ಜಿಲ್ಲೆಗಳು

ಚಾಮುಂಡಿ ಬೆಟ್ಟದಲ್ಲಿ ಮಿನಿ ಜಲಪಾತಗಳ ವೈಭವ…!

ಮಳೆನಾಡಾದ ಮೈಸೂರಿನಲ್ಲಿ ತೊರೆ, ಝರಿಗಳ ಪ್ರಕೃತಿ ಪುಳಕ

ಮೈಸೂರು: ಸಣ್ಣಸಣ್ಣ ಜಲಪಾತ, ತೊರೆಗಳಲ್ಲಿ ಹರಿಯುವ ನೀರನ್ನು ನೋಡಲು ಮೈಸೂರಿಗರು ಈಗ ಕೊಡಗು ಹಾಗೂ ಮಲೆನಾಡಿಗೆ ತೆರಳಬೇಕಿಲ್ಲ. ಸತತ ಮಳೆಯ ಕಾರಣ ಚಾಮುಂಡಿಬೆಟ್ಟದ ಹಲವೆಡೆ ಕೃತಕ ಜಲಪಾತಗಳು ಸೃಷ್ಟಿಯಾಗಿವೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದಾದ್ಯಂತ ಎಲ್ಲೆಲ್ಲೂ ನೀರಧಾರೆ ಕಂಡುಬರುತ್ತಿದೆ. ಇದೇ ವೇಳೆ ಅಧಿಕ ಮಳೆಯ ಕಾರಣದಿಂದ ಚಾಮುಂಡಿಬೆಟ್ಟದಲ್ಲಿ ಸಣ್ಣಸಣ್ಣ ತೊರೆಗಳಲ್ಲಿ ನೀರು ಹರಿಯುತ್ತಿದ್ದು, ನಗರದ ಜನರನ್ನು ತನ್ನತ್ತ ಸೆಳೆಯುತ್ತಿದೆ.

ಕಳೆದ ಒಂದು ವಾರದಿಂದ ಸತತವಾಗಿ ಮಳೆ ಸುರಿಯುತ್ತಿರುವ ಕಾರಣ ನಗರದಾದ್ಯಂತ ಹಳ್ಳಕೊಳ್ಳಗಳಲ್ಲಿ ನೀರು ತುಂಬಿ ತುಳುಕುತ್ತಿವೆ. ಕುಕ್ಕರಹಳ್ಳಿ, ಲಿಂಗಾಂಬುಧಿ, ಬೋಗಾದಿ, ಶ್ರೀರಾಂಪುರ, ಹೆಬ್ಬಾಳ ಸೇರಿದಂತೆ ಮೈಸೂರು ಸುತ್ತಮುತ್ತಲಿನ ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಅದರಂತೆ ಚಾಮುಂಡಿಬೆಟ್ಟದಲ್ಲಿ ಕೂಡ ಮಳೆಯ ಕಾರಣ ಸಣ್ಣಪುಟ್ಟ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.

ನೀರಿನ ಹರಿವು ಹೆಚ್ಚಾದ ಕಾರಣ ಬೆಟ್ಟದ ಮೇಲಿಂದ ನಾನಾ ಸ್ಥಳಗಳಲ್ಲಿ ನೀರು ಜಲಪಾತದಂತೆ ಧುಮ್ಮಿಕ್ಕುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ನಗರದ ಜನತೆ ಬೆಟ್ಟದ ಕಡೆಗೆ ಧಾವಿಸುತ್ತಿದ್ದು ಜಲಪಾತದ ದೃಶ್ಯಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುತ್ತಿದ್ದಾರೆ.
ಚಾಮುಂಡಿಬೆಟ್ಟಕ್ಕೆ ತೆರಳುವ ದಾರಿಯುದ್ದಕ್ಕೂ ಕಾಣಿಸುತ್ತಿರುವ ನೀರಿನ ತೊರೆಗಳನ್ನು ಕಂಡು ಭಕ್ತರು ಪುಳಕಿತರಾಗುತ್ತಿದ್ದಾರೆ. ಬೆಟ್ಟದ ಸುಮಾರು 10 ಸ್ಥಳಗಳಲ್ಲಿ ಮಿನಿ ಜಲಪಾತ ಕಂಡುಬಂದಿದೆ. ಬೆಟ್ಟದಿಂದ ಬರುವ ನೀರು ಕಾರಂಜಿ ಕೆರೆಯನ್ನು ಸೇರುತ್ತಿದೆ.
ನಂದಿ ಮಾರ್ಗದಲ್ಲಿ ಮತ್ತೆ ರಸ್ತೆ ಕುಸಿತ: ಮಳೆಯ ಕಾರಣದಿಂದ ಕೆಲ ತಿಂಗಳ ಹಿಂದೆ ನಂದಿ ವಿಗ್ರಹದ ರಸ್ತೆಯಲ್ಲಿ ರಸ್ತೆ ಕುಸಿತ ಕಂಡಿತ್ತು. ಅಲ್ಲಿ ಸಂಚಾರ ನಿಷೇಧಿಸಿದ ಜಿಲ್ಲಾಡಳಿತ ಕುಸಿದ ರಸ್ತೆಯನ್ನು ಭಾಾಗಶಃ ದುರಸ್ತಿಗೊಳಿಸಿತ್ತು. ಆದರೀಗ ತೀವ್ರ ಮಳೆಯ ಕಾರಣ ಅದೇ ರಸ್ತೆಯಲ್ಲಿ ಮತ್ತೆ ಎರಡು ಕಡೆ ಸಣ್ಣ ಪ್ರಮಾಣದಲ್ಲಿ ರಸ್ತೆ ಕುಸಿದಿದೆ. ಹೀಗಾಗಿ ಅಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

andolanait

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

9 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

9 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

9 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

9 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

9 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

9 hours ago