ಜಿಲ್ಲೆಗಳು

ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಅಕ್ರಮ-ಸಕ್ರಮ ಸಮಿತಿ ಸಭೆ

೧೧೨ ಜನರಿಗೆ ಸಾಗುವಳಿ ಮಂಜೂರು

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ದೊಡ್ಡಮಾರಗೌಡನಹಳ್ಳಿ -೧೬, ಕಮರಹಳ್ಳಿ-೨, ಕರಕರನಹಳ್ಳಿ ೫ ಜನ, ಯಚಲಹಳ್ಳಿ ೮ ಜನ, ಬೊಮ್ಮೇನಹಳ್ಳಿ ೧೯ ಜನ, ನಾಗವಾಲ ೧೬ ಜನ, ಚಿಕ್ಕನಹಳ್ಳಿ ೨೭ ಜನ, ರಟ್ನಹಳ್ಳಿ ೬ ಜನ, ದಡದಹಳ್ಳಿ ೩ ಜನ, ಎಸ್.ಹೆಮ್ಮನಹಳ್ಳಿ ೧ ಜನ, ಗುಂಗ್ರಾಲ್‌ಛತ್ರ ೪ ಜನ, ಕಲೂರು ನಾಗನಹಳ್ಳಿ ೦೫ ಜನರಿಗೆ ಒಟ್ಟು ೧೧೨ ಜನರಿಗೆ ಸಾಗುವಳಿಯನ್ನು ಇಂದು ನಡೆದ ಅಕ್ರಮ-ಸಕ್ರಮ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಅಕ್ರಮ-ಸಕ್ರಮ ಸಮಿತಿ ಸಭೆಯಲ್ಲಿ ನಮೂನೆ-೫೩ ಮತ್ತು ನಮೂನೆ-೫೭ ರಲ್ಲಿ ಒಟ್ಟು ೧೬೯೨ ಅರ್ಜಿಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ ೪೦೨ ಅರ್ಜಿಗಳು ಮೈಸೂರು ನಗರದಿಂದ ೧೦ ಕಿ.ಮೀ.ವ್ಯಾಪ್ತಿಯೊಳಗೆ ಬರುವುದರಿಂದ ತಿರಸ್ಕರಿಸಿದ್ದು, ಉಳಿಕೆ ೧೧೭೮ ಅರ್ಜಿಗಳ ಪೈಕಿ ೯೧೭ ಅರ್ಜಿಗಳು ಸ್ವೀಕೃತವಾಗಿದ್ದು, ಸದರಿ ಅರ್ಜಿಗಳು ಗೋಮಾಳ, ಹಿಡುವಳಿ, ಕೆರೆ/ಕಟ್ಟೆ ಜಮೀನುಗಳಿಗೆ ಸಂಬoಧಪಟ್ಟವರಿoದ. ೨೬೧ ಅರ್ಜಿಗಳು ವರದಿಗಾಗಿ ಬಾಕಿ ಇರುತ್ತವೆ ಎಂದು ತಿಳಿಸಿದ್ದಾರೆ.
ಚಿಕ್ಕನಹಳ್ಳಿ, ಮಾವಿನಹಳ್ಳಿ, ಗುಮ್ಮಚನಹಳ್ಳಿ, ಮದ್ದೂರು, ಅರಸನಕೆರೆ ಗ್ರಾಮಗಳಿಗೆ ಸಂಬoಧಿಸಿದoತೆ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಜಂಟಿಯಾಗಿ ಸರ್ವೆ ಮಾಡಬೇಕಾಗಿರುವುದರಿಂದ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಜಂಟಿಯಾಗಿ ಸರ್ವೆ ಮಾಡಿ ವರದರಿಯನ್ನು ಡಿಸೆಂಬರ್ ತಿಂಗಳೊಳಗೆ ನೀಡಲು ಸೂಚಿಸಲಾಯಿತು.
ಸಭೆಯಲ್ಲಿ ತಹಶೀಲ್ದಾರ್ ಗಿರೀಶ್, ಸದಸ್ಯರುಗಳಾದ ಹೂಟಗಳ್ಳಿ ರವಿ, ಪ್ರಮೀಳಾ ನಾಯಕ್, ಜೆ.ಪಿ.ರತ್ನಮ್ಮ, ಎ.ಡಿ.ಎಲ್.ಆರ್. ವಿವೇಕ್, ಆರ್.ಎಫ್.ಓ. ಸುರೇಂದ್ರ, ಉಪತಶೀಲ್ದಾರ್‌ಗಳಾದ ನಿಂಗಪ್ಪ, ಕುಬೇರ, ಲೋಕೇಶ್ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.

andolanait

Recent Posts

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

44 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

53 mins ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

15 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

19 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

19 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

20 hours ago