ಜಿಲ್ಲೆಗಳು

ಚಾಮುಂಡಿ ಬೆಟ್ಟದಲ್ಲಿ ಮಿನಿ ಜಲಪಾತಗಳ ವೈಭವ…!

ಮಳೆನಾಡಾದ ಮೈಸೂರಿನಲ್ಲಿ ತೊರೆ, ಝರಿಗಳ ಪ್ರಕೃತಿ ಪುಳಕ

ಮೈಸೂರು: ಸಣ್ಣಸಣ್ಣ ಜಲಪಾತ, ತೊರೆಗಳಲ್ಲಿ ಹರಿಯುವ ನೀರನ್ನು ನೋಡಲು ಮೈಸೂರಿಗರು ಈಗ ಕೊಡಗು ಹಾಗೂ ಮಲೆನಾಡಿಗೆ ತೆರಳಬೇಕಿಲ್ಲ. ಸತತ ಮಳೆಯ ಕಾರಣ ಚಾಮುಂಡಿಬೆಟ್ಟದ ಹಲವೆಡೆ ಕೃತಕ ಜಲಪಾತಗಳು ಸೃಷ್ಟಿಯಾಗಿವೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದಾದ್ಯಂತ ಎಲ್ಲೆಲ್ಲೂ ನೀರಧಾರೆ ಕಂಡುಬರುತ್ತಿದೆ. ಇದೇ ವೇಳೆ ಅಧಿಕ ಮಳೆಯ ಕಾರಣದಿಂದ ಚಾಮುಂಡಿಬೆಟ್ಟದಲ್ಲಿ ಸಣ್ಣಸಣ್ಣ ತೊರೆಗಳಲ್ಲಿ ನೀರು ಹರಿಯುತ್ತಿದ್ದು, ನಗರದ ಜನರನ್ನು ತನ್ನತ್ತ ಸೆಳೆಯುತ್ತಿದೆ.

ಕಳೆದ ಒಂದು ವಾರದಿಂದ ಸತತವಾಗಿ ಮಳೆ ಸುರಿಯುತ್ತಿರುವ ಕಾರಣ ನಗರದಾದ್ಯಂತ ಹಳ್ಳಕೊಳ್ಳಗಳಲ್ಲಿ ನೀರು ತುಂಬಿ ತುಳುಕುತ್ತಿವೆ. ಕುಕ್ಕರಹಳ್ಳಿ, ಲಿಂಗಾಂಬುಧಿ, ಬೋಗಾದಿ, ಶ್ರೀರಾಂಪುರ, ಹೆಬ್ಬಾಳ ಸೇರಿದಂತೆ ಮೈಸೂರು ಸುತ್ತಮುತ್ತಲಿನ ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಅದರಂತೆ ಚಾಮುಂಡಿಬೆಟ್ಟದಲ್ಲಿ ಕೂಡ ಮಳೆಯ ಕಾರಣ ಸಣ್ಣಪುಟ್ಟ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.

ನೀರಿನ ಹರಿವು ಹೆಚ್ಚಾದ ಕಾರಣ ಬೆಟ್ಟದ ಮೇಲಿಂದ ನಾನಾ ಸ್ಥಳಗಳಲ್ಲಿ ನೀರು ಜಲಪಾತದಂತೆ ಧುಮ್ಮಿಕ್ಕುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ನಗರದ ಜನತೆ ಬೆಟ್ಟದ ಕಡೆಗೆ ಧಾವಿಸುತ್ತಿದ್ದು ಜಲಪಾತದ ದೃಶ್ಯಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುತ್ತಿದ್ದಾರೆ.
ಚಾಮುಂಡಿಬೆಟ್ಟಕ್ಕೆ ತೆರಳುವ ದಾರಿಯುದ್ದಕ್ಕೂ ಕಾಣಿಸುತ್ತಿರುವ ನೀರಿನ ತೊರೆಗಳನ್ನು ಕಂಡು ಭಕ್ತರು ಪುಳಕಿತರಾಗುತ್ತಿದ್ದಾರೆ. ಬೆಟ್ಟದ ಸುಮಾರು 10 ಸ್ಥಳಗಳಲ್ಲಿ ಮಿನಿ ಜಲಪಾತ ಕಂಡುಬಂದಿದೆ. ಬೆಟ್ಟದಿಂದ ಬರುವ ನೀರು ಕಾರಂಜಿ ಕೆರೆಯನ್ನು ಸೇರುತ್ತಿದೆ.
ನಂದಿ ಮಾರ್ಗದಲ್ಲಿ ಮತ್ತೆ ರಸ್ತೆ ಕುಸಿತ: ಮಳೆಯ ಕಾರಣದಿಂದ ಕೆಲ ತಿಂಗಳ ಹಿಂದೆ ನಂದಿ ವಿಗ್ರಹದ ರಸ್ತೆಯಲ್ಲಿ ರಸ್ತೆ ಕುಸಿತ ಕಂಡಿತ್ತು. ಅಲ್ಲಿ ಸಂಚಾರ ನಿಷೇಧಿಸಿದ ಜಿಲ್ಲಾಡಳಿತ ಕುಸಿದ ರಸ್ತೆಯನ್ನು ಭಾಾಗಶಃ ದುರಸ್ತಿಗೊಳಿಸಿತ್ತು. ಆದರೀಗ ತೀವ್ರ ಮಳೆಯ ಕಾರಣ ಅದೇ ರಸ್ತೆಯಲ್ಲಿ ಮತ್ತೆ ಎರಡು ಕಡೆ ಸಣ್ಣ ಪ್ರಮಾಣದಲ್ಲಿ ರಸ್ತೆ ಕುಸಿದಿದೆ. ಹೀಗಾಗಿ ಅಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

andolanait

Recent Posts

ಬಳ್ಳಾರಿ ಬ್ಯಾನರ್‌ ಗಲಾಟೆ | ಕೈ ಕಾರ್ಯಕರ್ತನಿಗೆ ಗುಂಡೇಟು ; ಸಾವು, ಉದ್ವಿಗ್ನ ವಾತಾವರಣ

ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…

7 hours ago

ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಗುಂಪುಗಳ ನಡುವೆ ಮಾರಾಮಾರಿ ; ಗಾಳಿಯಲ್ಲಿ ಗುಂಡು , ಓರ್ವನಿಗೆ ಗಾಯ

ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…

8 hours ago

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…

9 hours ago

ಮೈಸೂರಿನ ನೂತನ ಎಸ್‌ಪಿಯಾಗಿ ಅಧಿಕಾರಿ ಸ್ವೀಕರಿಸಿದ ಮಲ್ಲಿಕಾರ್ಜುನ್‌ ಬಾಲದಂಡಿ

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…

9 hours ago

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ…

9 hours ago

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

9 hours ago