ಮಳೆನಾಡಾದ ಮೈಸೂರಿನಲ್ಲಿ ತೊರೆ, ಝರಿಗಳ ಪ್ರಕೃತಿ ಪುಳಕ
ಮೈಸೂರು: ಸಣ್ಣಸಣ್ಣ ಜಲಪಾತ, ತೊರೆಗಳಲ್ಲಿ ಹರಿಯುವ ನೀರನ್ನು ನೋಡಲು ಮೈಸೂರಿಗರು ಈಗ ಕೊಡಗು ಹಾಗೂ ಮಲೆನಾಡಿಗೆ ತೆರಳಬೇಕಿಲ್ಲ. ಸತತ ಮಳೆಯ ಕಾರಣ ಚಾಮುಂಡಿಬೆಟ್ಟದ ಹಲವೆಡೆ ಕೃತಕ ಜಲಪಾತಗಳು ಸೃಷ್ಟಿಯಾಗಿವೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದಾದ್ಯಂತ ಎಲ್ಲೆಲ್ಲೂ ನೀರಧಾರೆ ಕಂಡುಬರುತ್ತಿದೆ. ಇದೇ ವೇಳೆ ಅಧಿಕ ಮಳೆಯ ಕಾರಣದಿಂದ ಚಾಮುಂಡಿಬೆಟ್ಟದಲ್ಲಿ ಸಣ್ಣಸಣ್ಣ ತೊರೆಗಳಲ್ಲಿ ನೀರು ಹರಿಯುತ್ತಿದ್ದು, ನಗರದ ಜನರನ್ನು ತನ್ನತ್ತ ಸೆಳೆಯುತ್ತಿದೆ.
ಕಳೆದ ಒಂದು ವಾರದಿಂದ ಸತತವಾಗಿ ಮಳೆ ಸುರಿಯುತ್ತಿರುವ ಕಾರಣ ನಗರದಾದ್ಯಂತ ಹಳ್ಳಕೊಳ್ಳಗಳಲ್ಲಿ ನೀರು ತುಂಬಿ ತುಳುಕುತ್ತಿವೆ. ಕುಕ್ಕರಹಳ್ಳಿ, ಲಿಂಗಾಂಬುಧಿ, ಬೋಗಾದಿ, ಶ್ರೀರಾಂಪುರ, ಹೆಬ್ಬಾಳ ಸೇರಿದಂತೆ ಮೈಸೂರು ಸುತ್ತಮುತ್ತಲಿನ ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಅದರಂತೆ ಚಾಮುಂಡಿಬೆಟ್ಟದಲ್ಲಿ ಕೂಡ ಮಳೆಯ ಕಾರಣ ಸಣ್ಣಪುಟ್ಟ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.
ನೀರಿನ ಹರಿವು ಹೆಚ್ಚಾದ ಕಾರಣ ಬೆಟ್ಟದ ಮೇಲಿಂದ ನಾನಾ ಸ್ಥಳಗಳಲ್ಲಿ ನೀರು ಜಲಪಾತದಂತೆ ಧುಮ್ಮಿಕ್ಕುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ನಗರದ ಜನತೆ ಬೆಟ್ಟದ ಕಡೆಗೆ ಧಾವಿಸುತ್ತಿದ್ದು ಜಲಪಾತದ ದೃಶ್ಯಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುತ್ತಿದ್ದಾರೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…