ಜಿಲ್ಲೆಗಳು

ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಅಕ್ರಮ-ಸಕ್ರಮ ಸಮಿತಿ ಸಭೆ

೧೧೨ ಜನರಿಗೆ ಸಾಗುವಳಿ ಮಂಜೂರು

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ದೊಡ್ಡಮಾರಗೌಡನಹಳ್ಳಿ -೧೬, ಕಮರಹಳ್ಳಿ-೨, ಕರಕರನಹಳ್ಳಿ ೫ ಜನ, ಯಚಲಹಳ್ಳಿ ೮ ಜನ, ಬೊಮ್ಮೇನಹಳ್ಳಿ ೧೯ ಜನ, ನಾಗವಾಲ ೧೬ ಜನ, ಚಿಕ್ಕನಹಳ್ಳಿ ೨೭ ಜನ, ರಟ್ನಹಳ್ಳಿ ೬ ಜನ, ದಡದಹಳ್ಳಿ ೩ ಜನ, ಎಸ್.ಹೆಮ್ಮನಹಳ್ಳಿ ೧ ಜನ, ಗುಂಗ್ರಾಲ್‌ಛತ್ರ ೪ ಜನ, ಕಲೂರು ನಾಗನಹಳ್ಳಿ ೦೫ ಜನರಿಗೆ ಒಟ್ಟು ೧೧೨ ಜನರಿಗೆ ಸಾಗುವಳಿಯನ್ನು ಇಂದು ನಡೆದ ಅಕ್ರಮ-ಸಕ್ರಮ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಅಕ್ರಮ-ಸಕ್ರಮ ಸಮಿತಿ ಸಭೆಯಲ್ಲಿ ನಮೂನೆ-೫೩ ಮತ್ತು ನಮೂನೆ-೫೭ ರಲ್ಲಿ ಒಟ್ಟು ೧೬೯೨ ಅರ್ಜಿಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ ೪೦೨ ಅರ್ಜಿಗಳು ಮೈಸೂರು ನಗರದಿಂದ ೧೦ ಕಿ.ಮೀ.ವ್ಯಾಪ್ತಿಯೊಳಗೆ ಬರುವುದರಿಂದ ತಿರಸ್ಕರಿಸಿದ್ದು, ಉಳಿಕೆ ೧೧೭೮ ಅರ್ಜಿಗಳ ಪೈಕಿ ೯೧೭ ಅರ್ಜಿಗಳು ಸ್ವೀಕೃತವಾಗಿದ್ದು, ಸದರಿ ಅರ್ಜಿಗಳು ಗೋಮಾಳ, ಹಿಡುವಳಿ, ಕೆರೆ/ಕಟ್ಟೆ ಜಮೀನುಗಳಿಗೆ ಸಂಬoಧಪಟ್ಟವರಿoದ. ೨೬೧ ಅರ್ಜಿಗಳು ವರದಿಗಾಗಿ ಬಾಕಿ ಇರುತ್ತವೆ ಎಂದು ತಿಳಿಸಿದ್ದಾರೆ.
ಚಿಕ್ಕನಹಳ್ಳಿ, ಮಾವಿನಹಳ್ಳಿ, ಗುಮ್ಮಚನಹಳ್ಳಿ, ಮದ್ದೂರು, ಅರಸನಕೆರೆ ಗ್ರಾಮಗಳಿಗೆ ಸಂಬoಧಿಸಿದoತೆ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಜಂಟಿಯಾಗಿ ಸರ್ವೆ ಮಾಡಬೇಕಾಗಿರುವುದರಿಂದ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಜಂಟಿಯಾಗಿ ಸರ್ವೆ ಮಾಡಿ ವರದರಿಯನ್ನು ಡಿಸೆಂಬರ್ ತಿಂಗಳೊಳಗೆ ನೀಡಲು ಸೂಚಿಸಲಾಯಿತು.
ಸಭೆಯಲ್ಲಿ ತಹಶೀಲ್ದಾರ್ ಗಿರೀಶ್, ಸದಸ್ಯರುಗಳಾದ ಹೂಟಗಳ್ಳಿ ರವಿ, ಪ್ರಮೀಳಾ ನಾಯಕ್, ಜೆ.ಪಿ.ರತ್ನಮ್ಮ, ಎ.ಡಿ.ಎಲ್.ಆರ್. ವಿವೇಕ್, ಆರ್.ಎಫ್.ಓ. ಸುರೇಂದ್ರ, ಉಪತಶೀಲ್ದಾರ್‌ಗಳಾದ ನಿಂಗಪ್ಪ, ಕುಬೇರ, ಲೋಕೇಶ್ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.

andolanait

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

1 hour ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

1 hour ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

1 hour ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

1 hour ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

1 hour ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

2 hours ago