ಚಾಮರಾಜನಗರ: ಮದುವೆ ಅಂದ್ರೆ ವರನಿಗೆ ಐಷಾರಾಮಿ ಕಾರು, ಬೈಕ್ ತಂದು ನಿಲ್ಲಿಸುವುದು ಸಾಮಾನ್ಯ. ಆದರೆ, ಇಲ್ಲೋರ್ವ ಯುವ ರೈತ ತನ್ನ ನೆಚ್ಚಿನ ಜೋಡೆತ್ತುಗಳಿಗೆ ವಿಶೇಷ ವೇದಿಕೆ ನಿರ್ಮಿಸಿ ತನ್ನ ಮದುವೆಯನ್ನು ವಿಶಿಷ್ಟವಾಗಿ ನೆರವೇರಿಸಿಕೊಂಡಿದ್ದಾರೆ.
ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಗ್ರಾಮದಲ್ಲಿ ಇಂದು ವಿಶೇಷ ಮದುವೆಯೊಂದು ನಡೆದಿದ್ದು, ಕೃಷಿ ಚಟುವಟಿಕೆಗೆ ನೆರವಾಗುವ ತಮ್ಮ ಎತ್ತುಗಳನ್ನು ಮದುವೆ ಛತ್ರಕ್ಕೆ ಕರೆತಂದು ಅದಕ್ಕಾಗಿಯೇ ವೇದಿಕೆ ನಿರ್ಮಿಸಿ ಗೋಪ್ರೀತಿ ತೋರುವ ಮೂಲಕ ಮದುವೆ ಸಂಭ್ರಮವನ್ನು ಹೆಚ್ಚಿಸಿದ್ದಾರೆ.ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮದ ಮಹೇಶ್ ಅವರೊಟ್ಟಿಗೆ ತೊರವಳ್ಳಿ ಗ್ರಾಮದ ಯೋಗಿತಾ ಸಪ್ತಪದಿ ತುಳಿದಿದ್ದಾರೆ. ಮದುವೆ ಸಮಾರಂಭಕ್ಕೆ ತಾವು ಸಾಕಿದ ಎತ್ತುಗಳನ್ನು ಕರೆತಂದು ಅವುಗಳು ಕೂಡ ವಿವಾಹಕ್ಕೆ ಸಾಕ್ಷೀಕರಿಸಬೇಕು ಎಂಬ ವರನ ಆಸೆಯನ್ನು ಇಲ್ಲ ಎನ್ನದ ಕುಟುಂಬಸ್ಥರು ಎತ್ತುಗಳನ್ನು ಸಿಂಗರಿಸಿ- ಅದಕ್ಕಾಗಿ ವೇದಿಕೆಯನ್ನು ನಿರ್ಮಿಸಿ ವಧು – ವರರಿಗೆ ಜೋಡೆತ್ತುಗಳಿಂದ ಆಶೀರ್ವಾದವನ್ನು ಕೊಡಿಸಿ ವಿಶೇಷವಾಗಿ ಮದುವೆ ನಡೆಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…