ಜಿಲ್ಲೆಗಳು

ಜಿಲ್ಲಾ ಕ್ರೀಡಾಂಗಣದಲ್ಲಿ ಅವ್ಯವಸ್ಥೆ; ನಾಟಿ ಮಾಡಿದ ಕ್ರೀಡಾರ್ಥಿಗಳು

ಚಾಮರಾಜನಗರ: ಭಾನುವಾರ ರಾತ್ರಿ ಸುರಿದ ನಿರಂತರ ಮಳೆಗೆ ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ರಾಡಿಯಾಗಿದ್ದು, ಸಿಂಥೆಟಿಕ್ ಟ್ರ್ಯಾಕ್​ಗೆ ಹೋಗುವ ದಾರಿ ಕೆಸರುಮಯವಾಗಿದೆ. ಇದರಿಂದ ಕೋಪಗೊಂಡಿರುವ 50 ಕ್ಕೂ ಹೆಚ್ಚು ಕ್ರೀಡಾಭ್ಯಾಸಿಗಳು ಸಿಂಥೆಟಿಕ್ ಟ್ರ್ಯಾಕ್ ಸಮೀಪ ನಾಟಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ

ಕಳೆದ ಮೂರು ನಾಲ್ಕು ವರ್ಷದಿಂದಲೂ ಸಿಂಥಟಿಕ್ ಟ್ರ್ಯಾಕ್ ಸಮೀಪ ರಸ್ತೆ ನಿರ್ಮಿಸಿ, ಕ್ರೀಡಾಂಗಣದಲ್ಲಿ ನೀರು‌ ನಿಂತು ಕೆಸರಾಗುವುದನ್ನು ತಪ್ಪಿಸಿ ಎಂದು ಮನವಿ ಮಾಡಿದರೂ ಯಾವುದೇ ಪ್ರಯೋಜನ ಆಗದೇ ಇಂದು ಕ್ರೀಡಾಂಗಣಕ್ಕೆ ತೆರಳಲು ಕ್ರೀಡಾಭ್ಯಾಸಿಗಳು ಪರದಾಡಿದ್ದಾರೆ. ವಿಪರ್ಯಾಸವೆಂದರೆ ಕಳೆದ 20 ವರ್ಷಗಳಿಂದಲೂ ಈ ಕ್ರೀಡಾಂಗಣದ ಕಾಮಗಾರಿ ನಡೆಯುತ್ತಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ಅದೂ ಕೂಡ ಅವೈಜ್ಞಾನಿಕವಾಗಿದೆ ಎನ್ನುತ್ತಾರೆ ಸ್ಥಳೀಯರು

ಸಿಂಥೆಟಿಕ್ ಟ್ರ್ಯಾಕ್​ನಲ್ಲಿ ಬರಿಗಾಲಲ್ಲೇ ನಡೆಯಬಾರದು ಎನ್ನುತ್ತಾರೆ. ಅದರಲ್ಲಿ ಕೆಸರು, ಮಣ್ಣು ತುಂಬಿ ಕಾಲು ಹಾಕಲು ಸಾಧ್ಯವಿಲ್ಲದಂತಾಗಿದೆ. ಕ್ರೀಡಾಂಗಣದಲ್ಲಿ ಕನಿಷ್ಠ ಸೌಲಭ್ಯ ಕಲ್ಪಿಸಲು ಕ್ರೀಡಾ ಇಲಾಖೆ ವಿಫಲವಾಗಿದೆ. ಮಿನಿ ಒಲಿಂಪಿಕ್​ನಲ್ಲಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಪದಕ ಪಡೆದಿದ್ದಾರೆ. ಸೌಲಭ್ಯವೇ ಕೊಡದಿದ್ದರೆ ಮಕ್ಕಳು ಹೇಗೆ ಆಟ ಆಡುತ್ತಾರೆ, ಪದಕ ಗೆಲ್ಲುತ್ತಾರೆ ಎಂದು ಕ್ರೀಡಾಭ್ಯಾಸಿಗಳ ಪಾಲಕರು ಆಕ್ರೋಶ ಹೊರಹಾಕಿದ್ದಾರೆ.

andolanait

Recent Posts

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

14 mins ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

38 mins ago

ಇವ ನಮ್ಮವ ಮಸೂದೆ; ಅಮಾಯಕ ಯುವ ಜೀವಗಳ ರಕ್ಷಣೆ

ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…

1 hour ago

ಪ್ರೊ.ಡಿ.ಆನಂದ್ – ಮ್ಯಾನೇಜ್‌ಮೆಂಟ್ ಶಿಕ್ಷಣದ ಜಂಗಮ

ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು  ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…

1 hour ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸಂದೇಶ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…

1 hour ago

ಅದ್ಧೂರಿಯಾಗಿ ನೆರವೇರಿದ ನಂಜನಗೂಡಿನ ಗೌತಮ ಪಂಚಮಹಾರಥೋತ್ಸವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಹಸ್ರಾರು ಮಂದಿ ಭಕ್ತರ ಸಮ್ಮುಖದಲ್ಲಿ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಇಂದು…

2 hours ago