Mysore
33
few clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

ಚಾಮುಂಡಿಬೆಟ್ಟಕ್ಕೆ ಟೀಂ ಇಂಡಿಯಾ ಆಟಗಾರ ಕೆ.ಎಲ್ ರಾಹುಲ್ ಭೇಟಿ

ಮೈಸೂರು: ಟೀಂ ಇಂಡಿಯಾ ಆಟಗಾರ ಕೆ.ಎಲ್ ರಾಹುಲ್  ಮೈಸೂರಿಗೆ ಆಗಮಿಸಿ ಚಾಮುಂಡೇಶ್ವರಿ  ದರ್ಶನ ಪಡೆದಿದ್ದಾರೆ.

ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ಬಿಡುವು ಪಡೆದಿರುವ ರಾಹುಲ್ ತಮ್ಮ ಮದುವೆ ತಯಾರಿಯಲ್ಲಿದ್ದಾರೆ. ಈಗಾಗಲೇ ನಟಿ ಆಥಿಯಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿರುವ ರಾಹುಲ್ ಇಂದು ಮೈಸೂರಿಗೆ ಆಗಮಿಸಿ ತಾಯಿ ಚಾಮುಂಡಿ ದೇವಿ ದರ್ಶನ ಪಡೆದು ಹೋಗಿದ್ದಾರೆ.

ಸದ್ಯ ಈ ತಿಂಗಳಾಂತ್ಯದಲ್ಲಿ ರಾಹುಲ್, ಆಥಿಯಾ ಶೆಟ್ಟಿ ಜೋಡಿ ಸಪ್ತಪದಿ ತುಳಿಯಲಿದೆ ಎಂದು ಆಪ್ತ ಮೂಲಗಳಿಂದ ಕೇಳಿ ಬರುತ್ತಿದೆ. ಹಾಗಾಗಿ ರಾಹುಲ್ ಕರ್ನಾಟಕದ ಪ್ರಸಿದ್ಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!