ಚಾಮರಾಜನಗರ: ಚೆಲುವ ಚಾಮರಾಜನಗರ ರಾಯಭಾರಿಯಾಗಲು ಅವಕಾಶ ದೊರೆತರೆ ನಿಭಾಯಿಸುವದಾಗಿ ಎಂದು ನಟ ರಾಘವೇಂದ್ರ ರಾಜಕುಮಾರ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ವರನಟ ಡಾ.ರಾಜಕುಮಾರ್ ಜಿಲ್ಲಾ ಕಲಾ ಮಂದಿರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ದಿ.ಪುನೀತ್ ರಾಜಕುಮಾರ್ ಸ್ಮರಣಾರ್ಥ ಆಯೋಜಿಸಿದ್ದ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಪುನೀತ್ ಚೆಲುವ ಚಾಮರಾಜನಗರ ರಾಯಭಾರಿಯಾಗಿದ್ದರು. ಅದನ್ನು ತಮ್ಮ ಕುಟುಂಬದ ಯಾರಾದರೂ ಮುಂದುವರಿಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಪುನೀತ್ ಆಗಲು ಸಾಧ್ಯವಿಲ್ಲ. ಅಂತಹ ಒಂದು ಕೆಲಸ ವಹಿಸಿದರೆ ಅಣ್ಣನಾಗಿ ನಿಭಾಯಿಸಿಕೊಂಡು ಹೋಗುತ್ತೇನೆ ಎಂದರು.
ನಮ್ಮ ಊರಿಗೆ ನಾವು ಬಂದು ಮಾತನಾಡಿದ್ದು, ನಮ್ಮ ಮನೆಯಲ್ಲಿ ಮಾತಾನಾಡಿದಷ್ಟು ಖುಷಿಯಾಗಿದೆ. ನಮ್ಮ ಕುಟುಂಬದಲ್ಲಿ ೨ ಕರ್ನಾಟಕ ರತ್ನ ಮಾಡಿದವರು ಅಭಿಮಾನಿಗಳು. ಅಪ್ಪುಗೆ ಕೊಟ್ಟಿರುವ ಕರ್ನಾಟಕ ರತ್ನ ಪ್ರಶಸ್ತಿ ಅಭಿಮಾನಿಗಳಿಗೆ ಸಲ್ಲುತ್ತದೆ. ಪ್ರಶಸ್ತಿ ಎಲ್ಲ ಅಭಿಮಾನಿಗಳಿಂದ ಬಂದಿದೆ ಎಂದು ಹೇಳಿದರು.
ಗಂದಧಗುಡಿ ಸಿನಿಮಾದಲ್ಲಿ ಉತ್ತಮ ಸಂದೇಶವಿದೆ. ಜನರ ಪ್ರೀತಿ ಸಂಪಾದನೆ ಮಾಡಬೇಕು ಅಂತ ೨೦ ಸಿನಿಮಾ ಮಾಡಿ ಜನರ ಪ್ರೀತಿ ಸಂಪಾದನೆ ಮಾಡಿದ್ದ. ಆ ನಂತರ ಪವರ್ ಸ್ಟಾರ್ ಆದ ಬಳಿಕ ಅದನ್ನು ಕಳಚಿ ಇಟ್ಟು ಒಬ್ಬ ಸಾಮಾನ್ಯ ಪುನೀತ್ ಆಗಿ ಜನರಿಗೆ ಸಂದೇಶ ಕೊಡುತ್ತಾನೆ ಎಂದರು.
‘ಬೊಂಬೆ ಹೇಳುತೈತೆ’ ಹಾಡಿದ ರಾಘು
ಚಾಮರಾಜನಗರ: ಕಲಾಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಟ ರಾಘವೇಂದ್ರ ರಾಜಕುಮಾರ್ ಅವರು ‘ಬೊಂಬೆ ಹೇಳುತೈತೆ’ ಹಾಡನ್ನು ಪೂರ್ತಿಯಾಗಿ ಹಾಡಿದರು. ಬಳಿಕ ‘ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು’ ಹಾಡನ್ನು ಹಾಡಿದರು.
ಇದಕ್ಕೂ ಮೊದಲು ವೇದಿಕೆ ಕಾರ್ಯಕ್ರಮದಲ್ಲಿ ಡಾ.ಪುನೀತ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು. ಆದರೆ, ರಾಘವೇಂದ್ರ ರಾಜಕುಮಾರ್ ಮಾತ್ರ ಫೋಟೊಗೆ ಮುತ್ತಿಟ್ಟರು. ಅಪ್ಪು ನನಗಿಂತ ಚಿಕ್ಕವನು. ಆತ ನನ್ನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಬೇಕಿತ್ತು. ಆದರೆ, ಆತನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಸ್ಥಿತಿ ಬಂದಿದೆ. ಆ ಕಾರಣದಿಂದ ಪುಷ್ಪಾರ್ಚನೆ ಮಾಡಲ್ಲ ಎಂದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…