ಮಳೆನಾಡಾದ ಮೈಸೂರಿನಲ್ಲಿ ತೊರೆ, ಝರಿಗಳ ಪ್ರಕೃತಿ ಪುಳಕ
ಮೈಸೂರು: ಸಣ್ಣಸಣ್ಣ ಜಲಪಾತ, ತೊರೆಗಳಲ್ಲಿ ಹರಿಯುವ ನೀರನ್ನು ನೋಡಲು ಮೈಸೂರಿಗರು ಈಗ ಕೊಡಗು ಹಾಗೂ ಮಲೆನಾಡಿಗೆ ತೆರಳಬೇಕಿಲ್ಲ. ಸತತ ಮಳೆಯ ಕಾರಣ ಚಾಮುಂಡಿಬೆಟ್ಟದ ಹಲವೆಡೆ ಕೃತಕ ಜಲಪಾತಗಳು ಸೃಷ್ಟಿಯಾಗಿವೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದಾದ್ಯಂತ ಎಲ್ಲೆಲ್ಲೂ ನೀರಧಾರೆ ಕಂಡುಬರುತ್ತಿದೆ. ಇದೇ ವೇಳೆ ಅಧಿಕ ಮಳೆಯ ಕಾರಣದಿಂದ ಚಾಮುಂಡಿಬೆಟ್ಟದಲ್ಲಿ ಸಣ್ಣಸಣ್ಣ ತೊರೆಗಳಲ್ಲಿ ನೀರು ಹರಿಯುತ್ತಿದ್ದು, ನಗರದ ಜನರನ್ನು ತನ್ನತ್ತ ಸೆಳೆಯುತ್ತಿದೆ.
ಕಳೆದ ಒಂದು ವಾರದಿಂದ ಸತತವಾಗಿ ಮಳೆ ಸುರಿಯುತ್ತಿರುವ ಕಾರಣ ನಗರದಾದ್ಯಂತ ಹಳ್ಳಕೊಳ್ಳಗಳಲ್ಲಿ ನೀರು ತುಂಬಿ ತುಳುಕುತ್ತಿವೆ. ಕುಕ್ಕರಹಳ್ಳಿ, ಲಿಂಗಾಂಬುಧಿ, ಬೋಗಾದಿ, ಶ್ರೀರಾಂಪುರ, ಹೆಬ್ಬಾಳ ಸೇರಿದಂತೆ ಮೈಸೂರು ಸುತ್ತಮುತ್ತಲಿನ ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಅದರಂತೆ ಚಾಮುಂಡಿಬೆಟ್ಟದಲ್ಲಿ ಕೂಡ ಮಳೆಯ ಕಾರಣ ಸಣ್ಣಪುಟ್ಟ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.
ನೀರಿನ ಹರಿವು ಹೆಚ್ಚಾದ ಕಾರಣ ಬೆಟ್ಟದ ಮೇಲಿಂದ ನಾನಾ ಸ್ಥಳಗಳಲ್ಲಿ ನೀರು ಜಲಪಾತದಂತೆ ಧುಮ್ಮಿಕ್ಕುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ನಗರದ ಜನತೆ ಬೆಟ್ಟದ ಕಡೆಗೆ ಧಾವಿಸುತ್ತಿದ್ದು ಜಲಪಾತದ ದೃಶ್ಯಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುತ್ತಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…