ಜಿಲ್ಲೆಗಳು

ಚಂದ್ರಗ್ರಹಣ: ಚಾಮುಂಡಿಬೆಟ್ಟ ಸೇರಿ ಹಲವು ದೇಗುಲಗಳಲ್ಲಿ ದರ್ಶನ ಸಮಯ ಬದಲು

ಮೈಸೂರು: ಈ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ನವೆಂಬರ್ 8, 2022 ರಂದು ಸಂಭವಿಸಲಿದೆ. ಚಂದ್ರಗ್ರಹಣ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟ ಸೇರಿದಂತೆ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಪೂಜಾ, ದರ್ಶನ ಸಮಯ ಹಾಗೂ ಭೋಜನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳು ಈ ಬಗ್ಗೆ ಪ್ರಕಟಣೆ ಹೊರಡಿಸಿವೆ.

ಗ್ರಹಣ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ
ನವೆಂಬರ್ 8ರ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಮಧ್ಯಾಹ್ನ1 ಗಂಟೆಯಿಂದ ಚಾಮುಂಡೇಶ್ವರಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ದೇಗುಲದ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಂದ್ರಗ್ರಹಣದ ಸ್ಪರ್ಶ ಕಾಲ ಹಾಗೂ ಮೋಕ್ಷ ಕಾಲಗಳಲ್ಲಿ ವಿಶೇಷ ಪೂಜೆಗಳು ನಡೆಯಲಿದ್ದು, ಚಂದ್ರಗ್ರಹಣದ ನಂತರ ದೇವಾಲಯದ ಗರ್ಭ ಗುಡಿಯ ಸ್ವಚ್ಛತೆ ನಡೆಯಲಿದೆ. ಈ ಬಳಿಕ ಗ್ರಹಣದ ನಂತರ ಅಭಿಷೇಕ ಮತ್ತು ಮಹಾ ಮಂಗಳಾರತಿ ನಡೆಯಲಿದ್ದು, ಈ ಸಮಯದಲ್ಲಿ ಭಕ್ತರ ಭೇಟಿಯನ್ನು ನಿರ್ಬಂಧಿಸಲಾಗಿದೆ.
ಆದರೆ ಚಂದ್ರಗ್ರಹಣದ ವೇಳೆ ಮಲೆಮಹದೇಶ್ಚರ ಬೆಟ್ಟದಲ್ಲಿ ದೇಗುಲ ಬಂದ್ ಮಾಡುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಭಕ್ತರಿಗೆ ಎಂದಿನಂತೆ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಎಂದಿನಂತೆ ಪ್ರಸಾದ ವ್ಯವಸ್ಥೆಯು ಇರಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಧರ್ಮಸ್ಥಳ
ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಆಗಲಿದೆ. ಮಧ್ಯಾಹ್ನ 1:30ರಿಂದ ರಾತ್ರಿ 7ರತನಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಧ್ಯಾಹ್ನ 1:30ರ ವರೆಗೆ ಮಾತ್ರ ಭೋಜನ ವ್ಯವಸ್ಥೆ ಇರಲಿದೆ. ಬಳಿಕ ರಾತ್ರಿ 7 ಗಂಟೆಯ ನಂತರ ಭೋಜನ ವ್ಯವಸ್ಥೆ ಮುಂದುವರಿಯಲಿದೆ ಎಂದು ದೇವಸ್ಥಾನ ಪ್ರಕಟಣೆ ತಿಳಿಸಿದೆ.

ಕುಕ್ಕೆಯಲ್ಲಿ ದೇವರ ಸೇವೆಗಿಲ್ಲ ಅವಕಾಶ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್ 8ರಂದು ಯಾವುದೇ ಪೂಜಾ ಕಾರ್ಯಕ್ರಮ ನೆರವೇರುವುದಿಲ್ಲ. ಅಲ್ಲದೇ ಭೋಜನ ಪ್ರಸಾದ ವಿತರಣೆ ಕೂಡ ಇರುವುದಿಲ್ಲ. ಬೆಳಗ್ಗೆ 9 ರಿಂದ 11:30ರವರೆಗೆ ಭಕ್ತರಿಗೆ ದೇವರ ದರ್ಶನ ಅವಕಾಶವನ್ನು ಕಲ್ಪಿಸಲಾಗಿದೆ. ಮಧ್ನಾಹ್ನ 2:39ರಿಂದ ಸಂಜೆ 6:19 ರ ತನಕ ಮತ್ತು ರಾತ್ರಿ 7:30 ರಿಂದ 9 ರತನಕ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಧ್ಯಕಾಲ ಸಂಜೆ 4:29ಕ್ಕೆ ಗ್ರಹಣದ ವಿಶೇಷ ಪೂಜೆ
ಇನ್ನು ಕಟೀಲು ದೇವಸ್ಥಾನದಲ್ಲೂ ಗ್ರಹಣದ ದಿನ ದೇವರ ಪೂಜೆಯ ಸಮಯ ಬದಲಾವಣೆ ಆಗಲಿದೆ. ನವೆಂಬರ್ 8ರಂದು ಬೆಳಗ್ಗೆ 9:30ಕ್ಕೆ ದೇವರಿಗೆ ಪೂಜೆ ನಡೆಯುತ್ತದೆ. ಮಧ್ಯಾಹ್ನ ಭೋಜನ ಇರುವುದಿಲ್ಲ. ಬೆಳಗ್ಗೆ 11:30ರ ತನಕ ಮಾತ್ರ ಫಲಾಹಾರ ಇರುತ್ತದೆ. ರಾತ್ರಿ 8 ಗಂಟೆಗೆ ಪೂಜೆಗಳು ನಡೆಯಲಿದ್ದು, ಭೋಜನವೂ ಇರುತ್ತದೆ. ಗ್ರಹಣ ಕಾಲದಲ್ಲಿ ದೇಗುಲ ತೆರೆದಿರುತ್ತದೆ. ಗ್ರಹಣ ಮಧ್ಯ ಕಾಲದವರೆಗೆ ದೇವರಿಗೆ ಅಭಿಷೇಕ ಮಾಡಲಾಗುತ್ತದೆ. ಮಧ್ಯಕಾಲ ಸಂಜೆ 4:29ಕ್ಕೆ ಗ್ರಹಣದ ವಿಶೇಷ ಪೂಜೆ ಇದೆ ಎಂದು ದೇವಸ್ಥಾನದ ಆಡಳಿತ ತಿಳಿಸಿದೆ.

ಬೆಂಗಳೂರಿನಲ್ಲಿ ಗ್ರಹಣ ದರ್ಶನ ಯಾವಾಗ..?
ಈ ಬಾರಿಯ ಚಂದ್ರಗ್ರಹಣವನ್ನು ವೀಕ್ಷಿಸಲು ಯಾವುದೇ ವಿಶೇಷ ಸಲಕರಣೆಗಳ ಅಗತ್ಯವಿಲ್ಲ. ದೂರದರ್ಶಕವು ನೋಟ ಮತ್ತು ಕೆಂಪು ಬಣ್ಣವನ್ನು ಹೆಚ್ಚಿಸುತ್ತದೆ. ಬೆಂಗಳೂರಿನಲ್ಲಿ ಸಂಜೆ 5:57ಕ್ಕೆ ಚಂದ್ರಗ್ರಹಣ ಗೋಚರಿಸಲಿದೆ.

andolanait

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

3 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

3 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

3 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

3 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

4 hours ago