ಸಹೋದರಿಯರು ಸೇರಿ ಐವರು ಆಯ್ಕೆ
ಚಾಮರಾಜನಗರ: ನಗರದ ಸೇವಾಭಾರತಿ ಪಬ್ಲಿಕ್ ಶಾಲೆಯ ಐವರು ಬಾಲಕಿಯರು ಚದುರಂಗ ಸ್ಪರ್ಧೆ ಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಆಕರ್ಷ ಕಿಶೋರ, ಆದರ್ಶ ಕಿಶೋರ, ದೀಪಾಶ್ರೀ , ಪ್ರಜ್ಞಾ , ಧೃತಿ ಅವರು ಉಡುಪಿ ಜಿಲ್ಲೆಯಲ್ಲಿ ನಡೆದ ಪ್ರಾಂತ ಹಾಗೂ ಕ್ಷೇತ್ರೀಯ ಮಟ್ಟದ ಸ್ಪರ್ಧೆ ಯಲ್ಲಿ ಜಯಿಸಿ ರಾಷ್ಟ್ರ ಮಟ್ಟಕ್ಕೆ ಅರ್ಹತೆ ಪಡೆದವರು.
ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಹಾಗೂ ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ಆಯೋಜಿಸಲಾಗಿದ್ದ ಪ್ರೌಢಶಾಲಾ ಮಟ್ಟದ ಬಾಲಕಿಯರ ವಿಭಾಗದಲ್ಲಿ ಮೂರು ಸುತ್ತಿನ ಸ್ಪರ್ಧೆಯಲ್ಲಿ ಸೆಣಸಿ ಅಂತಿಮವಾಗಿ ಉಡುಪಿ ಜಿಲ್ಲಾ ತಂಡದ ವಿರುದ್ಧ ಗೆದ್ದಿದ್ದಾರೆ.
ದಕ್ಷಿಣ ಕನ್ನಡ, ಬೆಂಗಳೂರು, ಉಡುಪಿ, ಚಾಮರಾಜನಗರ ಜಿಲ್ಲೆಗಳ ಬಾಲಕಿಯರು ಉಡುಪಿಯ ಹೆಬ್ರಿ ಯಲ್ಲಿ ನಡೆದ ಈ ಪಂದ್ಯಾವಳಿ ಯಲ್ಲಿ ಭಾಗವಹಿಸಿದ್ದರು.
ವಿಜೇತರಾದ ಚಾ.ನಗರದ ಬಾಲಕಿಯರಿಗೆ ಚಿನ್ನದಪದಕ, ಪ್ರಮಾಣಪತ್ರವನ್ನು ಬುಧವಾರ (ನ.2) ಪ್ರದಾನ ಮಾಡಲಾಗಿದೆಯಲ್ಲದೇ ಈ ತಂಡಕ್ಕೆ ಟ್ರೋಫಿ ನೀಡಲಾಗಿದೆ.
ನಗರದ ಚನ್ನೀಪುರಮೋಳೆಯ ಸೇವಾ ಭಾರತಿ ಪಬ್ಲಿಕ್
ಶಾಲೆಯ ಮುಖ್ಯ ಶಿಕ್ಷಕಿ ರಾಧಿಕಾಗುಪ್ತ, ದೈಹಿಕ ಶಿಕ್ಷಣ ಶಿಕ್ಷಕರಾದ ರೇಖಾ, ಬಾಲಕೃಷ್ಣ, ಚೆಸ್ ಕೋಚ್ ಕಿಶೋರ್ ಕುಮಾರ್ ಮತ್ತು ಶಾಲಾ ಆಡಳಿತ ಮಂಡಳಿಯವರು ಬಾಲಕಿಯರಿಗೆ
ಅಭಿನಂದನೆ ಸಲ್ಲಿಸಿ ಸಾಧನೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆ ಅಸ್ಸಾಂನಲ್ಲಿ ನಡೆಯಲಿದೆ ಎನ್ನಲಾಗಿದ್ದು ಅಲ್ಲಿಗೆ ಅರ್ಹತೆ ಪಡೆದಿರುವ ಈ ಐವರು ಬಾಲಕಿಯರ ಪೈಕಿ ಆದರ್ಶ ಕಿಶೋರ ಮತ್ತು ಆಕರ್ಷ ಕಿಶೋರ ಅಕ್ಕ-ತಂಗಿಯರು. ಕ್ರಮವಾಗಿ 10 ಮತ್ತು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಇವರು ಇಲ್ಲಿನ ವಾದಿರಾಜ ನಗರದ ಕಿಶೋರ್ ಕುಮಾರ್ ಮತ್ತು ಸರಳ
ದಂಪತಿ ಪುತ್ರಿಯರು.
ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…
ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…
ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…
ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…
ಮಡಿಕೇರಿ : ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿಯಾಗಿ ದಲಿತ ನಾಯಕರೇ ಆಗಬೇಕು ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕಾಂಗ್ರೆಸ್ ಹೈಕಮಾಂಡ್ಗೆ ಒತ್ತಾಯಿಸಿದ್ದಾರೆ.…