ಜಿಲ್ಲೆಗಳು

ಚೆಸ್ ನಲ್ಲಿ ಚಾ.ನಗರದ ಬಾಲಕಿಯರು ರಾಷ್ಟ್ರ ಮಟ್ಟಕ್ಕೆ

ಸಹೋದರಿಯರು ಸೇರಿ ಐವರು ಆಯ್ಕೆ

ಚಾಮರಾಜನಗರ: ನಗರದ ಸೇವಾಭಾರತಿ ಪಬ್ಲಿಕ್ ಶಾಲೆಯ ಐವರು ಬಾಲಕಿಯರು ಚದುರಂಗ ಸ್ಪರ್ಧೆ ಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಆಕರ್ಷ ಕಿಶೋರ, ಆದರ್ಶ ಕಿಶೋರ, ದೀಪಾಶ್ರೀ , ಪ್ರಜ್ಞಾ , ಧೃತಿ ಅವರು ಉಡುಪಿ ಜಿಲ್ಲೆಯಲ್ಲಿ ನಡೆದ ಪ್ರಾಂತ ಹಾಗೂ ಕ್ಷೇತ್ರೀಯ ಮಟ್ಟದ ಸ್ಪರ್ಧೆ ಯಲ್ಲಿ ಜಯಿಸಿ ರಾಷ್ಟ್ರ ಮಟ್ಟಕ್ಕೆ ಅರ್ಹತೆ ಪಡೆದವರು.
ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಹಾಗೂ ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ಆಯೋಜಿಸಲಾಗಿದ್ದ ಪ್ರೌಢಶಾಲಾ ಮಟ್ಟದ ಬಾಲಕಿಯರ ವಿಭಾಗದಲ್ಲಿ ಮೂರು ಸುತ್ತಿನ ಸ್ಪರ್ಧೆಯಲ್ಲಿ ಸೆಣಸಿ ಅಂತಿಮವಾಗಿ ಉಡುಪಿ ಜಿಲ್ಲಾ ತಂಡದ ವಿರುದ್ಧ ಗೆದ್ದಿದ್ದಾರೆ.
ದಕ್ಷಿಣ ಕನ್ನಡ, ಬೆಂಗಳೂರು, ಉಡುಪಿ, ಚಾಮರಾಜನಗರ ಜಿಲ್ಲೆಗಳ ಬಾಲಕಿಯರು ಉಡುಪಿಯ ಹೆಬ್ರಿ ಯಲ್ಲಿ ನಡೆದ ಈ ಪಂದ್ಯಾವಳಿ ಯಲ್ಲಿ ಭಾಗವಹಿಸಿದ್ದರು.
ವಿಜೇತರಾದ ಚಾ.ನಗರದ ಬಾಲಕಿಯರಿಗೆ ಚಿನ್ನದಪದಕ, ಪ್ರಮಾಣಪತ್ರವನ್ನು ಬುಧವಾರ (ನ.2) ಪ್ರದಾನ ಮಾಡಲಾಗಿದೆಯಲ್ಲದೇ ಈ ತಂಡಕ್ಕೆ ಟ್ರೋಫಿ ನೀಡಲಾಗಿದೆ.
ನಗರದ ಚನ್ನೀಪುರಮೋಳೆಯ ಸೇವಾ ಭಾರತಿ ಪಬ್ಲಿಕ್
ಶಾಲೆಯ ಮುಖ್ಯ ಶಿಕ್ಷಕಿ ರಾಧಿಕಾಗುಪ್ತ, ದೈಹಿಕ ಶಿಕ್ಷಣ ಶಿಕ್ಷಕರಾದ ರೇಖಾ, ಬಾಲಕೃಷ್ಣ, ಚೆಸ್ ಕೋಚ್ ಕಿಶೋರ್ ಕುಮಾರ್ ಮತ್ತು ಶಾಲಾ ಆಡಳಿತ ಮಂಡಳಿಯವರು ಬಾಲಕಿಯರಿಗೆ
ಅಭಿನಂದನೆ ಸಲ್ಲಿಸಿ ಸಾಧನೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆ ಅಸ್ಸಾಂನಲ್ಲಿ ನಡೆಯಲಿದೆ ಎನ್ನಲಾಗಿದ್ದು ಅಲ್ಲಿಗೆ ಅರ್ಹತೆ ಪಡೆದಿರುವ ಈ ಐವರು ಬಾಲಕಿಯರ ಪೈಕಿ ಆದರ್ಶ ಕಿಶೋರ ಮತ್ತು ಆಕರ್ಷ ಕಿಶೋರ ಅಕ್ಕ-ತಂಗಿಯರು. ಕ್ರಮವಾಗಿ 10 ಮತ್ತು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಇವರು ಇಲ್ಲಿನ ವಾದಿರಾಜ ನಗರದ ಕಿಶೋರ್ ಕುಮಾರ್ ಮತ್ತು ಸರಳ
ದಂಪತಿ ಪುತ್ರಿಯರು.

andolanait

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

17 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

19 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

22 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

1 day ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

1 day ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

1 day ago