ಜಿಲ್ಲೆಗಳು

ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಅಕ್ರಮ-ಸಕ್ರಮ ಸಮಿತಿ ಸಭೆ

೧೧೨ ಜನರಿಗೆ ಸಾಗುವಳಿ ಮಂಜೂರು

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ದೊಡ್ಡಮಾರಗೌಡನಹಳ್ಳಿ -೧೬, ಕಮರಹಳ್ಳಿ-೨, ಕರಕರನಹಳ್ಳಿ ೫ ಜನ, ಯಚಲಹಳ್ಳಿ ೮ ಜನ, ಬೊಮ್ಮೇನಹಳ್ಳಿ ೧೯ ಜನ, ನಾಗವಾಲ ೧೬ ಜನ, ಚಿಕ್ಕನಹಳ್ಳಿ ೨೭ ಜನ, ರಟ್ನಹಳ್ಳಿ ೬ ಜನ, ದಡದಹಳ್ಳಿ ೩ ಜನ, ಎಸ್.ಹೆಮ್ಮನಹಳ್ಳಿ ೧ ಜನ, ಗುಂಗ್ರಾಲ್‌ಛತ್ರ ೪ ಜನ, ಕಲೂರು ನಾಗನಹಳ್ಳಿ ೦೫ ಜನರಿಗೆ ಒಟ್ಟು ೧೧೨ ಜನರಿಗೆ ಸಾಗುವಳಿಯನ್ನು ಇಂದು ನಡೆದ ಅಕ್ರಮ-ಸಕ್ರಮ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಅಕ್ರಮ-ಸಕ್ರಮ ಸಮಿತಿ ಸಭೆಯಲ್ಲಿ ನಮೂನೆ-೫೩ ಮತ್ತು ನಮೂನೆ-೫೭ ರಲ್ಲಿ ಒಟ್ಟು ೧೬೯೨ ಅರ್ಜಿಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ ೪೦೨ ಅರ್ಜಿಗಳು ಮೈಸೂರು ನಗರದಿಂದ ೧೦ ಕಿ.ಮೀ.ವ್ಯಾಪ್ತಿಯೊಳಗೆ ಬರುವುದರಿಂದ ತಿರಸ್ಕರಿಸಿದ್ದು, ಉಳಿಕೆ ೧೧೭೮ ಅರ್ಜಿಗಳ ಪೈಕಿ ೯೧೭ ಅರ್ಜಿಗಳು ಸ್ವೀಕೃತವಾಗಿದ್ದು, ಸದರಿ ಅರ್ಜಿಗಳು ಗೋಮಾಳ, ಹಿಡುವಳಿ, ಕೆರೆ/ಕಟ್ಟೆ ಜಮೀನುಗಳಿಗೆ ಸಂಬoಧಪಟ್ಟವರಿoದ. ೨೬೧ ಅರ್ಜಿಗಳು ವರದಿಗಾಗಿ ಬಾಕಿ ಇರುತ್ತವೆ ಎಂದು ತಿಳಿಸಿದ್ದಾರೆ.
ಚಿಕ್ಕನಹಳ್ಳಿ, ಮಾವಿನಹಳ್ಳಿ, ಗುಮ್ಮಚನಹಳ್ಳಿ, ಮದ್ದೂರು, ಅರಸನಕೆರೆ ಗ್ರಾಮಗಳಿಗೆ ಸಂಬoಧಿಸಿದoತೆ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಜಂಟಿಯಾಗಿ ಸರ್ವೆ ಮಾಡಬೇಕಾಗಿರುವುದರಿಂದ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಜಂಟಿಯಾಗಿ ಸರ್ವೆ ಮಾಡಿ ವರದರಿಯನ್ನು ಡಿಸೆಂಬರ್ ತಿಂಗಳೊಳಗೆ ನೀಡಲು ಸೂಚಿಸಲಾಯಿತು.
ಸಭೆಯಲ್ಲಿ ತಹಶೀಲ್ದಾರ್ ಗಿರೀಶ್, ಸದಸ್ಯರುಗಳಾದ ಹೂಟಗಳ್ಳಿ ರವಿ, ಪ್ರಮೀಳಾ ನಾಯಕ್, ಜೆ.ಪಿ.ರತ್ನಮ್ಮ, ಎ.ಡಿ.ಎಲ್.ಆರ್. ವಿವೇಕ್, ಆರ್.ಎಫ್.ಓ. ಸುರೇಂದ್ರ, ಉಪತಶೀಲ್ದಾರ್‌ಗಳಾದ ನಿಂಗಪ್ಪ, ಕುಬೇರ, ಲೋಕೇಶ್ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.

andolanait

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

13 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago