ಜಿಲ್ಲೆಗಳು

ಚೆಸ್ ನಲ್ಲಿ ಚಾ.ನಗರದ ಬಾಲಕಿಯರು ರಾಷ್ಟ್ರ ಮಟ್ಟಕ್ಕೆ

ಸಹೋದರಿಯರು ಸೇರಿ ಐವರು ಆಯ್ಕೆ

ಚಾಮರಾಜನಗರ: ನಗರದ ಸೇವಾಭಾರತಿ ಪಬ್ಲಿಕ್ ಶಾಲೆಯ ಐವರು ಬಾಲಕಿಯರು ಚದುರಂಗ ಸ್ಪರ್ಧೆ ಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಆಕರ್ಷ ಕಿಶೋರ, ಆದರ್ಶ ಕಿಶೋರ, ದೀಪಾಶ್ರೀ , ಪ್ರಜ್ಞಾ , ಧೃತಿ ಅವರು ಉಡುಪಿ ಜಿಲ್ಲೆಯಲ್ಲಿ ನಡೆದ ಪ್ರಾಂತ ಹಾಗೂ ಕ್ಷೇತ್ರೀಯ ಮಟ್ಟದ ಸ್ಪರ್ಧೆ ಯಲ್ಲಿ ಜಯಿಸಿ ರಾಷ್ಟ್ರ ಮಟ್ಟಕ್ಕೆ ಅರ್ಹತೆ ಪಡೆದವರು.
ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಹಾಗೂ ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ಆಯೋಜಿಸಲಾಗಿದ್ದ ಪ್ರೌಢಶಾಲಾ ಮಟ್ಟದ ಬಾಲಕಿಯರ ವಿಭಾಗದಲ್ಲಿ ಮೂರು ಸುತ್ತಿನ ಸ್ಪರ್ಧೆಯಲ್ಲಿ ಸೆಣಸಿ ಅಂತಿಮವಾಗಿ ಉಡುಪಿ ಜಿಲ್ಲಾ ತಂಡದ ವಿರುದ್ಧ ಗೆದ್ದಿದ್ದಾರೆ.
ದಕ್ಷಿಣ ಕನ್ನಡ, ಬೆಂಗಳೂರು, ಉಡುಪಿ, ಚಾಮರಾಜನಗರ ಜಿಲ್ಲೆಗಳ ಬಾಲಕಿಯರು ಉಡುಪಿಯ ಹೆಬ್ರಿ ಯಲ್ಲಿ ನಡೆದ ಈ ಪಂದ್ಯಾವಳಿ ಯಲ್ಲಿ ಭಾಗವಹಿಸಿದ್ದರು.
ವಿಜೇತರಾದ ಚಾ.ನಗರದ ಬಾಲಕಿಯರಿಗೆ ಚಿನ್ನದಪದಕ, ಪ್ರಮಾಣಪತ್ರವನ್ನು ಬುಧವಾರ (ನ.2) ಪ್ರದಾನ ಮಾಡಲಾಗಿದೆಯಲ್ಲದೇ ಈ ತಂಡಕ್ಕೆ ಟ್ರೋಫಿ ನೀಡಲಾಗಿದೆ.
ನಗರದ ಚನ್ನೀಪುರಮೋಳೆಯ ಸೇವಾ ಭಾರತಿ ಪಬ್ಲಿಕ್
ಶಾಲೆಯ ಮುಖ್ಯ ಶಿಕ್ಷಕಿ ರಾಧಿಕಾಗುಪ್ತ, ದೈಹಿಕ ಶಿಕ್ಷಣ ಶಿಕ್ಷಕರಾದ ರೇಖಾ, ಬಾಲಕೃಷ್ಣ, ಚೆಸ್ ಕೋಚ್ ಕಿಶೋರ್ ಕುಮಾರ್ ಮತ್ತು ಶಾಲಾ ಆಡಳಿತ ಮಂಡಳಿಯವರು ಬಾಲಕಿಯರಿಗೆ
ಅಭಿನಂದನೆ ಸಲ್ಲಿಸಿ ಸಾಧನೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆ ಅಸ್ಸಾಂನಲ್ಲಿ ನಡೆಯಲಿದೆ ಎನ್ನಲಾಗಿದ್ದು ಅಲ್ಲಿಗೆ ಅರ್ಹತೆ ಪಡೆದಿರುವ ಈ ಐವರು ಬಾಲಕಿಯರ ಪೈಕಿ ಆದರ್ಶ ಕಿಶೋರ ಮತ್ತು ಆಕರ್ಷ ಕಿಶೋರ ಅಕ್ಕ-ತಂಗಿಯರು. ಕ್ರಮವಾಗಿ 10 ಮತ್ತು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಇವರು ಇಲ್ಲಿನ ವಾದಿರಾಜ ನಗರದ ಕಿಶೋರ್ ಕುಮಾರ್ ಮತ್ತು ಸರಳ
ದಂಪತಿ ಪುತ್ರಿಯರು.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

6 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

6 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

6 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

6 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

6 hours ago