ಮೈಸೂರು ಜಿಲ್ಲೆಯಲ್ಲಿ ಕಳೆದ ಕೆಲ ವಾರಗಳಿಂದ ಚಿರತೆ ಹಾಗೂ ಹುಲಿ ದಾಳಿಯ ಸುದ್ದಿಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಇದೀಗ ಹಾಸನದಲ್ಲಿಯೂ ಸಹ ಚಿರತೆ ದಾಳಿ ನಡೆಸಿದ ಘಟನೆಯೊಂದು ವರದಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾವಿನಹಳ್ಳಿಯಲ್ಲಿ ಚಿರತೆ ನಾಲ್ಕು ಹಸುಗಳ ಮೇಲೆ ದಾಳಿ ನಡೆಸಿದೆ.
ಈ ಪರಿಣಾಮ ಒಂದು ಹಸು ಸಾವನ್ನಪ್ಪಿದ್ದು, ಮೂರು ಹಸುಗಳು ಗಂಭೀರವಾಗಿ ಗಾಯಗೊಂಡಿವೆ. ಇನ್ನು ಒಂದು ವಾರದಲ್ಲಿಯೇ ಚಿರತೆ ಒಟ್ಟು ಆರು ಜಾನುವಾರುಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಸ್ಥಳೀಯರು ಇದರ ಕುರಿತು ಆತಂಕ ಹೊರಹಾಕಿದ್ದಾರೆ.
ಬೇರೆಡೆ ಸೆರೆಹಿಡಿದ ಚಿರತೆಯನ್ನು ಇಲ್ಲಿಗೆ ತಂದು ಬಿಟ್ಟಿದ್ದಾರೆ ಎಂದು ಗ್ರಾಮಸ್ಥರು ಗಂಭೀರ ಆರೋಪವನ್ನು ಮಾಡಿದ್ದು, ಕೂಡಲೇ ಚಿರತೆಯನ್ನು ಸೆರೆಹಿಡಿಯಬೇಕೆಂದು ಆಗ್ರಹಿಸಿದ್ದಾರೆ. ಇನ್ನು ಗ್ರಾಮದ ಸುತ್ತ ಮುತ್ತ ಬೋನುಗಳನ್ನು ಇರಿಸಲಾಗಿದ್ದರೂ ಸಹ ಚಿರತೆ ಸೆರೆ ಮಾತ್ರ ಬೋನಿಗೆ ಬೀಳದೇ ಇರುವುದು ಜನರ ನಿದ್ದೆಗೆಡಿಸಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…