ಜಿಲ್ಲೆಗಳು

ಮಳವಳ್ಳಿಯಲ್ಲಿ ಅತ್ಯಾಚಾರಕೊಳಪಟ್ಟ ಕೊಲೆಯಾದ ಬಾಲಕಿಯ ಕುಟುಂಬಕ್ಕೆ ರೂ 10 ಲಕ್ಷ ಪರಿಹಾರ : ಬಸವರಾಜ ಬೊಮ್ಮಾಯಿ ಘೋಷಣೆ

ಮಂಡ್ಯ: ಮಳವಳ್ಳಿಯಲ್ಲಿ ಇತ್ತೀಚೆಗೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಬಾಲಕಿಯ ಕುಟುಂಬದವರಿಗೆ ರೂ. 10 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಶ್ರೀ ಮಲೆಮಹದೇಶ್ವರ ಕುಂಭಮೇಳದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಳವಳ್ಳಿ ಘಟನೆ ಬಗ್ಗೆ ಎಲ್ಲರೂ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಎಂದಿಗೂ ಇಂಥದ್ದು ನಡೆಯಬಾರದು. ಅತ್ಯಂತ ಅಮಾನುಷ ಕೃತ್ಯವಿದು. ಮನುಷ್ಯತ್ವವಿಲ್ಲದವರು ಮಾತ್ರ ಇಂಥ ಕೆಲಸ ಮಾಡಲು ಸಾಧ್ಯ . ಇದನ್ನು ಶಬ್ದಗಳಲ್ಲಿ ಖಂಡಿಸಲಾಗದು. ಅರಿಯದ ಕಂದಮ್ಮನ ಪರಿಸ್ಥಿತಿ ಕೇಳಿದರೆ ಕರುಳು ಕಿವುಚಿ ಬರುತ್ತದೆ. ಈಗಾಗಲೇ ಅಧಿಕಾರಿಗಳು ಕ್ರಮ ತೆಗೆದುಕೊಂಡು ಅಪರಾಧಿಯನ್ನು ಬಂಧಿಸಿದ್ದಾರೆ. ಎಲ್ಲ 302, 307, ಪೋಕ್ಸೋ ಸೆಕ್ಷನ್ ಗಳನ್ನು ಹಾಕಿದ್ದಾರೆ. ನಮ್ಮ ಪೊಲೀಸ್ ಮಹಾನಿರ್ದೇಶಕರಿಗೆ ಅಂದೇ ಸೂಚನೆ ನೀಡಿ ಕೂಡಲೇ ತನಿಖೆಯಾಗಿ ತಪ್ಪಿ ತಸ್ಥರನ್ನು ಶಿಕ್ಷೆಗೊಳಪಡಿಸಬೇಕೆಂದು ಸೂಚಿಸಿದ್ದೆ. ಅವರು ಎಫ್.ಎಸ್.ಎಲ್ ವರದಿ ಒಂದು ವಾರದಲ್ಲಿಯೇ ನೀಡಲಾಗುವುದೆಂದು ಹೇಳಿದ್ದು, ಬಂದ ಕೂಡಲೇ ಆರೋಪ ಪಟ್ಟಿ ಸಿದ್ಧಪಡಿಸಿ ಪೋಕ್ಸೋ ನ್ಯಾಯಾಲಯಕ್ಕೆ ಕಳುಹಿಸಿ, ಆದಷ್ಟು ಬೇಗ ನ್ಯಾಯ ನೀಡಲು ಕ್ರಮ ಕೈಗೊಂಡು ಇನ್ನೊಮ್ಮೆ ಹೀಗಾದರೆ ಅತಿ ಕಡಿಮೆ ಸಮಯದಲ್ಲಿ ಉಗ್ರ ಶಿಕ್ಷೆ ಈ ವ್ಯವಸ್ಥೆ ನೀಡಲಿದೆ ಎಂಬ ಸಂದೇಶವನ್ನು ಸಾರಲಾಗುವುದೆಂದು ಈ ಪ್ರಕರಣದಲ್ಲಿ ಸಾಬೀತು ಮಾಡುತ್ತೇವೆ ಎಂದರು.

andolana

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

14 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

14 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

14 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

14 hours ago