ಜಿಲ್ಲೆಗಳು

ಚಾಮುಂಡಿ ಬೆಟ್ಟದಲ್ಲಿ ಮಿನಿ ಜಲಪಾತಗಳ ವೈಭವ…!

ಮಳೆನಾಡಾದ ಮೈಸೂರಿನಲ್ಲಿ ತೊರೆ, ಝರಿಗಳ ಪ್ರಕೃತಿ ಪುಳಕ

ಮೈಸೂರು: ಸಣ್ಣಸಣ್ಣ ಜಲಪಾತ, ತೊರೆಗಳಲ್ಲಿ ಹರಿಯುವ ನೀರನ್ನು ನೋಡಲು ಮೈಸೂರಿಗರು ಈಗ ಕೊಡಗು ಹಾಗೂ ಮಲೆನಾಡಿಗೆ ತೆರಳಬೇಕಿಲ್ಲ. ಸತತ ಮಳೆಯ ಕಾರಣ ಚಾಮುಂಡಿಬೆಟ್ಟದ ಹಲವೆಡೆ ಕೃತಕ ಜಲಪಾತಗಳು ಸೃಷ್ಟಿಯಾಗಿವೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದಾದ್ಯಂತ ಎಲ್ಲೆಲ್ಲೂ ನೀರಧಾರೆ ಕಂಡುಬರುತ್ತಿದೆ. ಇದೇ ವೇಳೆ ಅಧಿಕ ಮಳೆಯ ಕಾರಣದಿಂದ ಚಾಮುಂಡಿಬೆಟ್ಟದಲ್ಲಿ ಸಣ್ಣಸಣ್ಣ ತೊರೆಗಳಲ್ಲಿ ನೀರು ಹರಿಯುತ್ತಿದ್ದು, ನಗರದ ಜನರನ್ನು ತನ್ನತ್ತ ಸೆಳೆಯುತ್ತಿದೆ.

ಕಳೆದ ಒಂದು ವಾರದಿಂದ ಸತತವಾಗಿ ಮಳೆ ಸುರಿಯುತ್ತಿರುವ ಕಾರಣ ನಗರದಾದ್ಯಂತ ಹಳ್ಳಕೊಳ್ಳಗಳಲ್ಲಿ ನೀರು ತುಂಬಿ ತುಳುಕುತ್ತಿವೆ. ಕುಕ್ಕರಹಳ್ಳಿ, ಲಿಂಗಾಂಬುಧಿ, ಬೋಗಾದಿ, ಶ್ರೀರಾಂಪುರ, ಹೆಬ್ಬಾಳ ಸೇರಿದಂತೆ ಮೈಸೂರು ಸುತ್ತಮುತ್ತಲಿನ ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಅದರಂತೆ ಚಾಮುಂಡಿಬೆಟ್ಟದಲ್ಲಿ ಕೂಡ ಮಳೆಯ ಕಾರಣ ಸಣ್ಣಪುಟ್ಟ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.

ನೀರಿನ ಹರಿವು ಹೆಚ್ಚಾದ ಕಾರಣ ಬೆಟ್ಟದ ಮೇಲಿಂದ ನಾನಾ ಸ್ಥಳಗಳಲ್ಲಿ ನೀರು ಜಲಪಾತದಂತೆ ಧುಮ್ಮಿಕ್ಕುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ನಗರದ ಜನತೆ ಬೆಟ್ಟದ ಕಡೆಗೆ ಧಾವಿಸುತ್ತಿದ್ದು ಜಲಪಾತದ ದೃಶ್ಯಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುತ್ತಿದ್ದಾರೆ.
ಚಾಮುಂಡಿಬೆಟ್ಟಕ್ಕೆ ತೆರಳುವ ದಾರಿಯುದ್ದಕ್ಕೂ ಕಾಣಿಸುತ್ತಿರುವ ನೀರಿನ ತೊರೆಗಳನ್ನು ಕಂಡು ಭಕ್ತರು ಪುಳಕಿತರಾಗುತ್ತಿದ್ದಾರೆ. ಬೆಟ್ಟದ ಸುಮಾರು 10 ಸ್ಥಳಗಳಲ್ಲಿ ಮಿನಿ ಜಲಪಾತ ಕಂಡುಬಂದಿದೆ. ಬೆಟ್ಟದಿಂದ ಬರುವ ನೀರು ಕಾರಂಜಿ ಕೆರೆಯನ್ನು ಸೇರುತ್ತಿದೆ.
ನಂದಿ ಮಾರ್ಗದಲ್ಲಿ ಮತ್ತೆ ರಸ್ತೆ ಕುಸಿತ: ಮಳೆಯ ಕಾರಣದಿಂದ ಕೆಲ ತಿಂಗಳ ಹಿಂದೆ ನಂದಿ ವಿಗ್ರಹದ ರಸ್ತೆಯಲ್ಲಿ ರಸ್ತೆ ಕುಸಿತ ಕಂಡಿತ್ತು. ಅಲ್ಲಿ ಸಂಚಾರ ನಿಷೇಧಿಸಿದ ಜಿಲ್ಲಾಡಳಿತ ಕುಸಿದ ರಸ್ತೆಯನ್ನು ಭಾಾಗಶಃ ದುರಸ್ತಿಗೊಳಿಸಿತ್ತು. ಆದರೀಗ ತೀವ್ರ ಮಳೆಯ ಕಾರಣ ಅದೇ ರಸ್ತೆಯಲ್ಲಿ ಮತ್ತೆ ಎರಡು ಕಡೆ ಸಣ್ಣ ಪ್ರಮಾಣದಲ್ಲಿ ರಸ್ತೆ ಕುಸಿದಿದೆ. ಹೀಗಾಗಿ ಅಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

4 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

17 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

17 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

17 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

17 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

17 hours ago