ಜಿಲ್ಲೆಗಳು

ಚಾಮುಂಡೇಶ್ವರಿ ಗೆ ಇನ್ಮುಂದೆ ಡಿಜಿಟಲ್ ನಲ್ಲಿಯೇ ಕಾಣಿಕೆ ಸಲ್ಲಿಸಿ

ಮೈಸೂರು : ಡಿಜಿಟಲ್ ಪೇಮೆಂಟ್ ಜನಪ್ರಿಯ ಮತ್ತು ಅನಿವಾರ್ಯವಾಗುತ್ತಿರುವ ಇಂದಿನ ದಿನಗಳಲ್ಲಿ ಭಕ್ತರ ಅನುಕೂಲಕ್ಕಾಗಿ ಧಾರ್ಮಿಕ ದತ್ತಿ ಇಲಾಖೆಯು ಚಾಮುಂಡೇಶ್ವರಿ ದೇವಸ್ಥಾನದ ಕ್ಯೂ ಆರ್ ಕೋಡ್ ಸಹಿತ ಇ ಹುಂಡಿ ಬಿಡುಗಡೆ ಮಾಡಿದ್ದು, ಅಪರ ಜಿಲ್ಲಾಧಿಕಾರಿಗಳಾದ ಡಾ. ಬಿ.ಎಸ್. ಮಂಜುನಾಥಸ್ವಾಮಿ ಅವರು ಇ ಹುಂಡಿಯನ್ನು ಉದ್ಘಾಟನೆ ಮಾಡಿದರು.

ಪ್ರಧಾನ ಅರ್ಚಕರಾದ ಡಾ ಶಶಿಶೇಖರ್ ದೀಕ್ಷಿತ್, ಕಿನ ಮುಖ್ಯ ವ್ಯವಸ್ಥಾಪಕರಾದ ಜೀವನಮುಕ್ತ, ಚಾಮುಂಡಿಬೆಟ್ಟ ಶಾಖೆಯ ವ್ಯವಸ್ಥಾಪಕಿ ಸಿಂಧು ಮತ್ತು ಪ್ರಿಯಾಂತ್

ಧಾರ್ಮಿಕ ದತ್ತಿ ಇಲಾಖೆ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಚಾಮುಂಡಿಬೆಟ್ಟ ಶಾಖೆಯ ಸಹಯೋಗದಲ್ಲಿ ಚಾಮುಂಡೇಶ್ವರಿ ದೇವಿಯ ಭಕ್ತರು, ಕಾಣಿಕೆ ಸಲ್ಲಿಕೆಯನ್ನು ಡಿಜಿಟಲ್ ಪೇಮೆಂಟ್ ಮೂಲಕವೂ ಮಾಡಲು ಅನುಕೂಲವಾಗುವಂತೆ ಕ್ಯೂಆರ್ ಕೋಡ್ ಸಹಿತ ಇ-ಹುಂಡಿ ಯನ್ನು ಬಿಡುಗಡೆ ಕಾರ್ಯಕ್ರಮದ ಉದ್ಘಾಟನೆಯನ್ನು ದೇವಸ್ಥಾನದ ಆವರಣದಲ್ಲಿ ನೆರವೇರಿಸಿ ಅವರು ಮಾತನಾಡಿದರು.

ದೇವಸ್ಥಾನದ ಕ್ಯೂ ಆರ್ ಕೋಡ್ ಸಹಿತ ಇ ಹುಂಡಿ ಬಿಡುಗಡೆ

ಇದರ ಭದ್ರತಾ ಕ್ರಮಗಳ ಬಗ್ಗೆ, ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ಷ್ಮ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ. ಭಕ್ತರು ಕಾಣಿಕೆ ಸಲ್ಲಿಕೆಯ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಚಾಮುಂಡಿಬೆಟ್ಟ, ಮೈಸೂರು ಈ ಪೂರ್ಣ ಹೆಸರನ್ನು ಗಮನಿಸುವಂತೆ ವಿನಂತಿಸುತ್ತೇವೆ ಎಂದರು. ಅಲ್ಲದೆ ಇದರ ದುರುಪಯೋಗದ ಬಗ್ಗೆ ತಿಳಿದು ಬಂದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿಯೂ ಸಹ ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಸಿ.ಜಿ. ಕೃಷ್ಣ ಅವರು ಮಾತನಾಡಿ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ರಾಜ್ಯದ ಬಹುತೇಕ ಎ – ಗ್ರೇಡ್ ದೇವಸ್ಥಾನಗಳಲ್ಲಿ ಕ್ಯೂಆರ್ ಕೋಡ್ ಸಹಿತ’ ಇ – ಹುಂಡಿ ಸೌಲಭ್ಯವಿದ್ದು ಅದನ್ನು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿಯೂ ಆಳಸಿಕೊಳ್ಳುವಂತೆ ಇಲಾಖೆಯಿಂದ ಸೂಚಿಸಿದ್ದು, ಅದರಂತೆ ಇಂದು ಬಿಡುಗಡೆಗೊಳಿಸಲಾಗಿದೆ ಶ್ರೀ ದೇವಿಯ ಭಕ್ತಾದಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ನಂತರ ಹೆಚ್ಚುವರಿ ಜಿಲ್ಲಾಧಿಕಾರಿಗಳಾದ ಡಾ.ಬಿ.ಎಸ್. ಮಂಜುನಾಥಸ್ವಾಮಿಯವರು ಕರ್ನಾಟಕ ಗ್ರಾಮೀಣ ಬ್ಯಾಂಕ್ ಈ ದಸರಾ ಸಂದರ್ಭದಲ್ಲಿ ಆಚರಿಸುತ್ತಿರುವ ರೀಟೇಲ್ ಉತ್ಸವದ ತಾತ್ಕಾಲಿಕ ಮಾಹಿತಿ ಕೇಂದ್ರದ ಉದ್ಘಾಟನೆಯನ್ನು ಚಾಮುಂಡಿಬೆಟ್ಟ ಶಾಖೆಯ ಮುಂಭಾಗದಲ್ಲಿ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಮೈಸೂರು ಪ್ರಾದೇಶಿಕ ವ್ಯವಸ್ಥಾಪಕರಾದ ಕೆ.ಎಸ್.ವಿಶ್ವನಾಥ್ ಅವರು ಮಾತನಾಡಿ ಉತ್ಸವದ ಸಂದರ್ಭದಲ್ಲಿ ಗೃಹ ಸಾಲ, ವಾಹನ ಸಾಲ, ಅಡಮಾನ ಸಾಲಗಳಿಗೆ ಅನ್ವಯಿಸುವ ಬಡ್ತಿ ದರ ಮತ್ತು ಸೇವಾ ಶುಲ್ಕ ರಿಯಾಯಿತಿಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ  ದೇವಸ್ಥಾನದ  ಪ್ರಧಾನ ಅರ್ಚಕರಾದ ಡಾ ಶಶಿಶೇಖರ್ ದೀಕ್ಷಿತ್, ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರಾದ ಜೀವನಮುಕ್ತ, ಚಾಮುಂಡಿಬೆಟ್ಟ ಶಾಖೆಯ  ವ್ಯವಸ್ಥಾಪಕಿ ಸಿಂಧು ಮತ್ತು ಪ್ರಿಯಾಂತ್ ಅವರುಗಳು ಉಪಸ್ಥಿತರಿದ್ದರು.

 

andolanait

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

1 hour ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

1 hour ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

5 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

5 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

5 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

6 hours ago