ಮೈಸೂರು ಜಿಲ್ಲೆಯಲ್ಲಿ ಕಳೆದ ಕೆಲ ವಾರಗಳಿಂದ ಚಿರತೆ ಹಾಗೂ ಹುಲಿ ದಾಳಿಯ ಸುದ್ದಿಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಇದೀಗ ಹಾಸನದಲ್ಲಿಯೂ ಸಹ ಚಿರತೆ ದಾಳಿ ನಡೆಸಿದ ಘಟನೆಯೊಂದು ವರದಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾವಿನಹಳ್ಳಿಯಲ್ಲಿ ಚಿರತೆ ನಾಲ್ಕು ಹಸುಗಳ ಮೇಲೆ ದಾಳಿ ನಡೆಸಿದೆ.
ಈ ಪರಿಣಾಮ ಒಂದು ಹಸು ಸಾವನ್ನಪ್ಪಿದ್ದು, ಮೂರು ಹಸುಗಳು ಗಂಭೀರವಾಗಿ ಗಾಯಗೊಂಡಿವೆ. ಇನ್ನು ಒಂದು ವಾರದಲ್ಲಿಯೇ ಚಿರತೆ ಒಟ್ಟು ಆರು ಜಾನುವಾರುಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಸ್ಥಳೀಯರು ಇದರ ಕುರಿತು ಆತಂಕ ಹೊರಹಾಕಿದ್ದಾರೆ.
ಬೇರೆಡೆ ಸೆರೆಹಿಡಿದ ಚಿರತೆಯನ್ನು ಇಲ್ಲಿಗೆ ತಂದು ಬಿಟ್ಟಿದ್ದಾರೆ ಎಂದು ಗ್ರಾಮಸ್ಥರು ಗಂಭೀರ ಆರೋಪವನ್ನು ಮಾಡಿದ್ದು, ಕೂಡಲೇ ಚಿರತೆಯನ್ನು ಸೆರೆಹಿಡಿಯಬೇಕೆಂದು ಆಗ್ರಹಿಸಿದ್ದಾರೆ. ಇನ್ನು ಗ್ರಾಮದ ಸುತ್ತ ಮುತ್ತ ಬೋನುಗಳನ್ನು ಇರಿಸಲಾಗಿದ್ದರೂ ಸಹ ಚಿರತೆ ಸೆರೆ ಮಾತ್ರ ಬೋನಿಗೆ ಬೀಳದೇ ಇರುವುದು ಜನರ ನಿದ್ದೆಗೆಡಿಸಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…
ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…