ಜಿಲ್ಲೆಗಳು

ಚಾಮುಂಡೇಶ್ವರಿ ಗೆ ಇನ್ಮುಂದೆ ಡಿಜಿಟಲ್ ನಲ್ಲಿಯೇ ಕಾಣಿಕೆ ಸಲ್ಲಿಸಿ

ಮೈಸೂರು : ಡಿಜಿಟಲ್ ಪೇಮೆಂಟ್ ಜನಪ್ರಿಯ ಮತ್ತು ಅನಿವಾರ್ಯವಾಗುತ್ತಿರುವ ಇಂದಿನ ದಿನಗಳಲ್ಲಿ ಭಕ್ತರ ಅನುಕೂಲಕ್ಕಾಗಿ ಧಾರ್ಮಿಕ ದತ್ತಿ ಇಲಾಖೆಯು ಚಾಮುಂಡೇಶ್ವರಿ ದೇವಸ್ಥಾನದ ಕ್ಯೂ ಆರ್ ಕೋಡ್ ಸಹಿತ ಇ ಹುಂಡಿ ಬಿಡುಗಡೆ ಮಾಡಿದ್ದು, ಅಪರ ಜಿಲ್ಲಾಧಿಕಾರಿಗಳಾದ ಡಾ. ಬಿ.ಎಸ್. ಮಂಜುನಾಥಸ್ವಾಮಿ ಅವರು ಇ ಹುಂಡಿಯನ್ನು ಉದ್ಘಾಟನೆ ಮಾಡಿದರು.

ಪ್ರಧಾನ ಅರ್ಚಕರಾದ ಡಾ ಶಶಿಶೇಖರ್ ದೀಕ್ಷಿತ್, ಕಿನ ಮುಖ್ಯ ವ್ಯವಸ್ಥಾಪಕರಾದ ಜೀವನಮುಕ್ತ, ಚಾಮುಂಡಿಬೆಟ್ಟ ಶಾಖೆಯ ವ್ಯವಸ್ಥಾಪಕಿ ಸಿಂಧು ಮತ್ತು ಪ್ರಿಯಾಂತ್

ಧಾರ್ಮಿಕ ದತ್ತಿ ಇಲಾಖೆ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಚಾಮುಂಡಿಬೆಟ್ಟ ಶಾಖೆಯ ಸಹಯೋಗದಲ್ಲಿ ಚಾಮುಂಡೇಶ್ವರಿ ದೇವಿಯ ಭಕ್ತರು, ಕಾಣಿಕೆ ಸಲ್ಲಿಕೆಯನ್ನು ಡಿಜಿಟಲ್ ಪೇಮೆಂಟ್ ಮೂಲಕವೂ ಮಾಡಲು ಅನುಕೂಲವಾಗುವಂತೆ ಕ್ಯೂಆರ್ ಕೋಡ್ ಸಹಿತ ಇ-ಹುಂಡಿ ಯನ್ನು ಬಿಡುಗಡೆ ಕಾರ್ಯಕ್ರಮದ ಉದ್ಘಾಟನೆಯನ್ನು ದೇವಸ್ಥಾನದ ಆವರಣದಲ್ಲಿ ನೆರವೇರಿಸಿ ಅವರು ಮಾತನಾಡಿದರು.

ದೇವಸ್ಥಾನದ ಕ್ಯೂ ಆರ್ ಕೋಡ್ ಸಹಿತ ಇ ಹುಂಡಿ ಬಿಡುಗಡೆ

ಇದರ ಭದ್ರತಾ ಕ್ರಮಗಳ ಬಗ್ಗೆ, ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ಷ್ಮ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ. ಭಕ್ತರು ಕಾಣಿಕೆ ಸಲ್ಲಿಕೆಯ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಚಾಮುಂಡಿಬೆಟ್ಟ, ಮೈಸೂರು ಈ ಪೂರ್ಣ ಹೆಸರನ್ನು ಗಮನಿಸುವಂತೆ ವಿನಂತಿಸುತ್ತೇವೆ ಎಂದರು. ಅಲ್ಲದೆ ಇದರ ದುರುಪಯೋಗದ ಬಗ್ಗೆ ತಿಳಿದು ಬಂದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿಯೂ ಸಹ ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಸಿ.ಜಿ. ಕೃಷ್ಣ ಅವರು ಮಾತನಾಡಿ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ರಾಜ್ಯದ ಬಹುತೇಕ ಎ – ಗ್ರೇಡ್ ದೇವಸ್ಥಾನಗಳಲ್ಲಿ ಕ್ಯೂಆರ್ ಕೋಡ್ ಸಹಿತ’ ಇ – ಹುಂಡಿ ಸೌಲಭ್ಯವಿದ್ದು ಅದನ್ನು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿಯೂ ಆಳಸಿಕೊಳ್ಳುವಂತೆ ಇಲಾಖೆಯಿಂದ ಸೂಚಿಸಿದ್ದು, ಅದರಂತೆ ಇಂದು ಬಿಡುಗಡೆಗೊಳಿಸಲಾಗಿದೆ ಶ್ರೀ ದೇವಿಯ ಭಕ್ತಾದಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ನಂತರ ಹೆಚ್ಚುವರಿ ಜಿಲ್ಲಾಧಿಕಾರಿಗಳಾದ ಡಾ.ಬಿ.ಎಸ್. ಮಂಜುನಾಥಸ್ವಾಮಿಯವರು ಕರ್ನಾಟಕ ಗ್ರಾಮೀಣ ಬ್ಯಾಂಕ್ ಈ ದಸರಾ ಸಂದರ್ಭದಲ್ಲಿ ಆಚರಿಸುತ್ತಿರುವ ರೀಟೇಲ್ ಉತ್ಸವದ ತಾತ್ಕಾಲಿಕ ಮಾಹಿತಿ ಕೇಂದ್ರದ ಉದ್ಘಾಟನೆಯನ್ನು ಚಾಮುಂಡಿಬೆಟ್ಟ ಶಾಖೆಯ ಮುಂಭಾಗದಲ್ಲಿ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಮೈಸೂರು ಪ್ರಾದೇಶಿಕ ವ್ಯವಸ್ಥಾಪಕರಾದ ಕೆ.ಎಸ್.ವಿಶ್ವನಾಥ್ ಅವರು ಮಾತನಾಡಿ ಉತ್ಸವದ ಸಂದರ್ಭದಲ್ಲಿ ಗೃಹ ಸಾಲ, ವಾಹನ ಸಾಲ, ಅಡಮಾನ ಸಾಲಗಳಿಗೆ ಅನ್ವಯಿಸುವ ಬಡ್ತಿ ದರ ಮತ್ತು ಸೇವಾ ಶುಲ್ಕ ರಿಯಾಯಿತಿಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ  ದೇವಸ್ಥಾನದ  ಪ್ರಧಾನ ಅರ್ಚಕರಾದ ಡಾ ಶಶಿಶೇಖರ್ ದೀಕ್ಷಿತ್, ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರಾದ ಜೀವನಮುಕ್ತ, ಚಾಮುಂಡಿಬೆಟ್ಟ ಶಾಖೆಯ  ವ್ಯವಸ್ಥಾಪಕಿ ಸಿಂಧು ಮತ್ತು ಪ್ರಿಯಾಂತ್ ಅವರುಗಳು ಉಪಸ್ಥಿತರಿದ್ದರು.

 

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago