ಜಾತ್ರೆ ಸಮೀಪಿಸುತ್ತಿದೆ ಈ ಬಣಗಳ ಜಗಕ್ಕೆ ನಾಂದಿಹಾಡುವಂತೆ ಗ್ರಾಮಸ್ಥರ ಒತ್ತಾಯ
ಕೊಳ್ಳೇಗಾಲ: ಪ್ರಸಿದ್ಧ ಸಿದ್ದಪ್ಪಾಜಿ ದೇವಾಲಯ ಇರುವ ಚಿಕ್ಕಲ್ಲೂರು ಕ್ಷೇತ್ರದಲ್ಲಿ ಆಸ್ತಿ ಹಾಗೂ ಆಡಳಿತ ಸಂಬಂಧ ಎರಡು ಬಣಗಳು ಹುಟ್ಟಿಕೊಂಡಿದ್ದು ಈ ಸಂಬಂಧ ಎರಡು ಪ್ರತ್ಯೇಕ ದೂರುಗಳು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.
ಮಳವಳ್ಳಿ ತಾಲ್ಲೂಕಿನ ಬೊಪ್ಪೇಗೌಡನಪುರದ ಧರೆಗೆ ದೊಡ್ಡವರ ಸಂಸ್ಥಾನ ಮಠ ಮತ್ತು ಚಿಕ್ಕಲ್ಲೂರು ಕ್ಷೇತ್ರದಲ್ಲಿ ಆಡಳಿತ ನಡೆಸುತ್ತಿದ್ದ ಪ್ರಭುದೇವರಾಜೇ ಅರಸ್ ಮಗ ಭರತ್ರಾಜೇ ಅರಸ್ ನಡುವೆ ವಿವಾದ ಹುಟ್ಟಿಕೊಂಡಿದ್ದು ಭರತ್ ರಾಜೇ ಅರಸ್ ರವರನ್ನು ಇಲ್ಲಿಂದ ಪದಚ್ಯುತಿಗೊಳಿಸಲು ಜ್ಞಾನನಂದ ಅರಸ್ರವರ ಪತ್ನಿ ಸಮ್ಮತಿ ಅರಸ್ ತಮ್ಮ ದಾಖಲಾತಿಗಳೊಡನೆ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಅದೇ ರೀತಿ ಭರತ್ರಾಜೇ ಅರಸ್ರವರು ಕೂಡ ತಮ್ಮ ತಂದೆಯ ಕಾಲದಿಂದಲೂ ಆಡಳಿತ ನಡೆಸುತ್ತಿರುವುದಾಗಿ ತಮ್ಮ ದಾಖಲಾತಿಗಳನ್ನು ಠಾಣೆಗೆ ನೀಡಿದ್ದಾರೆ. ಎರಡು ಗುಂಪುನಲ್ಲೂ ಭಕ್ತರ ಸಂಖ್ಯೆ ಹೆಚ್ಚಾಗಿರುವುದರಿಂದ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಬೇಕೆಂದು ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತಕ್ಕೆ ವರದಿ ಸಲ್ಲಿಸಿದ್ದಾರೆ.
ಕಳೆದ ತಿಂಗಳು ಇದೇ ಸಂಬಂಧ ಚಿಕ್ಕಲ್ಲೂರು ದೇವಸ್ಥಾನಕ್ಕೆ ಸೇರಿದ ಸಾಮಗ್ರಿಗಳು ತುಂಬಿದ್ದ ಗೋಡೌನ್ಗೆ ಬೆಂಕಿ ಹಾಕಿ ಬೆಲೆಬಾಳುವ ವಸ್ತುಗಳು ಸುಟ್ಟು ಭಸ್ಮವಾಗಿತ್ತು. ಈ ಸಂಬಂಧ ಕೂಡ ಠಾಣೆಯಲ್ಲಿ ದೂರು ದಾಖಲಾಗಿದೆ.
ಜನವರಿ ತಿಂಗಳು ಐದು ದಿನಗಳ ಜಾತ್ರೆ ಇರುವುದರಿಂದ ಜಿಲ್ಲಾಡಳಿತ ಅಷ್ಟರೊಳಗೆ ಎರಡು ಬಣಗಳ ನಡುವೆ ಇರುವ ವೈಮನಸ್ಸುಗಳಿಗೆ ನಾಂದಿ ಹಾಡಬೇಕೆಂಬುದು ಈ ಜನರ ಒತ್ತಾಯವಾಗಿದೆ.
ಬೆಂಗಳೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್ ವಿರುದ್ಧ ಬೆಂಗಳೂರಿನ ಕೆ.ಆರ್.ಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…
ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…
ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…