ಜಿಲ್ಲೆಗಳು

ಮಳವಳ್ಳಿಯಲ್ಲಿ ಅತ್ಯಾಚಾರಕೊಳಪಟ್ಟ ಕೊಲೆಯಾದ ಬಾಲಕಿಯ ಕುಟುಂಬಕ್ಕೆ ರೂ 10 ಲಕ್ಷ ಪರಿಹಾರ : ಬಸವರಾಜ ಬೊಮ್ಮಾಯಿ ಘೋಷಣೆ

ಮಂಡ್ಯ: ಮಳವಳ್ಳಿಯಲ್ಲಿ ಇತ್ತೀಚೆಗೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಬಾಲಕಿಯ ಕುಟುಂಬದವರಿಗೆ ರೂ. 10 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಶ್ರೀ ಮಲೆಮಹದೇಶ್ವರ ಕುಂಭಮೇಳದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಳವಳ್ಳಿ ಘಟನೆ ಬಗ್ಗೆ ಎಲ್ಲರೂ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಎಂದಿಗೂ ಇಂಥದ್ದು ನಡೆಯಬಾರದು. ಅತ್ಯಂತ ಅಮಾನುಷ ಕೃತ್ಯವಿದು. ಮನುಷ್ಯತ್ವವಿಲ್ಲದವರು ಮಾತ್ರ ಇಂಥ ಕೆಲಸ ಮಾಡಲು ಸಾಧ್ಯ . ಇದನ್ನು ಶಬ್ದಗಳಲ್ಲಿ ಖಂಡಿಸಲಾಗದು. ಅರಿಯದ ಕಂದಮ್ಮನ ಪರಿಸ್ಥಿತಿ ಕೇಳಿದರೆ ಕರುಳು ಕಿವುಚಿ ಬರುತ್ತದೆ. ಈಗಾಗಲೇ ಅಧಿಕಾರಿಗಳು ಕ್ರಮ ತೆಗೆದುಕೊಂಡು ಅಪರಾಧಿಯನ್ನು ಬಂಧಿಸಿದ್ದಾರೆ. ಎಲ್ಲ 302, 307, ಪೋಕ್ಸೋ ಸೆಕ್ಷನ್ ಗಳನ್ನು ಹಾಕಿದ್ದಾರೆ. ನಮ್ಮ ಪೊಲೀಸ್ ಮಹಾನಿರ್ದೇಶಕರಿಗೆ ಅಂದೇ ಸೂಚನೆ ನೀಡಿ ಕೂಡಲೇ ತನಿಖೆಯಾಗಿ ತಪ್ಪಿ ತಸ್ಥರನ್ನು ಶಿಕ್ಷೆಗೊಳಪಡಿಸಬೇಕೆಂದು ಸೂಚಿಸಿದ್ದೆ. ಅವರು ಎಫ್.ಎಸ್.ಎಲ್ ವರದಿ ಒಂದು ವಾರದಲ್ಲಿಯೇ ನೀಡಲಾಗುವುದೆಂದು ಹೇಳಿದ್ದು, ಬಂದ ಕೂಡಲೇ ಆರೋಪ ಪಟ್ಟಿ ಸಿದ್ಧಪಡಿಸಿ ಪೋಕ್ಸೋ ನ್ಯಾಯಾಲಯಕ್ಕೆ ಕಳುಹಿಸಿ, ಆದಷ್ಟು ಬೇಗ ನ್ಯಾಯ ನೀಡಲು ಕ್ರಮ ಕೈಗೊಂಡು ಇನ್ನೊಮ್ಮೆ ಹೀಗಾದರೆ ಅತಿ ಕಡಿಮೆ ಸಮಯದಲ್ಲಿ ಉಗ್ರ ಶಿಕ್ಷೆ ಈ ವ್ಯವಸ್ಥೆ ನೀಡಲಿದೆ ಎಂಬ ಸಂದೇಶವನ್ನು ಸಾರಲಾಗುವುದೆಂದು ಈ ಪ್ರಕರಣದಲ್ಲಿ ಸಾಬೀತು ಮಾಡುತ್ತೇವೆ ಎಂದರು.

andolana

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

7 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

8 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

8 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

8 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

9 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

9 hours ago