ಜಿಲ್ಲೆಗಳು

ಹೆಣ್ಣು ಮಕ್ಕಳ ಮನಸ್ಸು ಮುಗ್ದವಾದದ್ದು ಅವರನ್ನು ಗೌರವದಿಂದ ಕಾಣಿ : ಮಕ್ಕಳ ಸಮಿತಿ ಅಧ್ಯಕ್ಷೆ ಕಮಲಾ

ಮೈಸೂರು : ಚೈಲ್ಡ್ ಲೈನ್ -1098 ಮೈಸೂರು ವತಿಯಿಂದ “ಅಂತರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ” ಯನ್ನು ವಾಣಿವಿಲಾಸ ಬಾಲಕಿಯರ ಪ್ರೌಢಶಾಲೆಯಲ್ಲಿ  ಆಚರಿಸಲಾಯಿತು.

ಕಾರ್ಯಕ್ರಮವನ್ನು ಅಧಿಕಾರಿಗಳು ಮತ್ತು ಮಕ್ಕಳು ಡ್ರಮ್ ಬಾರಿಸುವ ಮೂಲಕ ಉದ್ಘಾಟಿಸಿದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಕಮಲಾ ಮಾತನಾಡಿ ಇಂದಿಗೂ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ವಿಷಾಧನಿಯವಾಗಿದೆ. ಮಕ್ಕಳ ಮನಸ್ಸು ಮುಗ್ದವಾದದ್ದು ಅವರನ್ನು ಗೌರವದಿಂದ ಕಾಣಬೇಕು. ಈ ದಿನದಂದು ಶಿಕ್ಷಣ, ಪೋಷಣೆ, ಬಲವಂತದ ಬಾಲ್ಯವಿವಾಹ, ಕಾನೂನು ಹಕ್ಕುಗಳು ಮತ್ತು ವೈದ್ಯಕೀಯ ಹಕ್ಕುಗಳಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹುಡುಗಿಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಪ್ರಮುಖವಾಗಿದೆ ಎಂದು ತಿಳಿಸಿದರು.

ಚೈಲ್ಡ್ ಲೈನ್ ನೋಡಲ್ ಸಂಯೋಜಕರಾದ ಶ್ರೀ ಧನರಾಜ್ ಚೈಲ್ಡ್ ಲೈನ್-1098 ಮತ್ತು ಮಕ್ಕಳ ಹಕ್ಕುಗಳ ಕುರಿತು ತಿಳಿಸಿದರು. ಶ್ರೀಮತಿ ವೈಶಾಲಿ ಬಿರಾದರ್, ಸಹಾಯಕ ಪೊಲೀಸ್ ಅಧಿಕಾರಿಗಳು, ನಜರಬಾದ ಪೊಲೀಸ್ ಠಾಣೆ ರವರು ಮಾತನಾಡಿ ಅಂತರರಾಷ್ಟ್ರೀಯ ದಿನವನ್ನು ಪ್ರತಿ ವರ್ಷ ಅಕ್ಟೋಬರ್ 11 ರಂದು ಆಚರಿಸಲಾಗುತ್ತದೆ, ಹದಿಹರೆಯದ ಹುಡುಗಿಯರಿಗೆ ಸಂಬಂಧಿಸಿದ ವಿಷಯಗಳ ಮೇಲೆ ಹೆಚ್ಚಿನ ಗಮನ, ಹೂಡಿಕೆ ಮತ್ತು ಕ್ರಮಕ್ಕಾಗಿ ಸಾಮೂಹಿಕವಾಗಿ ಕರೆ ನೀಡುವ ಉದ್ದೇಶದಿಂದ, ನ್ಯಾಯಯುತವಾದ ಪಾಲನೆ ಮತ್ತು ಸಮಾನ ಅವಕಾಶಗಳನ್ನು ಖಚಿತಪಡಿಸಿಕೊಳ್ಳಲು ಮಾಡಲಾಗುತ್ತಿದೆ. ಪೊಲೀಸ್ ಎಂದರೆ ಭಯವಲ್ಲ ಭರವಸೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಅನ್ನಪೂರ್ಣ ಶಾಲೆಯ ಮುಖ್ಯ ಶಿಕ್ಷಕಿ ವಹಿಸಿದ್ದರು. ಕಾರ್ಯಕ್ರಮದಲ್ಲಿ RLHP ಚೈಲ್ಡ್ ಲೈನ್ ಸಂಯೋಜಕರಾದ ಶಶಿಕುಮಾರ್, ಶ್ರೀಮತಿ ಶೀಲಾ ಮಕ್ಕಳ ವಿಶೇಷ ಪೊಲೀಸ್ ಅಧಿಕಾರಿಗಳು, ಮಕ್ಕಳ ವಿಶೇಷ ಪೊಲೀಸ್ ಘಟಕ, ಮೈಸೂರು ನಗರ, ಶ್ರೀಮತಿ ಚೈತ್ರ ಪೊಲೀಸ್ ಸಿಬ್ಬಂದಿ, ಮಕ್ಕಳ ಪ್ರತಿನಿಧಿಗಳಾದ ಕು.ಚೈತನ್ಯ, ಕು.ಪ್ರಿಯದರ್ಶಿನಿ, ಶಾಲೆಯ ಶಿಕ್ಷಕರು, ಮಕ್ಕಳು ಚೈಲ್ಡ್ ಲೈನ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

andolanait

Recent Posts

ಸಿಲಿಂಡರ್ ಸ್ಪೋಟ ಪ್ರಕರಣ | ಮೃತ ಸಲೀಂ ಜೊತೆ ಬಂದವರು ನಾಪತ್ತೆ‌ ; ಲಾಡ್ಜ್‌ ಶೋಧ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‍ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ…

13 mins ago

ದೇಶದದ್ಯಾಂತ ಇಂದಿನಿಂದ ರೈಲು ಪ್ರಯಾಣ ದರ ಏರಿಕೆ

ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…

23 mins ago

ಚಿತ್ರದುರ್ಗ ಬಸ್‌ ದುರಂತ | ಬಸ್‌ ಚಾಲಕ ಮೊಹಮ್ಮದ್‌ ರಫೀಕ್‌ ಸಾವು ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ…

29 mins ago

ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ : ಮಹತ್ವದ ಮಾಹಿತಿ ಕೊಟ್ಟ ಗೃಹ ಸಚಿವ ಪರಮೇಶ್ವರ

ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು…

32 mins ago

ಸ್ಪೋಟ ದುರಂತ | ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಮಹದೇವಪ್ಪ ; ಬಳಿಕ ಹೇಳಿದ್ದೇನು?

ಮೈಸೂರು : ಮೈಸೂರಿನ ಅರಮನೆ ಬಳಿ ಹಿಲೀಯಂ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ ಪ್ರಕರಣ ಸಂಬಂಧ ಶುಕ್ರವಾರ ಜಿಲ್ಲಾ ಉಸ್ತುವಾರಿ…

34 mins ago

ಸಿಲಿಂಡರ್‌ ಸ್ಫೋಟ : ಮೈಸೂರಿಗೆ NIA ತಂಡ ಭೇಟಿ, ಹಲವು ಆಯಾಮಗಳಿಂದ ಪರಿಶೀಲನೆ

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…

2 hours ago