ಜಾತ್ರೆ ಸಮೀಪಿಸುತ್ತಿದೆ ಈ ಬಣಗಳ ಜಗಕ್ಕೆ ನಾಂದಿಹಾಡುವಂತೆ ಗ್ರಾಮಸ್ಥರ ಒತ್ತಾಯ
ಕೊಳ್ಳೇಗಾಲ: ಪ್ರಸಿದ್ಧ ಸಿದ್ದಪ್ಪಾಜಿ ದೇವಾಲಯ ಇರುವ ಚಿಕ್ಕಲ್ಲೂರು ಕ್ಷೇತ್ರದಲ್ಲಿ ಆಸ್ತಿ ಹಾಗೂ ಆಡಳಿತ ಸಂಬಂಧ ಎರಡು ಬಣಗಳು ಹುಟ್ಟಿಕೊಂಡಿದ್ದು ಈ ಸಂಬಂಧ ಎರಡು ಪ್ರತ್ಯೇಕ ದೂರುಗಳು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.
ಮಳವಳ್ಳಿ ತಾಲ್ಲೂಕಿನ ಬೊಪ್ಪೇಗೌಡನಪುರದ ಧರೆಗೆ ದೊಡ್ಡವರ ಸಂಸ್ಥಾನ ಮಠ ಮತ್ತು ಚಿಕ್ಕಲ್ಲೂರು ಕ್ಷೇತ್ರದಲ್ಲಿ ಆಡಳಿತ ನಡೆಸುತ್ತಿದ್ದ ಪ್ರಭುದೇವರಾಜೇ ಅರಸ್ ಮಗ ಭರತ್ರಾಜೇ ಅರಸ್ ನಡುವೆ ವಿವಾದ ಹುಟ್ಟಿಕೊಂಡಿದ್ದು ಭರತ್ ರಾಜೇ ಅರಸ್ ರವರನ್ನು ಇಲ್ಲಿಂದ ಪದಚ್ಯುತಿಗೊಳಿಸಲು ಜ್ಞಾನನಂದ ಅರಸ್ರವರ ಪತ್ನಿ ಸಮ್ಮತಿ ಅರಸ್ ತಮ್ಮ ದಾಖಲಾತಿಗಳೊಡನೆ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಅದೇ ರೀತಿ ಭರತ್ರಾಜೇ ಅರಸ್ರವರು ಕೂಡ ತಮ್ಮ ತಂದೆಯ ಕಾಲದಿಂದಲೂ ಆಡಳಿತ ನಡೆಸುತ್ತಿರುವುದಾಗಿ ತಮ್ಮ ದಾಖಲಾತಿಗಳನ್ನು ಠಾಣೆಗೆ ನೀಡಿದ್ದಾರೆ. ಎರಡು ಗುಂಪುನಲ್ಲೂ ಭಕ್ತರ ಸಂಖ್ಯೆ ಹೆಚ್ಚಾಗಿರುವುದರಿಂದ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಬೇಕೆಂದು ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತಕ್ಕೆ ವರದಿ ಸಲ್ಲಿಸಿದ್ದಾರೆ.
ಕಳೆದ ತಿಂಗಳು ಇದೇ ಸಂಬಂಧ ಚಿಕ್ಕಲ್ಲೂರು ದೇವಸ್ಥಾನಕ್ಕೆ ಸೇರಿದ ಸಾಮಗ್ರಿಗಳು ತುಂಬಿದ್ದ ಗೋಡೌನ್ಗೆ ಬೆಂಕಿ ಹಾಕಿ ಬೆಲೆಬಾಳುವ ವಸ್ತುಗಳು ಸುಟ್ಟು ಭಸ್ಮವಾಗಿತ್ತು. ಈ ಸಂಬಂಧ ಕೂಡ ಠಾಣೆಯಲ್ಲಿ ದೂರು ದಾಖಲಾಗಿದೆ.
ಜನವರಿ ತಿಂಗಳು ಐದು ದಿನಗಳ ಜಾತ್ರೆ ಇರುವುದರಿಂದ ಜಿಲ್ಲಾಡಳಿತ ಅಷ್ಟರೊಳಗೆ ಎರಡು ಬಣಗಳ ನಡುವೆ ಇರುವ ವೈಮನಸ್ಸುಗಳಿಗೆ ನಾಂದಿ ಹಾಡಬೇಕೆಂಬುದು ಈ ಜನರ ಒತ್ತಾಯವಾಗಿದೆ.
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…
ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…
ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…