ಮಳೆನಾಡಾದ ಮೈಸೂರಿನಲ್ಲಿ ತೊರೆ, ಝರಿಗಳ ಪ್ರಕೃತಿ ಪುಳಕ
ಮೈಸೂರು: ಸಣ್ಣಸಣ್ಣ ಜಲಪಾತ, ತೊರೆಗಳಲ್ಲಿ ಹರಿಯುವ ನೀರನ್ನು ನೋಡಲು ಮೈಸೂರಿಗರು ಈಗ ಕೊಡಗು ಹಾಗೂ ಮಲೆನಾಡಿಗೆ ತೆರಳಬೇಕಿಲ್ಲ. ಸತತ ಮಳೆಯ ಕಾರಣ ಚಾಮುಂಡಿಬೆಟ್ಟದ ಹಲವೆಡೆ ಕೃತಕ ಜಲಪಾತಗಳು ಸೃಷ್ಟಿಯಾಗಿವೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದಾದ್ಯಂತ ಎಲ್ಲೆಲ್ಲೂ ನೀರಧಾರೆ ಕಂಡುಬರುತ್ತಿದೆ. ಇದೇ ವೇಳೆ ಅಧಿಕ ಮಳೆಯ ಕಾರಣದಿಂದ ಚಾಮುಂಡಿಬೆಟ್ಟದಲ್ಲಿ ಸಣ್ಣಸಣ್ಣ ತೊರೆಗಳಲ್ಲಿ ನೀರು ಹರಿಯುತ್ತಿದ್ದು, ನಗರದ ಜನರನ್ನು ತನ್ನತ್ತ ಸೆಳೆಯುತ್ತಿದೆ.
ಕಳೆದ ಒಂದು ವಾರದಿಂದ ಸತತವಾಗಿ ಮಳೆ ಸುರಿಯುತ್ತಿರುವ ಕಾರಣ ನಗರದಾದ್ಯಂತ ಹಳ್ಳಕೊಳ್ಳಗಳಲ್ಲಿ ನೀರು ತುಂಬಿ ತುಳುಕುತ್ತಿವೆ. ಕುಕ್ಕರಹಳ್ಳಿ, ಲಿಂಗಾಂಬುಧಿ, ಬೋಗಾದಿ, ಶ್ರೀರಾಂಪುರ, ಹೆಬ್ಬಾಳ ಸೇರಿದಂತೆ ಮೈಸೂರು ಸುತ್ತಮುತ್ತಲಿನ ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಅದರಂತೆ ಚಾಮುಂಡಿಬೆಟ್ಟದಲ್ಲಿ ಕೂಡ ಮಳೆಯ ಕಾರಣ ಸಣ್ಣಪುಟ್ಟ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.
ನೀರಿನ ಹರಿವು ಹೆಚ್ಚಾದ ಕಾರಣ ಬೆಟ್ಟದ ಮೇಲಿಂದ ನಾನಾ ಸ್ಥಳಗಳಲ್ಲಿ ನೀರು ಜಲಪಾತದಂತೆ ಧುಮ್ಮಿಕ್ಕುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ನಗರದ ಜನತೆ ಬೆಟ್ಟದ ಕಡೆಗೆ ಧಾವಿಸುತ್ತಿದ್ದು ಜಲಪಾತದ ದೃಶ್ಯಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುತ್ತಿದ್ದಾರೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…