ಜಿಲ್ಲೆಗಳು

ಮಳವಳ್ಳಿಯಲ್ಲಿ ಅತ್ಯಾಚಾರಕೊಳಪಟ್ಟ ಕೊಲೆಯಾದ ಬಾಲಕಿಯ ಕುಟುಂಬಕ್ಕೆ ರೂ 10 ಲಕ್ಷ ಪರಿಹಾರ : ಬಸವರಾಜ ಬೊಮ್ಮಾಯಿ ಘೋಷಣೆ

ಮಂಡ್ಯ: ಮಳವಳ್ಳಿಯಲ್ಲಿ ಇತ್ತೀಚೆಗೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಬಾಲಕಿಯ ಕುಟುಂಬದವರಿಗೆ ರೂ. 10 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಶ್ರೀ ಮಲೆಮಹದೇಶ್ವರ ಕುಂಭಮೇಳದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಳವಳ್ಳಿ ಘಟನೆ ಬಗ್ಗೆ ಎಲ್ಲರೂ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಎಂದಿಗೂ ಇಂಥದ್ದು ನಡೆಯಬಾರದು. ಅತ್ಯಂತ ಅಮಾನುಷ ಕೃತ್ಯವಿದು. ಮನುಷ್ಯತ್ವವಿಲ್ಲದವರು ಮಾತ್ರ ಇಂಥ ಕೆಲಸ ಮಾಡಲು ಸಾಧ್ಯ . ಇದನ್ನು ಶಬ್ದಗಳಲ್ಲಿ ಖಂಡಿಸಲಾಗದು. ಅರಿಯದ ಕಂದಮ್ಮನ ಪರಿಸ್ಥಿತಿ ಕೇಳಿದರೆ ಕರುಳು ಕಿವುಚಿ ಬರುತ್ತದೆ. ಈಗಾಗಲೇ ಅಧಿಕಾರಿಗಳು ಕ್ರಮ ತೆಗೆದುಕೊಂಡು ಅಪರಾಧಿಯನ್ನು ಬಂಧಿಸಿದ್ದಾರೆ. ಎಲ್ಲ 302, 307, ಪೋಕ್ಸೋ ಸೆಕ್ಷನ್ ಗಳನ್ನು ಹಾಕಿದ್ದಾರೆ. ನಮ್ಮ ಪೊಲೀಸ್ ಮಹಾನಿರ್ದೇಶಕರಿಗೆ ಅಂದೇ ಸೂಚನೆ ನೀಡಿ ಕೂಡಲೇ ತನಿಖೆಯಾಗಿ ತಪ್ಪಿ ತಸ್ಥರನ್ನು ಶಿಕ್ಷೆಗೊಳಪಡಿಸಬೇಕೆಂದು ಸೂಚಿಸಿದ್ದೆ. ಅವರು ಎಫ್.ಎಸ್.ಎಲ್ ವರದಿ ಒಂದು ವಾರದಲ್ಲಿಯೇ ನೀಡಲಾಗುವುದೆಂದು ಹೇಳಿದ್ದು, ಬಂದ ಕೂಡಲೇ ಆರೋಪ ಪಟ್ಟಿ ಸಿದ್ಧಪಡಿಸಿ ಪೋಕ್ಸೋ ನ್ಯಾಯಾಲಯಕ್ಕೆ ಕಳುಹಿಸಿ, ಆದಷ್ಟು ಬೇಗ ನ್ಯಾಯ ನೀಡಲು ಕ್ರಮ ಕೈಗೊಂಡು ಇನ್ನೊಮ್ಮೆ ಹೀಗಾದರೆ ಅತಿ ಕಡಿಮೆ ಸಮಯದಲ್ಲಿ ಉಗ್ರ ಶಿಕ್ಷೆ ಈ ವ್ಯವಸ್ಥೆ ನೀಡಲಿದೆ ಎಂಬ ಸಂದೇಶವನ್ನು ಸಾರಲಾಗುವುದೆಂದು ಈ ಪ್ರಕರಣದಲ್ಲಿ ಸಾಬೀತು ಮಾಡುತ್ತೇವೆ ಎಂದರು.

andolana

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

5 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

5 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

9 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

9 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

10 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

10 hours ago