ಜಿಲ್ಲೆಗಳು

ಜಿಲ್ಲಾ ಕ್ರೀಡಾಂಗಣದಲ್ಲಿ ಅವ್ಯವಸ್ಥೆ; ನಾಟಿ ಮಾಡಿದ ಕ್ರೀಡಾರ್ಥಿಗಳು

ಚಾಮರಾಜನಗರ: ಭಾನುವಾರ ರಾತ್ರಿ ಸುರಿದ ನಿರಂತರ ಮಳೆಗೆ ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ರಾಡಿಯಾಗಿದ್ದು, ಸಿಂಥೆಟಿಕ್ ಟ್ರ್ಯಾಕ್​ಗೆ ಹೋಗುವ ದಾರಿ ಕೆಸರುಮಯವಾಗಿದೆ. ಇದರಿಂದ ಕೋಪಗೊಂಡಿರುವ 50 ಕ್ಕೂ ಹೆಚ್ಚು ಕ್ರೀಡಾಭ್ಯಾಸಿಗಳು ಸಿಂಥೆಟಿಕ್ ಟ್ರ್ಯಾಕ್ ಸಮೀಪ ನಾಟಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ

ಕಳೆದ ಮೂರು ನಾಲ್ಕು ವರ್ಷದಿಂದಲೂ ಸಿಂಥಟಿಕ್ ಟ್ರ್ಯಾಕ್ ಸಮೀಪ ರಸ್ತೆ ನಿರ್ಮಿಸಿ, ಕ್ರೀಡಾಂಗಣದಲ್ಲಿ ನೀರು‌ ನಿಂತು ಕೆಸರಾಗುವುದನ್ನು ತಪ್ಪಿಸಿ ಎಂದು ಮನವಿ ಮಾಡಿದರೂ ಯಾವುದೇ ಪ್ರಯೋಜನ ಆಗದೇ ಇಂದು ಕ್ರೀಡಾಂಗಣಕ್ಕೆ ತೆರಳಲು ಕ್ರೀಡಾಭ್ಯಾಸಿಗಳು ಪರದಾಡಿದ್ದಾರೆ. ವಿಪರ್ಯಾಸವೆಂದರೆ ಕಳೆದ 20 ವರ್ಷಗಳಿಂದಲೂ ಈ ಕ್ರೀಡಾಂಗಣದ ಕಾಮಗಾರಿ ನಡೆಯುತ್ತಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ಅದೂ ಕೂಡ ಅವೈಜ್ಞಾನಿಕವಾಗಿದೆ ಎನ್ನುತ್ತಾರೆ ಸ್ಥಳೀಯರು

ಸಿಂಥೆಟಿಕ್ ಟ್ರ್ಯಾಕ್​ನಲ್ಲಿ ಬರಿಗಾಲಲ್ಲೇ ನಡೆಯಬಾರದು ಎನ್ನುತ್ತಾರೆ. ಅದರಲ್ಲಿ ಕೆಸರು, ಮಣ್ಣು ತುಂಬಿ ಕಾಲು ಹಾಕಲು ಸಾಧ್ಯವಿಲ್ಲದಂತಾಗಿದೆ. ಕ್ರೀಡಾಂಗಣದಲ್ಲಿ ಕನಿಷ್ಠ ಸೌಲಭ್ಯ ಕಲ್ಪಿಸಲು ಕ್ರೀಡಾ ಇಲಾಖೆ ವಿಫಲವಾಗಿದೆ. ಮಿನಿ ಒಲಿಂಪಿಕ್​ನಲ್ಲಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಪದಕ ಪಡೆದಿದ್ದಾರೆ. ಸೌಲಭ್ಯವೇ ಕೊಡದಿದ್ದರೆ ಮಕ್ಕಳು ಹೇಗೆ ಆಟ ಆಡುತ್ತಾರೆ, ಪದಕ ಗೆಲ್ಲುತ್ತಾರೆ ಎಂದು ಕ್ರೀಡಾಭ್ಯಾಸಿಗಳ ಪಾಲಕರು ಆಕ್ರೋಶ ಹೊರಹಾಕಿದ್ದಾರೆ.

andolanait

Recent Posts

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

1 hour ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

2 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

3 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

3 hours ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

3 hours ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

4 hours ago