೧೧೨ ಜನರಿಗೆ ಸಾಗುವಳಿ ಮಂಜೂರು
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ದೊಡ್ಡಮಾರಗೌಡನಹಳ್ಳಿ -೧೬, ಕಮರಹಳ್ಳಿ-೨, ಕರಕರನಹಳ್ಳಿ ೫ ಜನ, ಯಚಲಹಳ್ಳಿ ೮ ಜನ, ಬೊಮ್ಮೇನಹಳ್ಳಿ ೧೯ ಜನ, ನಾಗವಾಲ ೧೬ ಜನ, ಚಿಕ್ಕನಹಳ್ಳಿ ೨೭ ಜನ, ರಟ್ನಹಳ್ಳಿ ೬ ಜನ, ದಡದಹಳ್ಳಿ ೩ ಜನ, ಎಸ್.ಹೆಮ್ಮನಹಳ್ಳಿ ೧ ಜನ, ಗುಂಗ್ರಾಲ್ಛತ್ರ ೪ ಜನ, ಕಲೂರು ನಾಗನಹಳ್ಳಿ ೦೫ ಜನರಿಗೆ ಒಟ್ಟು ೧೧೨ ಜನರಿಗೆ ಸಾಗುವಳಿಯನ್ನು ಇಂದು ನಡೆದ ಅಕ್ರಮ-ಸಕ್ರಮ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಇಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಅಕ್ರಮ-ಸಕ್ರಮ ಸಮಿತಿ ಸಭೆಯಲ್ಲಿ ನಮೂನೆ-೫೩ ಮತ್ತು ನಮೂನೆ-೫೭ ರಲ್ಲಿ ಒಟ್ಟು ೧೬೯೨ ಅರ್ಜಿಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ ೪೦೨ ಅರ್ಜಿಗಳು ಮೈಸೂರು ನಗರದಿಂದ ೧೦ ಕಿ.ಮೀ.ವ್ಯಾಪ್ತಿಯೊಳಗೆ ಬರುವುದರಿಂದ ತಿರಸ್ಕರಿಸಿದ್ದು, ಉಳಿಕೆ ೧೧೭೮ ಅರ್ಜಿಗಳ ಪೈಕಿ ೯೧೭ ಅರ್ಜಿಗಳು ಸ್ವೀಕೃತವಾಗಿದ್ದು, ಸದರಿ ಅರ್ಜಿಗಳು ಗೋಮಾಳ, ಹಿಡುವಳಿ, ಕೆರೆ/ಕಟ್ಟೆ ಜಮೀನುಗಳಿಗೆ ಸಂಬoಧಪಟ್ಟವರಿoದ. ೨೬೧ ಅರ್ಜಿಗಳು ವರದಿಗಾಗಿ ಬಾಕಿ ಇರುತ್ತವೆ ಎಂದು ತಿಳಿಸಿದ್ದಾರೆ.
ಚಿಕ್ಕನಹಳ್ಳಿ, ಮಾವಿನಹಳ್ಳಿ, ಗುಮ್ಮಚನಹಳ್ಳಿ, ಮದ್ದೂರು, ಅರಸನಕೆರೆ ಗ್ರಾಮಗಳಿಗೆ ಸಂಬoಧಿಸಿದoತೆ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಜಂಟಿಯಾಗಿ ಸರ್ವೆ ಮಾಡಬೇಕಾಗಿರುವುದರಿಂದ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಜಂಟಿಯಾಗಿ ಸರ್ವೆ ಮಾಡಿ ವರದರಿಯನ್ನು ಡಿಸೆಂಬರ್ ತಿಂಗಳೊಳಗೆ ನೀಡಲು ಸೂಚಿಸಲಾಯಿತು.
ಸಭೆಯಲ್ಲಿ ತಹಶೀಲ್ದಾರ್ ಗಿರೀಶ್, ಸದಸ್ಯರುಗಳಾದ ಹೂಟಗಳ್ಳಿ ರವಿ, ಪ್ರಮೀಳಾ ನಾಯಕ್, ಜೆ.ಪಿ.ರತ್ನಮ್ಮ, ಎ.ಡಿ.ಎಲ್.ಆರ್. ವಿವೇಕ್, ಆರ್.ಎಫ್.ಓ. ಸುರೇಂದ್ರ, ಉಪತಶೀಲ್ದಾರ್ಗಳಾದ ನಿಂಗಪ್ಪ, ಕುಬೇರ, ಲೋಕೇಶ್ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…