ಚಾಮರಾಜನಗರ: ಚೆಲುವ ಚಾಮರಾಜನಗರ ರಾಯಭಾರಿಯಾಗಲು ಅವಕಾಶ ದೊರೆತರೆ ನಿಭಾಯಿಸುವದಾಗಿ ಎಂದು ನಟ ರಾಘವೇಂದ್ರ ರಾಜಕುಮಾರ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ವರನಟ ಡಾ.ರಾಜಕುಮಾರ್ ಜಿಲ್ಲಾ ಕಲಾ ಮಂದಿರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ದಿ.ಪುನೀತ್ ರಾಜಕುಮಾರ್ ಸ್ಮರಣಾರ್ಥ ಆಯೋಜಿಸಿದ್ದ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಪುನೀತ್ ಚೆಲುವ ಚಾಮರಾಜನಗರ ರಾಯಭಾರಿಯಾಗಿದ್ದರು. ಅದನ್ನು ತಮ್ಮ ಕುಟುಂಬದ ಯಾರಾದರೂ ಮುಂದುವರಿಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಪುನೀತ್ ಆಗಲು ಸಾಧ್ಯವಿಲ್ಲ. ಅಂತಹ ಒಂದು ಕೆಲಸ ವಹಿಸಿದರೆ ಅಣ್ಣನಾಗಿ ನಿಭಾಯಿಸಿಕೊಂಡು ಹೋಗುತ್ತೇನೆ ಎಂದರು.
ನಮ್ಮ ಊರಿಗೆ ನಾವು ಬಂದು ಮಾತನಾಡಿದ್ದು, ನಮ್ಮ ಮನೆಯಲ್ಲಿ ಮಾತಾನಾಡಿದಷ್ಟು ಖುಷಿಯಾಗಿದೆ. ನಮ್ಮ ಕುಟುಂಬದಲ್ಲಿ ೨ ಕರ್ನಾಟಕ ರತ್ನ ಮಾಡಿದವರು ಅಭಿಮಾನಿಗಳು. ಅಪ್ಪುಗೆ ಕೊಟ್ಟಿರುವ ಕರ್ನಾಟಕ ರತ್ನ ಪ್ರಶಸ್ತಿ ಅಭಿಮಾನಿಗಳಿಗೆ ಸಲ್ಲುತ್ತದೆ. ಪ್ರಶಸ್ತಿ ಎಲ್ಲ ಅಭಿಮಾನಿಗಳಿಂದ ಬಂದಿದೆ ಎಂದು ಹೇಳಿದರು.
ಗಂದಧಗುಡಿ ಸಿನಿಮಾದಲ್ಲಿ ಉತ್ತಮ ಸಂದೇಶವಿದೆ. ಜನರ ಪ್ರೀತಿ ಸಂಪಾದನೆ ಮಾಡಬೇಕು ಅಂತ ೨೦ ಸಿನಿಮಾ ಮಾಡಿ ಜನರ ಪ್ರೀತಿ ಸಂಪಾದನೆ ಮಾಡಿದ್ದ. ಆ ನಂತರ ಪವರ್ ಸ್ಟಾರ್ ಆದ ಬಳಿಕ ಅದನ್ನು ಕಳಚಿ ಇಟ್ಟು ಒಬ್ಬ ಸಾಮಾನ್ಯ ಪುನೀತ್ ಆಗಿ ಜನರಿಗೆ ಸಂದೇಶ ಕೊಡುತ್ತಾನೆ ಎಂದರು.
‘ಬೊಂಬೆ ಹೇಳುತೈತೆ’ ಹಾಡಿದ ರಾಘು
ಚಾಮರಾಜನಗರ: ಕಲಾಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಟ ರಾಘವೇಂದ್ರ ರಾಜಕುಮಾರ್ ಅವರು ‘ಬೊಂಬೆ ಹೇಳುತೈತೆ’ ಹಾಡನ್ನು ಪೂರ್ತಿಯಾಗಿ ಹಾಡಿದರು. ಬಳಿಕ ‘ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು’ ಹಾಡನ್ನು ಹಾಡಿದರು.
ಇದಕ್ಕೂ ಮೊದಲು ವೇದಿಕೆ ಕಾರ್ಯಕ್ರಮದಲ್ಲಿ ಡಾ.ಪುನೀತ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು. ಆದರೆ, ರಾಘವೇಂದ್ರ ರಾಜಕುಮಾರ್ ಮಾತ್ರ ಫೋಟೊಗೆ ಮುತ್ತಿಟ್ಟರು. ಅಪ್ಪು ನನಗಿಂತ ಚಿಕ್ಕವನು. ಆತ ನನ್ನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಬೇಕಿತ್ತು. ಆದರೆ, ಆತನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಸ್ಥಿತಿ ಬಂದಿದೆ. ಆ ಕಾರಣದಿಂದ ಪುಷ್ಪಾರ್ಚನೆ ಮಾಡಲ್ಲ ಎಂದರು.
ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…
ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್ಗಳು ?…
ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…
ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…
ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…