ಜಿಲ್ಲೆಗಳು

ಚಿಕ್ಕಲ್ಲೂರು ಕ್ಷೇತ್ರ : ಆಸ್ತಿ, ಆಡಳಿತಕ್ಕಾಗಿ ಠಾಣೆ ಮೆಟ್ಟಿಲೇರಿದ ಬಣಗಳು

ಜಾತ್ರೆ ಸಮೀಪಿಸುತ್ತಿದೆ ಈ ಬಣಗಳ ಜಗಕ್ಕೆ ನಾಂದಿಹಾಡುವಂತೆ ಗ್ರಾಮಸ್ಥರ ಒತ್ತಾಯ

ಕೊಳ್ಳೇಗಾಲ: ಪ್ರಸಿದ್ಧ ಸಿದ್ದಪ್ಪಾಜಿ ದೇವಾಲಯ ಇರುವ ಚಿಕ್ಕಲ್ಲೂರು ಕ್ಷೇತ್ರದಲ್ಲಿ ಆಸ್ತಿ ಹಾಗೂ ಆಡಳಿತ ಸಂಬಂಧ ಎರಡು ಬಣಗಳು ಹುಟ್ಟಿಕೊಂಡಿದ್ದು ಈ ಸಂಬಂಧ ಎರಡು ಪ್ರತ್ಯೇಕ ದೂರುಗಳು ಗ್ರಾಮಾಂತರ  ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.
ಮಳವಳ್ಳಿ ತಾಲ್ಲೂಕಿನ ಬೊಪ್ಪೇಗೌಡನಪುರದ ಧರೆಗೆ ದೊಡ್ಡವರ ಸಂಸ್ಥಾನ ಮಠ ಮತ್ತು ಚಿಕ್ಕಲ್ಲೂರು ಕ್ಷೇತ್ರದಲ್ಲಿ ಆಡಳಿತ ನಡೆಸುತ್ತಿದ್ದ ಪ್ರಭುದೇವರಾಜೇ ಅರಸ್ ಮಗ ಭರತ್‌ರಾಜೇ ಅರಸ್ ನಡುವೆ ವಿವಾದ ಹುಟ್ಟಿಕೊಂಡಿದ್ದು ಭರತ್ ರಾಜೇ ಅರಸ್ ರವರನ್ನು ಇಲ್ಲಿಂದ ಪದಚ್ಯುತಿಗೊಳಿಸಲು ಜ್ಞಾನನಂದ ಅರಸ್‌ರವರ ಪತ್ನಿ ಸಮ್ಮತಿ ಅರಸ್ ತಮ್ಮ ದಾಖಲಾತಿಗಳೊಡನೆ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಅದೇ ರೀತಿ ಭರತ್‌ರಾಜೇ ಅರಸ್‌ರವರು ಕೂಡ ತಮ್ಮ ತಂದೆಯ ಕಾಲದಿಂದಲೂ ಆಡಳಿತ ನಡೆಸುತ್ತಿರುವುದಾಗಿ ತಮ್ಮ ದಾಖಲಾತಿಗಳನ್ನು ಠಾಣೆಗೆ ನೀಡಿದ್ದಾರೆ. ಎರಡು ಗುಂಪುನಲ್ಲೂ ಭಕ್ತರ ಸಂಖ್ಯೆ ಹೆಚ್ಚಾಗಿರುವುದರಿಂದ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಬೇಕೆಂದು ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತಕ್ಕೆ ವರದಿ ಸಲ್ಲಿಸಿದ್ದಾರೆ.
ಕಳೆದ ತಿಂಗಳು ಇದೇ ಸಂಬಂಧ ಚಿಕ್ಕಲ್ಲೂರು ದೇವಸ್ಥಾನಕ್ಕೆ ಸೇರಿದ ಸಾಮಗ್ರಿಗಳು ತುಂಬಿದ್ದ ಗೋಡೌನ್‌ಗೆ ಬೆಂಕಿ ಹಾಕಿ ಬೆಲೆಬಾಳುವ ವಸ್ತುಗಳು ಸುಟ್ಟು ಭಸ್ಮವಾಗಿತ್ತು. ಈ ಸಂಬಂಧ ಕೂಡ ಠಾಣೆಯಲ್ಲಿ ದೂರು ದಾಖಲಾಗಿದೆ.
ಜನವರಿ ತಿಂಗಳು ಐದು ದಿನಗಳ ಜಾತ್ರೆ ಇರುವುದರಿಂದ ಜಿಲ್ಲಾಡಳಿತ ಅಷ್ಟರೊಳಗೆ ಎರಡು ಬಣಗಳ ನಡುವೆ ಇರುವ ವೈಮನಸ್ಸುಗಳಿಗೆ ನಾಂದಿ ಹಾಡಬೇಕೆಂಬುದು ಈ ಜನರ ಒತ್ತಾಯವಾಗಿದೆ.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

7 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

9 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

17 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

17 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

17 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

17 hours ago