ಚಾಮರಾಜನಗರ: ಭಾನುವಾರ ರಾತ್ರಿ ಸುರಿದ ನಿರಂತರ ಮಳೆಗೆ ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ರಾಡಿಯಾಗಿದ್ದು, ಸಿಂಥೆಟಿಕ್ ಟ್ರ್ಯಾಕ್ಗೆ ಹೋಗುವ ದಾರಿ ಕೆಸರುಮಯವಾಗಿದೆ. ಇದರಿಂದ ಕೋಪಗೊಂಡಿರುವ 50 ಕ್ಕೂ ಹೆಚ್ಚು ಕ್ರೀಡಾಭ್ಯಾಸಿಗಳು ಸಿಂಥೆಟಿಕ್ ಟ್ರ್ಯಾಕ್ ಸಮೀಪ ನಾಟಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ
ಕಳೆದ ಮೂರು ನಾಲ್ಕು ವರ್ಷದಿಂದಲೂ ಸಿಂಥಟಿಕ್ ಟ್ರ್ಯಾಕ್ ಸಮೀಪ ರಸ್ತೆ ನಿರ್ಮಿಸಿ, ಕ್ರೀಡಾಂಗಣದಲ್ಲಿ ನೀರು ನಿಂತು ಕೆಸರಾಗುವುದನ್ನು ತಪ್ಪಿಸಿ ಎಂದು ಮನವಿ ಮಾಡಿದರೂ ಯಾವುದೇ ಪ್ರಯೋಜನ ಆಗದೇ ಇಂದು ಕ್ರೀಡಾಂಗಣಕ್ಕೆ ತೆರಳಲು ಕ್ರೀಡಾಭ್ಯಾಸಿಗಳು ಪರದಾಡಿದ್ದಾರೆ. ವಿಪರ್ಯಾಸವೆಂದರೆ ಕಳೆದ 20 ವರ್ಷಗಳಿಂದಲೂ ಈ ಕ್ರೀಡಾಂಗಣದ ಕಾಮಗಾರಿ ನಡೆಯುತ್ತಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ಅದೂ ಕೂಡ ಅವೈಜ್ಞಾನಿಕವಾಗಿದೆ ಎನ್ನುತ್ತಾರೆ ಸ್ಥಳೀಯರು
ಸಿಂಥೆಟಿಕ್ ಟ್ರ್ಯಾಕ್ನಲ್ಲಿ ಬರಿಗಾಲಲ್ಲೇ ನಡೆಯಬಾರದು ಎನ್ನುತ್ತಾರೆ. ಅದರಲ್ಲಿ ಕೆಸರು, ಮಣ್ಣು ತುಂಬಿ ಕಾಲು ಹಾಕಲು ಸಾಧ್ಯವಿಲ್ಲದಂತಾಗಿದೆ. ಕ್ರೀಡಾಂಗಣದಲ್ಲಿ ಕನಿಷ್ಠ ಸೌಲಭ್ಯ ಕಲ್ಪಿಸಲು ಕ್ರೀಡಾ ಇಲಾಖೆ ವಿಫಲವಾಗಿದೆ. ಮಿನಿ ಒಲಿಂಪಿಕ್ನಲ್ಲಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಪದಕ ಪಡೆದಿದ್ದಾರೆ. ಸೌಲಭ್ಯವೇ ಕೊಡದಿದ್ದರೆ ಮಕ್ಕಳು ಹೇಗೆ ಆಟ ಆಡುತ್ತಾರೆ, ಪದಕ ಗೆಲ್ಲುತ್ತಾರೆ ಎಂದು ಕ್ರೀಡಾಭ್ಯಾಸಿಗಳ ಪಾಲಕರು ಆಕ್ರೋಶ ಹೊರಹಾಕಿದ್ದಾರೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…