ಮೈಸೂರು : ಚೈಲ್ಡ್ ಲೈನ್ -1098 ಮೈಸೂರು ವತಿಯಿಂದ “ಅಂತರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ” ಯನ್ನು ವಾಣಿವಿಲಾಸ ಬಾಲಕಿಯರ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಅಧಿಕಾರಿಗಳು ಮತ್ತು ಮಕ್ಕಳು ಡ್ರಮ್ ಬಾರಿಸುವ ಮೂಲಕ ಉದ್ಘಾಟಿಸಿದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಕಮಲಾ ಮಾತನಾಡಿ ಇಂದಿಗೂ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ವಿಷಾಧನಿಯವಾಗಿದೆ. ಮಕ್ಕಳ ಮನಸ್ಸು ಮುಗ್ದವಾದದ್ದು ಅವರನ್ನು ಗೌರವದಿಂದ ಕಾಣಬೇಕು. ಈ ದಿನದಂದು ಶಿಕ್ಷಣ, ಪೋಷಣೆ, ಬಲವಂತದ ಬಾಲ್ಯವಿವಾಹ, ಕಾನೂನು ಹಕ್ಕುಗಳು ಮತ್ತು ವೈದ್ಯಕೀಯ ಹಕ್ಕುಗಳಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹುಡುಗಿಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಪ್ರಮುಖವಾಗಿದೆ ಎಂದು ತಿಳಿಸಿದರು.
ಚೈಲ್ಡ್ ಲೈನ್ ನೋಡಲ್ ಸಂಯೋಜಕರಾದ ಶ್ರೀ ಧನರಾಜ್ ಚೈಲ್ಡ್ ಲೈನ್-1098 ಮತ್ತು ಮಕ್ಕಳ ಹಕ್ಕುಗಳ ಕುರಿತು ತಿಳಿಸಿದರು. ಶ್ರೀಮತಿ ವೈಶಾಲಿ ಬಿರಾದರ್, ಸಹಾಯಕ ಪೊಲೀಸ್ ಅಧಿಕಾರಿಗಳು, ನಜರಬಾದ ಪೊಲೀಸ್ ಠಾಣೆ ರವರು ಮಾತನಾಡಿ ಅಂತರರಾಷ್ಟ್ರೀಯ ದಿನವನ್ನು ಪ್ರತಿ ವರ್ಷ ಅಕ್ಟೋಬರ್ 11 ರಂದು ಆಚರಿಸಲಾಗುತ್ತದೆ, ಹದಿಹರೆಯದ ಹುಡುಗಿಯರಿಗೆ ಸಂಬಂಧಿಸಿದ ವಿಷಯಗಳ ಮೇಲೆ ಹೆಚ್ಚಿನ ಗಮನ, ಹೂಡಿಕೆ ಮತ್ತು ಕ್ರಮಕ್ಕಾಗಿ ಸಾಮೂಹಿಕವಾಗಿ ಕರೆ ನೀಡುವ ಉದ್ದೇಶದಿಂದ, ನ್ಯಾಯಯುತವಾದ ಪಾಲನೆ ಮತ್ತು ಸಮಾನ ಅವಕಾಶಗಳನ್ನು ಖಚಿತಪಡಿಸಿಕೊಳ್ಳಲು ಮಾಡಲಾಗುತ್ತಿದೆ. ಪೊಲೀಸ್ ಎಂದರೆ ಭಯವಲ್ಲ ಭರವಸೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಅನ್ನಪೂರ್ಣ ಶಾಲೆಯ ಮುಖ್ಯ ಶಿಕ್ಷಕಿ ವಹಿಸಿದ್ದರು. ಕಾರ್ಯಕ್ರಮದಲ್ಲಿ RLHP ಚೈಲ್ಡ್ ಲೈನ್ ಸಂಯೋಜಕರಾದ ಶಶಿಕುಮಾರ್, ಶ್ರೀಮತಿ ಶೀಲಾ ಮಕ್ಕಳ ವಿಶೇಷ ಪೊಲೀಸ್ ಅಧಿಕಾರಿಗಳು, ಮಕ್ಕಳ ವಿಶೇಷ ಪೊಲೀಸ್ ಘಟಕ, ಮೈಸೂರು ನಗರ, ಶ್ರೀಮತಿ ಚೈತ್ರ ಪೊಲೀಸ್ ಸಿಬ್ಬಂದಿ, ಮಕ್ಕಳ ಪ್ರತಿನಿಧಿಗಳಾದ ಕು.ಚೈತನ್ಯ, ಕು.ಪ್ರಿಯದರ್ಶಿನಿ, ಶಾಲೆಯ ಶಿಕ್ಷಕರು, ಮಕ್ಕಳು ಚೈಲ್ಡ್ ಲೈನ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…