ಜಿಲ್ಲೆಗಳು

ಹೆಣ್ಣು ಮಕ್ಕಳ ಮನಸ್ಸು ಮುಗ್ದವಾದದ್ದು ಅವರನ್ನು ಗೌರವದಿಂದ ಕಾಣಿ : ಮಕ್ಕಳ ಸಮಿತಿ ಅಧ್ಯಕ್ಷೆ ಕಮಲಾ

ಮೈಸೂರು : ಚೈಲ್ಡ್ ಲೈನ್ -1098 ಮೈಸೂರು ವತಿಯಿಂದ “ಅಂತರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ” ಯನ್ನು ವಾಣಿವಿಲಾಸ ಬಾಲಕಿಯರ ಪ್ರೌಢಶಾಲೆಯಲ್ಲಿ  ಆಚರಿಸಲಾಯಿತು.

ಕಾರ್ಯಕ್ರಮವನ್ನು ಅಧಿಕಾರಿಗಳು ಮತ್ತು ಮಕ್ಕಳು ಡ್ರಮ್ ಬಾರಿಸುವ ಮೂಲಕ ಉದ್ಘಾಟಿಸಿದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಕಮಲಾ ಮಾತನಾಡಿ ಇಂದಿಗೂ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ವಿಷಾಧನಿಯವಾಗಿದೆ. ಮಕ್ಕಳ ಮನಸ್ಸು ಮುಗ್ದವಾದದ್ದು ಅವರನ್ನು ಗೌರವದಿಂದ ಕಾಣಬೇಕು. ಈ ದಿನದಂದು ಶಿಕ್ಷಣ, ಪೋಷಣೆ, ಬಲವಂತದ ಬಾಲ್ಯವಿವಾಹ, ಕಾನೂನು ಹಕ್ಕುಗಳು ಮತ್ತು ವೈದ್ಯಕೀಯ ಹಕ್ಕುಗಳಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹುಡುಗಿಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಪ್ರಮುಖವಾಗಿದೆ ಎಂದು ತಿಳಿಸಿದರು.

ಚೈಲ್ಡ್ ಲೈನ್ ನೋಡಲ್ ಸಂಯೋಜಕರಾದ ಶ್ರೀ ಧನರಾಜ್ ಚೈಲ್ಡ್ ಲೈನ್-1098 ಮತ್ತು ಮಕ್ಕಳ ಹಕ್ಕುಗಳ ಕುರಿತು ತಿಳಿಸಿದರು. ಶ್ರೀಮತಿ ವೈಶಾಲಿ ಬಿರಾದರ್, ಸಹಾಯಕ ಪೊಲೀಸ್ ಅಧಿಕಾರಿಗಳು, ನಜರಬಾದ ಪೊಲೀಸ್ ಠಾಣೆ ರವರು ಮಾತನಾಡಿ ಅಂತರರಾಷ್ಟ್ರೀಯ ದಿನವನ್ನು ಪ್ರತಿ ವರ್ಷ ಅಕ್ಟೋಬರ್ 11 ರಂದು ಆಚರಿಸಲಾಗುತ್ತದೆ, ಹದಿಹರೆಯದ ಹುಡುಗಿಯರಿಗೆ ಸಂಬಂಧಿಸಿದ ವಿಷಯಗಳ ಮೇಲೆ ಹೆಚ್ಚಿನ ಗಮನ, ಹೂಡಿಕೆ ಮತ್ತು ಕ್ರಮಕ್ಕಾಗಿ ಸಾಮೂಹಿಕವಾಗಿ ಕರೆ ನೀಡುವ ಉದ್ದೇಶದಿಂದ, ನ್ಯಾಯಯುತವಾದ ಪಾಲನೆ ಮತ್ತು ಸಮಾನ ಅವಕಾಶಗಳನ್ನು ಖಚಿತಪಡಿಸಿಕೊಳ್ಳಲು ಮಾಡಲಾಗುತ್ತಿದೆ. ಪೊಲೀಸ್ ಎಂದರೆ ಭಯವಲ್ಲ ಭರವಸೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಅನ್ನಪೂರ್ಣ ಶಾಲೆಯ ಮುಖ್ಯ ಶಿಕ್ಷಕಿ ವಹಿಸಿದ್ದರು. ಕಾರ್ಯಕ್ರಮದಲ್ಲಿ RLHP ಚೈಲ್ಡ್ ಲೈನ್ ಸಂಯೋಜಕರಾದ ಶಶಿಕುಮಾರ್, ಶ್ರೀಮತಿ ಶೀಲಾ ಮಕ್ಕಳ ವಿಶೇಷ ಪೊಲೀಸ್ ಅಧಿಕಾರಿಗಳು, ಮಕ್ಕಳ ವಿಶೇಷ ಪೊಲೀಸ್ ಘಟಕ, ಮೈಸೂರು ನಗರ, ಶ್ರೀಮತಿ ಚೈತ್ರ ಪೊಲೀಸ್ ಸಿಬ್ಬಂದಿ, ಮಕ್ಕಳ ಪ್ರತಿನಿಧಿಗಳಾದ ಕು.ಚೈತನ್ಯ, ಕು.ಪ್ರಿಯದರ್ಶಿನಿ, ಶಾಲೆಯ ಶಿಕ್ಷಕರು, ಮಕ್ಕಳು ಚೈಲ್ಡ್ ಲೈನ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

andolanait

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

3 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

3 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

3 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

4 hours ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

4 hours ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

4 hours ago