ಜಿಲ್ಲೆಗಳು

ಹೆಣ್ಣು ಮಕ್ಕಳ ಮನಸ್ಸು ಮುಗ್ದವಾದದ್ದು ಅವರನ್ನು ಗೌರವದಿಂದ ಕಾಣಿ : ಮಕ್ಕಳ ಸಮಿತಿ ಅಧ್ಯಕ್ಷೆ ಕಮಲಾ

ಮೈಸೂರು : ಚೈಲ್ಡ್ ಲೈನ್ -1098 ಮೈಸೂರು ವತಿಯಿಂದ “ಅಂತರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ” ಯನ್ನು ವಾಣಿವಿಲಾಸ ಬಾಲಕಿಯರ ಪ್ರೌಢಶಾಲೆಯಲ್ಲಿ  ಆಚರಿಸಲಾಯಿತು.

ಕಾರ್ಯಕ್ರಮವನ್ನು ಅಧಿಕಾರಿಗಳು ಮತ್ತು ಮಕ್ಕಳು ಡ್ರಮ್ ಬಾರಿಸುವ ಮೂಲಕ ಉದ್ಘಾಟಿಸಿದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಕಮಲಾ ಮಾತನಾಡಿ ಇಂದಿಗೂ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ವಿಷಾಧನಿಯವಾಗಿದೆ. ಮಕ್ಕಳ ಮನಸ್ಸು ಮುಗ್ದವಾದದ್ದು ಅವರನ್ನು ಗೌರವದಿಂದ ಕಾಣಬೇಕು. ಈ ದಿನದಂದು ಶಿಕ್ಷಣ, ಪೋಷಣೆ, ಬಲವಂತದ ಬಾಲ್ಯವಿವಾಹ, ಕಾನೂನು ಹಕ್ಕುಗಳು ಮತ್ತು ವೈದ್ಯಕೀಯ ಹಕ್ಕುಗಳಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹುಡುಗಿಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಪ್ರಮುಖವಾಗಿದೆ ಎಂದು ತಿಳಿಸಿದರು.

ಚೈಲ್ಡ್ ಲೈನ್ ನೋಡಲ್ ಸಂಯೋಜಕರಾದ ಶ್ರೀ ಧನರಾಜ್ ಚೈಲ್ಡ್ ಲೈನ್-1098 ಮತ್ತು ಮಕ್ಕಳ ಹಕ್ಕುಗಳ ಕುರಿತು ತಿಳಿಸಿದರು. ಶ್ರೀಮತಿ ವೈಶಾಲಿ ಬಿರಾದರ್, ಸಹಾಯಕ ಪೊಲೀಸ್ ಅಧಿಕಾರಿಗಳು, ನಜರಬಾದ ಪೊಲೀಸ್ ಠಾಣೆ ರವರು ಮಾತನಾಡಿ ಅಂತರರಾಷ್ಟ್ರೀಯ ದಿನವನ್ನು ಪ್ರತಿ ವರ್ಷ ಅಕ್ಟೋಬರ್ 11 ರಂದು ಆಚರಿಸಲಾಗುತ್ತದೆ, ಹದಿಹರೆಯದ ಹುಡುಗಿಯರಿಗೆ ಸಂಬಂಧಿಸಿದ ವಿಷಯಗಳ ಮೇಲೆ ಹೆಚ್ಚಿನ ಗಮನ, ಹೂಡಿಕೆ ಮತ್ತು ಕ್ರಮಕ್ಕಾಗಿ ಸಾಮೂಹಿಕವಾಗಿ ಕರೆ ನೀಡುವ ಉದ್ದೇಶದಿಂದ, ನ್ಯಾಯಯುತವಾದ ಪಾಲನೆ ಮತ್ತು ಸಮಾನ ಅವಕಾಶಗಳನ್ನು ಖಚಿತಪಡಿಸಿಕೊಳ್ಳಲು ಮಾಡಲಾಗುತ್ತಿದೆ. ಪೊಲೀಸ್ ಎಂದರೆ ಭಯವಲ್ಲ ಭರವಸೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಅನ್ನಪೂರ್ಣ ಶಾಲೆಯ ಮುಖ್ಯ ಶಿಕ್ಷಕಿ ವಹಿಸಿದ್ದರು. ಕಾರ್ಯಕ್ರಮದಲ್ಲಿ RLHP ಚೈಲ್ಡ್ ಲೈನ್ ಸಂಯೋಜಕರಾದ ಶಶಿಕುಮಾರ್, ಶ್ರೀಮತಿ ಶೀಲಾ ಮಕ್ಕಳ ವಿಶೇಷ ಪೊಲೀಸ್ ಅಧಿಕಾರಿಗಳು, ಮಕ್ಕಳ ವಿಶೇಷ ಪೊಲೀಸ್ ಘಟಕ, ಮೈಸೂರು ನಗರ, ಶ್ರೀಮತಿ ಚೈತ್ರ ಪೊಲೀಸ್ ಸಿಬ್ಬಂದಿ, ಮಕ್ಕಳ ಪ್ರತಿನಿಧಿಗಳಾದ ಕು.ಚೈತನ್ಯ, ಕು.ಪ್ರಿಯದರ್ಶಿನಿ, ಶಾಲೆಯ ಶಿಕ್ಷಕರು, ಮಕ್ಕಳು ಚೈಲ್ಡ್ ಲೈನ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

andolanait

Recent Posts

ಉಪ ಚುನಾವಣೆ | 1ಗಂಟೆ ವೇಳೆಗೆ ಬಾಗಲಕೋಟೆ ಶೇ.43, ದಾವಣಗೆರೆ ಶೇ.28ರಷ್ಟು ಮತದಾನ

ದಾವಣಗೆರೆ : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

1 hour ago

ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆಪ್, ವಿಮೆ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…

2 hours ago

ಅಡುಗೆ ಅನಿಲ,‌ಪೆಟ್ರೋಲಿಯಂ ಉತ್ಪನ್ನಗಳ ಕೊರತೆಗೆ ಕೇಂದ್ರ ಕಾರಣ ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…

2 hours ago

ಮೈಸೂರು-ಜೋಧ್‌ಪುರ ನಡುವೆ ವಿಶೇಷ ರೈಲು ಸೇವೆ ಆರಂಭ

ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…

3 hours ago

ಓದುಗರ ಪತ್ರ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಮಾರಕ ನಿರ್ಮಾಣ ಸ್ವಾಗತಾರ್ಹ

೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…

3 hours ago

ಓದುಗರ ಪತ್ರ | ಆಟೋ ಚಾಲಕರಿಗೆ ಸರ್ಕಾರ ಪರಿಹಾರ ನೀಡಲಿ

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…

3 hours ago