ಮೈಸೂರು: ಗಂಧದ ಗುಡಿಯ ಬಗೆ ಬಗೆ ಸೊಬಗನ್ನು ಕುಂಚ ಹಿಡಿದು ಚಿತ್ತಾರ ಬಿಡಿಸಲು ಮಕ್ಕಳು ಸಜ್ಜಾಗಿದ್ದರು. ತಮ್ಮ ಕಲ್ಪನೆಯಲ್ಲಿ ಮರ, ಗಿಡ, ಬೆಟ್ಟ, ಗುಡ್ಡ, ಪರಿಸರಕ್ಕೆ ಬಣ್ಣ ಬಳಿಯುತ ಚಿತ್ತಾರ ಮೂಡಿಸಿದರು.
ನಗರದ ದಸರಾ ವಸ್ತು ಪ್ರದರ್ಶನದ ಪ್ರಾಧಿಕಾರದ ಪಿ.ಕಾಳಿಂಗ ರಾವ್ ಆವರಣದಲ್ಲಿ ಪುನೀತ್ ರಾಜ್ ಕುಮಾರ್ ಅವರ ಸ್ಮರಣೆಯ ಅಂಗವಾಗಿ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ನಡೆದ ಗಂಧದ ಗುಡಿ ಪರಿಕಲ್ಪನೆಯಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯ ದೃಶ್ಯವಿದು.
ನಗರದ ನಾನಾ ಭಾಗಗಳಿಂದ ಆಗಮಿಸಿದ್ದ 829 ಮಕ್ಕಳು ವಯಸ್ಸಿನ ಅಂತರದಲ್ಲಿ ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಮಕ್ಕಳು ಪರಿಸರ ಕುರಿತಂತೆ ತಮ್ಮದೇ ನಾನಾ ಪರಿಕಲ್ಪನೆಗಳು ಹೊರಹೊಮ್ಮಿದವು.
ತಮ್ಮ ಸುತ್ತಮುತ್ತ ಕಂಡಂತಹ ಪರಿಸರ, ಜಲಪಾತ, ಕಾಡು, ಹಸಿರು, ಬೆಟ್ಟಗುಡ್ಡ, ಗಿಡಮರಗಳಿಗೆ ಬಣ್ಣ ಹಚ್ಚಿ ಪರಿಸರ ಕಥೆಗಳ ಚಿತ್ತಾರ ಮೂಡಿಸಿದರು.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…