ಮಂಡ್ಯ: ಮಳವಳ್ಳಿಯಲ್ಲಿ ಇತ್ತೀಚೆಗೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಬಾಲಕಿಯ ಕುಟುಂಬದವರಿಗೆ ರೂ. 10 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಶ್ರೀ ಮಲೆಮಹದೇಶ್ವರ ಕುಂಭಮೇಳದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಳವಳ್ಳಿ ಘಟನೆ ಬಗ್ಗೆ ಎಲ್ಲರೂ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಎಂದಿಗೂ ಇಂಥದ್ದು ನಡೆಯಬಾರದು. ಅತ್ಯಂತ ಅಮಾನುಷ ಕೃತ್ಯವಿದು. ಮನುಷ್ಯತ್ವವಿಲ್ಲದವರು ಮಾತ್ರ ಇಂಥ ಕೆಲಸ ಮಾಡಲು ಸಾಧ್ಯ . ಇದನ್ನು ಶಬ್ದಗಳಲ್ಲಿ ಖಂಡಿಸಲಾಗದು. ಅರಿಯದ ಕಂದಮ್ಮನ ಪರಿಸ್ಥಿತಿ ಕೇಳಿದರೆ ಕರುಳು ಕಿವುಚಿ ಬರುತ್ತದೆ. ಈಗಾಗಲೇ ಅಧಿಕಾರಿಗಳು ಕ್ರಮ ತೆಗೆದುಕೊಂಡು ಅಪರಾಧಿಯನ್ನು ಬಂಧಿಸಿದ್ದಾರೆ. ಎಲ್ಲ 302, 307, ಪೋಕ್ಸೋ ಸೆಕ್ಷನ್ ಗಳನ್ನು ಹಾಕಿದ್ದಾರೆ. ನಮ್ಮ ಪೊಲೀಸ್ ಮಹಾನಿರ್ದೇಶಕರಿಗೆ ಅಂದೇ ಸೂಚನೆ ನೀಡಿ ಕೂಡಲೇ ತನಿಖೆಯಾಗಿ ತಪ್ಪಿ ತಸ್ಥರನ್ನು ಶಿಕ್ಷೆಗೊಳಪಡಿಸಬೇಕೆಂದು ಸೂಚಿಸಿದ್ದೆ. ಅವರು ಎಫ್.ಎಸ್.ಎಲ್ ವರದಿ ಒಂದು ವಾರದಲ್ಲಿಯೇ ನೀಡಲಾಗುವುದೆಂದು ಹೇಳಿದ್ದು, ಬಂದ ಕೂಡಲೇ ಆರೋಪ ಪಟ್ಟಿ ಸಿದ್ಧಪಡಿಸಿ ಪೋಕ್ಸೋ ನ್ಯಾಯಾಲಯಕ್ಕೆ ಕಳುಹಿಸಿ, ಆದಷ್ಟು ಬೇಗ ನ್ಯಾಯ ನೀಡಲು ಕ್ರಮ ಕೈಗೊಂಡು ಇನ್ನೊಮ್ಮೆ ಹೀಗಾದರೆ ಅತಿ ಕಡಿಮೆ ಸಮಯದಲ್ಲಿ ಉಗ್ರ ಶಿಕ್ಷೆ ಈ ವ್ಯವಸ್ಥೆ ನೀಡಲಿದೆ ಎಂಬ ಸಂದೇಶವನ್ನು ಸಾರಲಾಗುವುದೆಂದು ಈ ಪ್ರಕರಣದಲ್ಲಿ ಸಾಬೀತು ಮಾಡುತ್ತೇವೆ ಎಂದರು.
ಕಲಬುರ್ಗಿ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ…
ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.…
ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ…
ವಾಷಿಂಗ್ಟನ್: ಅಮೇರಿಕಾ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್…
ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…
ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…