ಜಿಲ್ಲೆಗಳು

ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಅಕ್ರಮ-ಸಕ್ರಮ ಸಮಿತಿ ಸಭೆ

೧೧೨ ಜನರಿಗೆ ಸಾಗುವಳಿ ಮಂಜೂರು

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ದೊಡ್ಡಮಾರಗೌಡನಹಳ್ಳಿ -೧೬, ಕಮರಹಳ್ಳಿ-೨, ಕರಕರನಹಳ್ಳಿ ೫ ಜನ, ಯಚಲಹಳ್ಳಿ ೮ ಜನ, ಬೊಮ್ಮೇನಹಳ್ಳಿ ೧೯ ಜನ, ನಾಗವಾಲ ೧೬ ಜನ, ಚಿಕ್ಕನಹಳ್ಳಿ ೨೭ ಜನ, ರಟ್ನಹಳ್ಳಿ ೬ ಜನ, ದಡದಹಳ್ಳಿ ೩ ಜನ, ಎಸ್.ಹೆಮ್ಮನಹಳ್ಳಿ ೧ ಜನ, ಗುಂಗ್ರಾಲ್‌ಛತ್ರ ೪ ಜನ, ಕಲೂರು ನಾಗನಹಳ್ಳಿ ೦೫ ಜನರಿಗೆ ಒಟ್ಟು ೧೧೨ ಜನರಿಗೆ ಸಾಗುವಳಿಯನ್ನು ಇಂದು ನಡೆದ ಅಕ್ರಮ-ಸಕ್ರಮ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಅಕ್ರಮ-ಸಕ್ರಮ ಸಮಿತಿ ಸಭೆಯಲ್ಲಿ ನಮೂನೆ-೫೩ ಮತ್ತು ನಮೂನೆ-೫೭ ರಲ್ಲಿ ಒಟ್ಟು ೧೬೯೨ ಅರ್ಜಿಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ ೪೦೨ ಅರ್ಜಿಗಳು ಮೈಸೂರು ನಗರದಿಂದ ೧೦ ಕಿ.ಮೀ.ವ್ಯಾಪ್ತಿಯೊಳಗೆ ಬರುವುದರಿಂದ ತಿರಸ್ಕರಿಸಿದ್ದು, ಉಳಿಕೆ ೧೧೭೮ ಅರ್ಜಿಗಳ ಪೈಕಿ ೯೧೭ ಅರ್ಜಿಗಳು ಸ್ವೀಕೃತವಾಗಿದ್ದು, ಸದರಿ ಅರ್ಜಿಗಳು ಗೋಮಾಳ, ಹಿಡುವಳಿ, ಕೆರೆ/ಕಟ್ಟೆ ಜಮೀನುಗಳಿಗೆ ಸಂಬoಧಪಟ್ಟವರಿoದ. ೨೬೧ ಅರ್ಜಿಗಳು ವರದಿಗಾಗಿ ಬಾಕಿ ಇರುತ್ತವೆ ಎಂದು ತಿಳಿಸಿದ್ದಾರೆ.
ಚಿಕ್ಕನಹಳ್ಳಿ, ಮಾವಿನಹಳ್ಳಿ, ಗುಮ್ಮಚನಹಳ್ಳಿ, ಮದ್ದೂರು, ಅರಸನಕೆರೆ ಗ್ರಾಮಗಳಿಗೆ ಸಂಬoಧಿಸಿದoತೆ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಜಂಟಿಯಾಗಿ ಸರ್ವೆ ಮಾಡಬೇಕಾಗಿರುವುದರಿಂದ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಜಂಟಿಯಾಗಿ ಸರ್ವೆ ಮಾಡಿ ವರದರಿಯನ್ನು ಡಿಸೆಂಬರ್ ತಿಂಗಳೊಳಗೆ ನೀಡಲು ಸೂಚಿಸಲಾಯಿತು.
ಸಭೆಯಲ್ಲಿ ತಹಶೀಲ್ದಾರ್ ಗಿರೀಶ್, ಸದಸ್ಯರುಗಳಾದ ಹೂಟಗಳ್ಳಿ ರವಿ, ಪ್ರಮೀಳಾ ನಾಯಕ್, ಜೆ.ಪಿ.ರತ್ನಮ್ಮ, ಎ.ಡಿ.ಎಲ್.ಆರ್. ವಿವೇಕ್, ಆರ್.ಎಫ್.ಓ. ಸುರೇಂದ್ರ, ಉಪತಶೀಲ್ದಾರ್‌ಗಳಾದ ನಿಂಗಪ್ಪ, ಕುಬೇರ, ಲೋಕೇಶ್ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago