ಜಿಲ್ಲೆಗಳು

ಅವಕಾಶ ಸಿಕ್ಕರೆ ಚೆಲುವ ಚಾ.ನಗರ ರಾಯಭಾರಿಯಾಗುವೆ : ರಾಘು ಹೇಳಿಕೆ

ಚಾಮರಾಜನಗರ: ಚೆಲುವ ಚಾಮರಾಜನಗರ ರಾಯಭಾರಿಯಾಗಲು ಅವಕಾಶ ದೊರೆತರೆ ನಿಭಾಯಿಸುವದಾಗಿ ಎಂದು ನಟ ರಾಘವೇಂದ್ರ ರಾಜಕುಮಾರ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ವರನಟ ಡಾ.ರಾಜಕುಮಾರ್ ಜಿಲ್ಲಾ ಕಲಾ ಮಂದಿರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ದಿ.ಪುನೀತ್ ರಾಜಕುಮಾರ್ ಸ್ಮರಣಾರ್ಥ ಆಯೋಜಿಸಿದ್ದ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಪುನೀತ್ ಚೆಲುವ ಚಾಮರಾಜನಗರ ರಾಯಭಾರಿಯಾಗಿದ್ದರು. ಅದನ್ನು ತಮ್ಮ ಕುಟುಂಬದ ಯಾರಾದರೂ ಮುಂದುವರಿಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಪುನೀತ್ ಆಗಲು ಸಾಧ್ಯವಿಲ್ಲ. ಅಂತಹ ಒಂದು ಕೆಲಸ ವಹಿಸಿದರೆ ಅಣ್ಣನಾಗಿ ನಿಭಾಯಿಸಿಕೊಂಡು ಹೋಗುತ್ತೇನೆ ಎಂದರು.
ನಮ್ಮ ಊರಿಗೆ ನಾವು ಬಂದು ಮಾತನಾಡಿದ್ದು, ನಮ್ಮ ಮನೆಯಲ್ಲಿ ಮಾತಾನಾಡಿದಷ್ಟು ಖುಷಿಯಾಗಿದೆ. ನಮ್ಮ ಕುಟುಂಬದಲ್ಲಿ ೨ ಕರ್ನಾಟಕ ರತ್ನ ಮಾಡಿದವರು ಅಭಿಮಾನಿಗಳು. ಅಪ್ಪುಗೆ ಕೊಟ್ಟಿರುವ ಕರ್ನಾಟಕ ರತ್ನ ಪ್ರಶಸ್ತಿ ಅಭಿಮಾನಿಗಳಿಗೆ ಸಲ್ಲುತ್ತದೆ. ಪ್ರಶಸ್ತಿ ಎಲ್ಲ ಅಭಿಮಾನಿಗಳಿಂದ ಬಂದಿದೆ ಎಂದು ಹೇಳಿದರು.
ಗಂದಧಗುಡಿ ಸಿನಿಮಾದಲ್ಲಿ ಉತ್ತಮ ಸಂದೇಶವಿದೆ. ಜನರ ಪ್ರೀತಿ ಸಂಪಾದನೆ ಮಾಡಬೇಕು ಅಂತ ೨೦ ಸಿನಿಮಾ ಮಾಡಿ ಜನರ ಪ್ರೀತಿ ಸಂಪಾದನೆ ಮಾಡಿದ್ದ. ಆ ನಂತರ ಪವರ್ ಸ್ಟಾರ್ ಆದ ಬಳಿಕ ಅದನ್ನು ಕಳಚಿ ಇಟ್ಟು ಒಬ್ಬ ಸಾಮಾನ್ಯ ಪುನೀತ್ ಆಗಿ ಜನರಿಗೆ ಸಂದೇಶ ಕೊಡುತ್ತಾನೆ ಎಂದರು.

‘ಬೊಂಬೆ ಹೇಳುತೈತೆ’ ಹಾಡಿದ ರಾಘು
ಚಾಮರಾಜನಗರ: ಕಲಾಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಟ ರಾಘವೇಂದ್ರ ರಾಜಕುಮಾರ್ ಅವರು ‘ಬೊಂಬೆ ಹೇಳುತೈತೆ’ ಹಾಡನ್ನು ಪೂರ್ತಿಯಾಗಿ ಹಾಡಿದರು. ಬಳಿಕ ‘ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು’ ಹಾಡನ್ನು ಹಾಡಿದರು.
ಇದಕ್ಕೂ ಮೊದಲು ವೇದಿಕೆ ಕಾರ್ಯಕ್ರಮದಲ್ಲಿ ಡಾ.ಪುನೀತ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು. ಆದರೆ, ರಾಘವೇಂದ್ರ ರಾಜಕುಮಾರ್ ಮಾತ್ರ ಫೋಟೊಗೆ ಮುತ್ತಿಟ್ಟರು. ಅಪ್ಪು ನನಗಿಂತ ಚಿಕ್ಕವನು. ಆತ ನನ್ನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಬೇಕಿತ್ತು. ಆದರೆ, ಆತನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಸ್ಥಿತಿ ಬಂದಿದೆ. ಆ ಕಾರಣದಿಂದ ಪುಷ್ಪಾರ್ಚನೆ ಮಾಡಲ್ಲ ಎಂದರು.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

19 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

19 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

19 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

19 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

19 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

19 hours ago