ಜಿಲ್ಲೆಗಳು

ಚಾಮುಂಡೇಶ್ವರಿ ಗೆ ಇನ್ಮುಂದೆ ಡಿಜಿಟಲ್ ನಲ್ಲಿಯೇ ಕಾಣಿಕೆ ಸಲ್ಲಿಸಿ

ಮೈಸೂರು : ಡಿಜಿಟಲ್ ಪೇಮೆಂಟ್ ಜನಪ್ರಿಯ ಮತ್ತು ಅನಿವಾರ್ಯವಾಗುತ್ತಿರುವ ಇಂದಿನ ದಿನಗಳಲ್ಲಿ ಭಕ್ತರ ಅನುಕೂಲಕ್ಕಾಗಿ ಧಾರ್ಮಿಕ ದತ್ತಿ ಇಲಾಖೆಯು ಚಾಮುಂಡೇಶ್ವರಿ ದೇವಸ್ಥಾನದ ಕ್ಯೂ ಆರ್ ಕೋಡ್ ಸಹಿತ ಇ ಹುಂಡಿ ಬಿಡುಗಡೆ ಮಾಡಿದ್ದು, ಅಪರ ಜಿಲ್ಲಾಧಿಕಾರಿಗಳಾದ ಡಾ. ಬಿ.ಎಸ್. ಮಂಜುನಾಥಸ್ವಾಮಿ ಅವರು ಇ ಹುಂಡಿಯನ್ನು ಉದ್ಘಾಟನೆ ಮಾಡಿದರು.

ಪ್ರಧಾನ ಅರ್ಚಕರಾದ ಡಾ ಶಶಿಶೇಖರ್ ದೀಕ್ಷಿತ್, ಕಿನ ಮುಖ್ಯ ವ್ಯವಸ್ಥಾಪಕರಾದ ಜೀವನಮುಕ್ತ, ಚಾಮುಂಡಿಬೆಟ್ಟ ಶಾಖೆಯ ವ್ಯವಸ್ಥಾಪಕಿ ಸಿಂಧು ಮತ್ತು ಪ್ರಿಯಾಂತ್

ಧಾರ್ಮಿಕ ದತ್ತಿ ಇಲಾಖೆ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಚಾಮುಂಡಿಬೆಟ್ಟ ಶಾಖೆಯ ಸಹಯೋಗದಲ್ಲಿ ಚಾಮುಂಡೇಶ್ವರಿ ದೇವಿಯ ಭಕ್ತರು, ಕಾಣಿಕೆ ಸಲ್ಲಿಕೆಯನ್ನು ಡಿಜಿಟಲ್ ಪೇಮೆಂಟ್ ಮೂಲಕವೂ ಮಾಡಲು ಅನುಕೂಲವಾಗುವಂತೆ ಕ್ಯೂಆರ್ ಕೋಡ್ ಸಹಿತ ಇ-ಹುಂಡಿ ಯನ್ನು ಬಿಡುಗಡೆ ಕಾರ್ಯಕ್ರಮದ ಉದ್ಘಾಟನೆಯನ್ನು ದೇವಸ್ಥಾನದ ಆವರಣದಲ್ಲಿ ನೆರವೇರಿಸಿ ಅವರು ಮಾತನಾಡಿದರು.

ದೇವಸ್ಥಾನದ ಕ್ಯೂ ಆರ್ ಕೋಡ್ ಸಹಿತ ಇ ಹುಂಡಿ ಬಿಡುಗಡೆ

ಇದರ ಭದ್ರತಾ ಕ್ರಮಗಳ ಬಗ್ಗೆ, ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ಷ್ಮ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ. ಭಕ್ತರು ಕಾಣಿಕೆ ಸಲ್ಲಿಕೆಯ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಚಾಮುಂಡಿಬೆಟ್ಟ, ಮೈಸೂರು ಈ ಪೂರ್ಣ ಹೆಸರನ್ನು ಗಮನಿಸುವಂತೆ ವಿನಂತಿಸುತ್ತೇವೆ ಎಂದರು. ಅಲ್ಲದೆ ಇದರ ದುರುಪಯೋಗದ ಬಗ್ಗೆ ತಿಳಿದು ಬಂದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿಯೂ ಸಹ ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಸಿ.ಜಿ. ಕೃಷ್ಣ ಅವರು ಮಾತನಾಡಿ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ರಾಜ್ಯದ ಬಹುತೇಕ ಎ – ಗ್ರೇಡ್ ದೇವಸ್ಥಾನಗಳಲ್ಲಿ ಕ್ಯೂಆರ್ ಕೋಡ್ ಸಹಿತ’ ಇ – ಹುಂಡಿ ಸೌಲಭ್ಯವಿದ್ದು ಅದನ್ನು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿಯೂ ಆಳಸಿಕೊಳ್ಳುವಂತೆ ಇಲಾಖೆಯಿಂದ ಸೂಚಿಸಿದ್ದು, ಅದರಂತೆ ಇಂದು ಬಿಡುಗಡೆಗೊಳಿಸಲಾಗಿದೆ ಶ್ರೀ ದೇವಿಯ ಭಕ್ತಾದಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ನಂತರ ಹೆಚ್ಚುವರಿ ಜಿಲ್ಲಾಧಿಕಾರಿಗಳಾದ ಡಾ.ಬಿ.ಎಸ್. ಮಂಜುನಾಥಸ್ವಾಮಿಯವರು ಕರ್ನಾಟಕ ಗ್ರಾಮೀಣ ಬ್ಯಾಂಕ್ ಈ ದಸರಾ ಸಂದರ್ಭದಲ್ಲಿ ಆಚರಿಸುತ್ತಿರುವ ರೀಟೇಲ್ ಉತ್ಸವದ ತಾತ್ಕಾಲಿಕ ಮಾಹಿತಿ ಕೇಂದ್ರದ ಉದ್ಘಾಟನೆಯನ್ನು ಚಾಮುಂಡಿಬೆಟ್ಟ ಶಾಖೆಯ ಮುಂಭಾಗದಲ್ಲಿ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಮೈಸೂರು ಪ್ರಾದೇಶಿಕ ವ್ಯವಸ್ಥಾಪಕರಾದ ಕೆ.ಎಸ್.ವಿಶ್ವನಾಥ್ ಅವರು ಮಾತನಾಡಿ ಉತ್ಸವದ ಸಂದರ್ಭದಲ್ಲಿ ಗೃಹ ಸಾಲ, ವಾಹನ ಸಾಲ, ಅಡಮಾನ ಸಾಲಗಳಿಗೆ ಅನ್ವಯಿಸುವ ಬಡ್ತಿ ದರ ಮತ್ತು ಸೇವಾ ಶುಲ್ಕ ರಿಯಾಯಿತಿಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ  ದೇವಸ್ಥಾನದ  ಪ್ರಧಾನ ಅರ್ಚಕರಾದ ಡಾ ಶಶಿಶೇಖರ್ ದೀಕ್ಷಿತ್, ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರಾದ ಜೀವನಮುಕ್ತ, ಚಾಮುಂಡಿಬೆಟ್ಟ ಶಾಖೆಯ  ವ್ಯವಸ್ಥಾಪಕಿ ಸಿಂಧು ಮತ್ತು ಪ್ರಿಯಾಂತ್ ಅವರುಗಳು ಉಪಸ್ಥಿತರಿದ್ದರು.

 

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago