ಜಿಲ್ಲೆಗಳು

ಚಂದ್ರಗ್ರಹಣ: ಚಾಮುಂಡಿಬೆಟ್ಟ ಸೇರಿ ಹಲವು ದೇಗುಲಗಳಲ್ಲಿ ದರ್ಶನ ಸಮಯ ಬದಲು

ಮೈಸೂರು: ಈ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ನವೆಂಬರ್ 8, 2022 ರಂದು ಸಂಭವಿಸಲಿದೆ. ಚಂದ್ರಗ್ರಹಣ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟ ಸೇರಿದಂತೆ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಪೂಜಾ, ದರ್ಶನ ಸಮಯ ಹಾಗೂ ಭೋಜನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳು ಈ ಬಗ್ಗೆ ಪ್ರಕಟಣೆ ಹೊರಡಿಸಿವೆ.

ಗ್ರಹಣ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ
ನವೆಂಬರ್ 8ರ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಮಧ್ಯಾಹ್ನ1 ಗಂಟೆಯಿಂದ ಚಾಮುಂಡೇಶ್ವರಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ದೇಗುಲದ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಂದ್ರಗ್ರಹಣದ ಸ್ಪರ್ಶ ಕಾಲ ಹಾಗೂ ಮೋಕ್ಷ ಕಾಲಗಳಲ್ಲಿ ವಿಶೇಷ ಪೂಜೆಗಳು ನಡೆಯಲಿದ್ದು, ಚಂದ್ರಗ್ರಹಣದ ನಂತರ ದೇವಾಲಯದ ಗರ್ಭ ಗುಡಿಯ ಸ್ವಚ್ಛತೆ ನಡೆಯಲಿದೆ. ಈ ಬಳಿಕ ಗ್ರಹಣದ ನಂತರ ಅಭಿಷೇಕ ಮತ್ತು ಮಹಾ ಮಂಗಳಾರತಿ ನಡೆಯಲಿದ್ದು, ಈ ಸಮಯದಲ್ಲಿ ಭಕ್ತರ ಭೇಟಿಯನ್ನು ನಿರ್ಬಂಧಿಸಲಾಗಿದೆ.
ಆದರೆ ಚಂದ್ರಗ್ರಹಣದ ವೇಳೆ ಮಲೆಮಹದೇಶ್ಚರ ಬೆಟ್ಟದಲ್ಲಿ ದೇಗುಲ ಬಂದ್ ಮಾಡುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಭಕ್ತರಿಗೆ ಎಂದಿನಂತೆ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಎಂದಿನಂತೆ ಪ್ರಸಾದ ವ್ಯವಸ್ಥೆಯು ಇರಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಧರ್ಮಸ್ಥಳ
ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಆಗಲಿದೆ. ಮಧ್ಯಾಹ್ನ 1:30ರಿಂದ ರಾತ್ರಿ 7ರತನಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಧ್ಯಾಹ್ನ 1:30ರ ವರೆಗೆ ಮಾತ್ರ ಭೋಜನ ವ್ಯವಸ್ಥೆ ಇರಲಿದೆ. ಬಳಿಕ ರಾತ್ರಿ 7 ಗಂಟೆಯ ನಂತರ ಭೋಜನ ವ್ಯವಸ್ಥೆ ಮುಂದುವರಿಯಲಿದೆ ಎಂದು ದೇವಸ್ಥಾನ ಪ್ರಕಟಣೆ ತಿಳಿಸಿದೆ.

ಕುಕ್ಕೆಯಲ್ಲಿ ದೇವರ ಸೇವೆಗಿಲ್ಲ ಅವಕಾಶ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್ 8ರಂದು ಯಾವುದೇ ಪೂಜಾ ಕಾರ್ಯಕ್ರಮ ನೆರವೇರುವುದಿಲ್ಲ. ಅಲ್ಲದೇ ಭೋಜನ ಪ್ರಸಾದ ವಿತರಣೆ ಕೂಡ ಇರುವುದಿಲ್ಲ. ಬೆಳಗ್ಗೆ 9 ರಿಂದ 11:30ರವರೆಗೆ ಭಕ್ತರಿಗೆ ದೇವರ ದರ್ಶನ ಅವಕಾಶವನ್ನು ಕಲ್ಪಿಸಲಾಗಿದೆ. ಮಧ್ನಾಹ್ನ 2:39ರಿಂದ ಸಂಜೆ 6:19 ರ ತನಕ ಮತ್ತು ರಾತ್ರಿ 7:30 ರಿಂದ 9 ರತನಕ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಧ್ಯಕಾಲ ಸಂಜೆ 4:29ಕ್ಕೆ ಗ್ರಹಣದ ವಿಶೇಷ ಪೂಜೆ
ಇನ್ನು ಕಟೀಲು ದೇವಸ್ಥಾನದಲ್ಲೂ ಗ್ರಹಣದ ದಿನ ದೇವರ ಪೂಜೆಯ ಸಮಯ ಬದಲಾವಣೆ ಆಗಲಿದೆ. ನವೆಂಬರ್ 8ರಂದು ಬೆಳಗ್ಗೆ 9:30ಕ್ಕೆ ದೇವರಿಗೆ ಪೂಜೆ ನಡೆಯುತ್ತದೆ. ಮಧ್ಯಾಹ್ನ ಭೋಜನ ಇರುವುದಿಲ್ಲ. ಬೆಳಗ್ಗೆ 11:30ರ ತನಕ ಮಾತ್ರ ಫಲಾಹಾರ ಇರುತ್ತದೆ. ರಾತ್ರಿ 8 ಗಂಟೆಗೆ ಪೂಜೆಗಳು ನಡೆಯಲಿದ್ದು, ಭೋಜನವೂ ಇರುತ್ತದೆ. ಗ್ರಹಣ ಕಾಲದಲ್ಲಿ ದೇಗುಲ ತೆರೆದಿರುತ್ತದೆ. ಗ್ರಹಣ ಮಧ್ಯ ಕಾಲದವರೆಗೆ ದೇವರಿಗೆ ಅಭಿಷೇಕ ಮಾಡಲಾಗುತ್ತದೆ. ಮಧ್ಯಕಾಲ ಸಂಜೆ 4:29ಕ್ಕೆ ಗ್ರಹಣದ ವಿಶೇಷ ಪೂಜೆ ಇದೆ ಎಂದು ದೇವಸ್ಥಾನದ ಆಡಳಿತ ತಿಳಿಸಿದೆ.

ಬೆಂಗಳೂರಿನಲ್ಲಿ ಗ್ರಹಣ ದರ್ಶನ ಯಾವಾಗ..?
ಈ ಬಾರಿಯ ಚಂದ್ರಗ್ರಹಣವನ್ನು ವೀಕ್ಷಿಸಲು ಯಾವುದೇ ವಿಶೇಷ ಸಲಕರಣೆಗಳ ಅಗತ್ಯವಿಲ್ಲ. ದೂರದರ್ಶಕವು ನೋಟ ಮತ್ತು ಕೆಂಪು ಬಣ್ಣವನ್ನು ಹೆಚ್ಚಿಸುತ್ತದೆ. ಬೆಂಗಳೂರಿನಲ್ಲಿ ಸಂಜೆ 5:57ಕ್ಕೆ ಚಂದ್ರಗ್ರಹಣ ಗೋಚರಿಸಲಿದೆ.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

5 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

19 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

19 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

19 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

19 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

19 hours ago