ಜಿಲ್ಲೆಗಳು

ಚಾಮುಂಡಿ ಬೆಟ್ಟದಲ್ಲಿ ಮಿನಿ ಜಲಪಾತಗಳ ವೈಭವ…!

ಮಳೆನಾಡಾದ ಮೈಸೂರಿನಲ್ಲಿ ತೊರೆ, ಝರಿಗಳ ಪ್ರಕೃತಿ ಪುಳಕ

ಮೈಸೂರು: ಸಣ್ಣಸಣ್ಣ ಜಲಪಾತ, ತೊರೆಗಳಲ್ಲಿ ಹರಿಯುವ ನೀರನ್ನು ನೋಡಲು ಮೈಸೂರಿಗರು ಈಗ ಕೊಡಗು ಹಾಗೂ ಮಲೆನಾಡಿಗೆ ತೆರಳಬೇಕಿಲ್ಲ. ಸತತ ಮಳೆಯ ಕಾರಣ ಚಾಮುಂಡಿಬೆಟ್ಟದ ಹಲವೆಡೆ ಕೃತಕ ಜಲಪಾತಗಳು ಸೃಷ್ಟಿಯಾಗಿವೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದಾದ್ಯಂತ ಎಲ್ಲೆಲ್ಲೂ ನೀರಧಾರೆ ಕಂಡುಬರುತ್ತಿದೆ. ಇದೇ ವೇಳೆ ಅಧಿಕ ಮಳೆಯ ಕಾರಣದಿಂದ ಚಾಮುಂಡಿಬೆಟ್ಟದಲ್ಲಿ ಸಣ್ಣಸಣ್ಣ ತೊರೆಗಳಲ್ಲಿ ನೀರು ಹರಿಯುತ್ತಿದ್ದು, ನಗರದ ಜನರನ್ನು ತನ್ನತ್ತ ಸೆಳೆಯುತ್ತಿದೆ.

ಕಳೆದ ಒಂದು ವಾರದಿಂದ ಸತತವಾಗಿ ಮಳೆ ಸುರಿಯುತ್ತಿರುವ ಕಾರಣ ನಗರದಾದ್ಯಂತ ಹಳ್ಳಕೊಳ್ಳಗಳಲ್ಲಿ ನೀರು ತುಂಬಿ ತುಳುಕುತ್ತಿವೆ. ಕುಕ್ಕರಹಳ್ಳಿ, ಲಿಂಗಾಂಬುಧಿ, ಬೋಗಾದಿ, ಶ್ರೀರಾಂಪುರ, ಹೆಬ್ಬಾಳ ಸೇರಿದಂತೆ ಮೈಸೂರು ಸುತ್ತಮುತ್ತಲಿನ ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಅದರಂತೆ ಚಾಮುಂಡಿಬೆಟ್ಟದಲ್ಲಿ ಕೂಡ ಮಳೆಯ ಕಾರಣ ಸಣ್ಣಪುಟ್ಟ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.

ನೀರಿನ ಹರಿವು ಹೆಚ್ಚಾದ ಕಾರಣ ಬೆಟ್ಟದ ಮೇಲಿಂದ ನಾನಾ ಸ್ಥಳಗಳಲ್ಲಿ ನೀರು ಜಲಪಾತದಂತೆ ಧುಮ್ಮಿಕ್ಕುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ನಗರದ ಜನತೆ ಬೆಟ್ಟದ ಕಡೆಗೆ ಧಾವಿಸುತ್ತಿದ್ದು ಜಲಪಾತದ ದೃಶ್ಯಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುತ್ತಿದ್ದಾರೆ.
ಚಾಮುಂಡಿಬೆಟ್ಟಕ್ಕೆ ತೆರಳುವ ದಾರಿಯುದ್ದಕ್ಕೂ ಕಾಣಿಸುತ್ತಿರುವ ನೀರಿನ ತೊರೆಗಳನ್ನು ಕಂಡು ಭಕ್ತರು ಪುಳಕಿತರಾಗುತ್ತಿದ್ದಾರೆ. ಬೆಟ್ಟದ ಸುಮಾರು 10 ಸ್ಥಳಗಳಲ್ಲಿ ಮಿನಿ ಜಲಪಾತ ಕಂಡುಬಂದಿದೆ. ಬೆಟ್ಟದಿಂದ ಬರುವ ನೀರು ಕಾರಂಜಿ ಕೆರೆಯನ್ನು ಸೇರುತ್ತಿದೆ.
ನಂದಿ ಮಾರ್ಗದಲ್ಲಿ ಮತ್ತೆ ರಸ್ತೆ ಕುಸಿತ: ಮಳೆಯ ಕಾರಣದಿಂದ ಕೆಲ ತಿಂಗಳ ಹಿಂದೆ ನಂದಿ ವಿಗ್ರಹದ ರಸ್ತೆಯಲ್ಲಿ ರಸ್ತೆ ಕುಸಿತ ಕಂಡಿತ್ತು. ಅಲ್ಲಿ ಸಂಚಾರ ನಿಷೇಧಿಸಿದ ಜಿಲ್ಲಾಡಳಿತ ಕುಸಿದ ರಸ್ತೆಯನ್ನು ಭಾಾಗಶಃ ದುರಸ್ತಿಗೊಳಿಸಿತ್ತು. ಆದರೀಗ ತೀವ್ರ ಮಳೆಯ ಕಾರಣ ಅದೇ ರಸ್ತೆಯಲ್ಲಿ ಮತ್ತೆ ಎರಡು ಕಡೆ ಸಣ್ಣ ಪ್ರಮಾಣದಲ್ಲಿ ರಸ್ತೆ ಕುಸಿದಿದೆ. ಹೀಗಾಗಿ ಅಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

andolanait

Recent Posts

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

1 hour ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

4 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

6 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

6 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

7 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

11 hours ago