ಮೈಸೂರು : ನಗರದ ಚಾಮುಂಡಿ ಬೆಟ್ಟದಲ್ಲಿಂದು ಚಾಮುಂಡೇಶ್ವರಿ ಮಹಾರಥೋತ್ಸವವು ಅದ್ದೂರಿಯಾಗಿ ನಡೆಯಿತು. ಮಹಾರಥೋತ್ಸವಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಲನೆ ನೀಡಿದರು.
ಜಂಬೂಸವಾರಿ ಬಳಿಕ ಮೊದಲ ಹುಣ್ಣಿಮೆಯಲ್ಲಿ ಬೆಟ್ಟದಲ್ಲಿ ಜರುಗುವ ಮಹಾರಥೋತ್ಸವವು ಇಂದು ಬೆಳಿಗ್ಗೆ 7.50 ರಿಂದ 8.10ರೊಳಗೆ ಸಲ್ಲುವ ಶುಭ ಘಳಿಗೆಯಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಹಾರಥೋತ್ಸವದಲ್ಲಿ ರಾಜಮಾತೆ ಪ್ರಮೋದದೇವಿ ಒಡೆಯರ್, ಮಹಾರಾಜ ಯಧುವೀರ್, ತ್ರಿಷಿಕಾ ಒಡೆಯರ್ ಸೇರಿದಂತೆ ಸಾವಿರಾರು ಭಕ್ತರು, ಕಲಾತಂಡಗಳು ಭಾಗವಹಿಸಿದ್ದವು, ಸಿಎಆರ್ ಸಿಬ್ಬಂದಿ ಕುಶಾಲತೋಪ ಸಿಡಿಸಿ ಗೌರವ ಸಲ್ಲಿಸಿದರು.
ಇದರ ಜೊತೆಗೆ ಇಂದಿನಿಂದ ಅ. 14 ರವರೆಗೆ ನಾಡ ದೇವತೆಗೆ ವಿಶೇಷ ಪೂಜೆ ,ಹೋಮ ಹವನಗಳು ನಡೆಯಲಿವೆ.
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…
ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…