ಮಂಡ್ಯ: ಶೋಭಕೃತ್ ನಾಮ ಸಂವತ್ಸವರದ ವಿಶ್ವ ವಿಖ್ಯಾತ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಚಲುವನಾಯಣಸ್ವಾಮಿಯ ವಜ್ರಖಚಿತ ವೈರಮುಡಿ ಉತ್ಸವ ಲಕ್ಷಾಂತರ ಭಕ್ತರ ಜಯಘೋಷದ ನಡುವೆ ಬೆಳಗಿನ ಜಾವ 3 ಗಂಟೆವರೆಗು ನಡೆಯಿತು. ದೇವಾಲಯದ ಸುತ್ತಲೂ ಕಿಕ್ಕಿರಿದು ತುಂಬಿದ್ದ ಭಕ್ತವೃಂದ ಚೆಲುವನಾರಾಯಣನ ವೈರಮುಡಿ ಉತ್ಸವ ಕಂಡೊಡನೆ ಗೋವಿಂದ ನಾಮ ಸ್ಮರಣೆಯ ಘೋಷಣೆ ಮೊಳಗಿಸುತ್ತಾ ವೈರಮುಡಿ ಉತ್ಸವದ ಚೆಲುವನ ದರ್ಶನ ಪಡೆದು ಪುನೀತರಾದರು. ಮಂಡ್ಯ ನಗರದ ಲಕ್ಷ್ಮಿ ಜನಾರ್ಧನ ದೇಗುಲದಲ್ಲಿ ವೈರಮುಡಿಗೆ ಮೊದಲ ಪೂಜೆ ಸಲ್ಲಿಸಲಾಯಿತು. ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ ಮಾರ್ಗವಾಗಿ ವೈರಮುಡಿ ಮೇಲುಕೋಟೆ ತಲುಪಿತು. ವೈರಮುಡಿ ಸಾಗುವ ಮಾರ್ಗದ ಪ್ರತಿ ಗ್ರಾಮದಲ್ಲೂ ವೈರಮುಡಿಗೆ ಗ್ರಾಮಸ್ಥರಿಂದ ಪೂಜೆ ಸಲ್ಲಲಿದೆ.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…