ ತನ್ನ ನೆಚ್ಚಿನ ಜೋಡೆತ್ತುಗಳಿಗೆ ವಿಶೇಷ ವೇದಿಕೆ ನಿರ್ಮಿಸಿ ತನ್ನ ಮದುವೆಯನ್ನು ವಿಶಿಷ್ಟವಾಗಿ ನೆರವೇರಿಸಿಕೊಂಡಿದ್ದಾರೆ.
ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಗ್ರಾಮದಲ್ಲಿ ಇಂದು ವಿಶೇಷ ಮದುವೆಯೊಂದು ನಡೆದಿದ್ದು, ಕೃಷಿ ಚಟುವಟಿಕೆಗೆ ನೆರವಾಗುವ ತಮ್ಮ ಎತ್ತುಗಳನ್ನು ಮದುವೆ ಛತ್ರಕ್ಕೆ ಕರೆತಂದು ಅದಕ್ಕಾಗಿಯೇ ವೇದಿಕೆ ನಿರ್ಮಿಸಿ ಗೋಪ್ರೀತಿ ತೋರುವ ಮೂಲಕ ಮದುವೆ ಸಂಭ್ರಮವನ್ನು ಹೆಚ್ಚಿಸಿದ್ದಾರೆ.ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮದ ಮಹೇಶ್ ಅವರೊಟ್ಟಿಗೆ ತೊರವಳ್ಳಿ ಗ್ರಾಮದ ಯೋಗಿತಾ ಸಪ್ತಪದಿ ತುಳಿದಿದ್ದಾರೆ. ಮದುವೆ ಸಮಾರಂಭಕ್ಕೆ ತಾವು ಸಾಕಿದ ಎತ್ತುಗಳನ್ನು ಕರೆತಂದು ಅವುಗಳು ಕೂಡ ವಿವಾಹಕ್ಕೆ ಸಾಕ್ಷೀಕರಿಸಬೇಕು ಎಂಬ ವರನ ಆಸೆಯನ್ನು ಇಲ್ಲ ಎನ್ನದ ಕುಟುಂಬಸ್ಥರು ಎತ್ತುಗಳನ್ನು ಸಿಂಗರಿಸಿ- ಅದಕ್ಕಾಗಿ ವೇದಿಕೆಯನ್ನು ನಿರ್ಮಿಸಿ ವಧು – ವರರಿಗೆ ಜೋಡೆತ್ತುಗಳಿಂದ ಆಶೀರ್ವಾದವನ್ನು ಕೊಡಿಸಿ ವಿಶೇಷವಾಗಿ ಮದುವೆ ನಡೆಸಿದ್ದಾರೆ.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…