ಜಿಲ್ಲೆಗಳು

ಹೆಣ್ಣು ಮಕ್ಕಳ ಮನಸ್ಸು ಮುಗ್ದವಾದದ್ದು ಅವರನ್ನು ಗೌರವದಿಂದ ಕಾಣಿ : ಮಕ್ಕಳ ಸಮಿತಿ ಅಧ್ಯಕ್ಷೆ ಕಮಲಾ

ಮೈಸೂರು : ಚೈಲ್ಡ್ ಲೈನ್ -1098 ಮೈಸೂರು ವತಿಯಿಂದ “ಅಂತರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ” ಯನ್ನು ವಾಣಿವಿಲಾಸ ಬಾಲಕಿಯರ ಪ್ರೌಢಶಾಲೆಯಲ್ಲಿ  ಆಚರಿಸಲಾಯಿತು.

ಕಾರ್ಯಕ್ರಮವನ್ನು ಅಧಿಕಾರಿಗಳು ಮತ್ತು ಮಕ್ಕಳು ಡ್ರಮ್ ಬಾರಿಸುವ ಮೂಲಕ ಉದ್ಘಾಟಿಸಿದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಕಮಲಾ ಮಾತನಾಡಿ ಇಂದಿಗೂ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ವಿಷಾಧನಿಯವಾಗಿದೆ. ಮಕ್ಕಳ ಮನಸ್ಸು ಮುಗ್ದವಾದದ್ದು ಅವರನ್ನು ಗೌರವದಿಂದ ಕಾಣಬೇಕು. ಈ ದಿನದಂದು ಶಿಕ್ಷಣ, ಪೋಷಣೆ, ಬಲವಂತದ ಬಾಲ್ಯವಿವಾಹ, ಕಾನೂನು ಹಕ್ಕುಗಳು ಮತ್ತು ವೈದ್ಯಕೀಯ ಹಕ್ಕುಗಳಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹುಡುಗಿಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಪ್ರಮುಖವಾಗಿದೆ ಎಂದು ತಿಳಿಸಿದರು.

ಚೈಲ್ಡ್ ಲೈನ್ ನೋಡಲ್ ಸಂಯೋಜಕರಾದ ಶ್ರೀ ಧನರಾಜ್ ಚೈಲ್ಡ್ ಲೈನ್-1098 ಮತ್ತು ಮಕ್ಕಳ ಹಕ್ಕುಗಳ ಕುರಿತು ತಿಳಿಸಿದರು. ಶ್ರೀಮತಿ ವೈಶಾಲಿ ಬಿರಾದರ್, ಸಹಾಯಕ ಪೊಲೀಸ್ ಅಧಿಕಾರಿಗಳು, ನಜರಬಾದ ಪೊಲೀಸ್ ಠಾಣೆ ರವರು ಮಾತನಾಡಿ ಅಂತರರಾಷ್ಟ್ರೀಯ ದಿನವನ್ನು ಪ್ರತಿ ವರ್ಷ ಅಕ್ಟೋಬರ್ 11 ರಂದು ಆಚರಿಸಲಾಗುತ್ತದೆ, ಹದಿಹರೆಯದ ಹುಡುಗಿಯರಿಗೆ ಸಂಬಂಧಿಸಿದ ವಿಷಯಗಳ ಮೇಲೆ ಹೆಚ್ಚಿನ ಗಮನ, ಹೂಡಿಕೆ ಮತ್ತು ಕ್ರಮಕ್ಕಾಗಿ ಸಾಮೂಹಿಕವಾಗಿ ಕರೆ ನೀಡುವ ಉದ್ದೇಶದಿಂದ, ನ್ಯಾಯಯುತವಾದ ಪಾಲನೆ ಮತ್ತು ಸಮಾನ ಅವಕಾಶಗಳನ್ನು ಖಚಿತಪಡಿಸಿಕೊಳ್ಳಲು ಮಾಡಲಾಗುತ್ತಿದೆ. ಪೊಲೀಸ್ ಎಂದರೆ ಭಯವಲ್ಲ ಭರವಸೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಅನ್ನಪೂರ್ಣ ಶಾಲೆಯ ಮುಖ್ಯ ಶಿಕ್ಷಕಿ ವಹಿಸಿದ್ದರು. ಕಾರ್ಯಕ್ರಮದಲ್ಲಿ RLHP ಚೈಲ್ಡ್ ಲೈನ್ ಸಂಯೋಜಕರಾದ ಶಶಿಕುಮಾರ್, ಶ್ರೀಮತಿ ಶೀಲಾ ಮಕ್ಕಳ ವಿಶೇಷ ಪೊಲೀಸ್ ಅಧಿಕಾರಿಗಳು, ಮಕ್ಕಳ ವಿಶೇಷ ಪೊಲೀಸ್ ಘಟಕ, ಮೈಸೂರು ನಗರ, ಶ್ರೀಮತಿ ಚೈತ್ರ ಪೊಲೀಸ್ ಸಿಬ್ಬಂದಿ, ಮಕ್ಕಳ ಪ್ರತಿನಿಧಿಗಳಾದ ಕು.ಚೈತನ್ಯ, ಕು.ಪ್ರಿಯದರ್ಶಿನಿ, ಶಾಲೆಯ ಶಿಕ್ಷಕರು, ಮಕ್ಕಳು ಚೈಲ್ಡ್ ಲೈನ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

andolanait

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

2 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

5 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

5 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

6 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

7 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

8 hours ago