ಮೈಸೂರು: ನಗರದ ಅರಮನೆ, ಮೃಗಾಲಯ, ವಸ್ತು ಪ್ರದರ್ಶನದ ಆವರಣ ಮುಂತಾದ ಪ್ರೇಕ್ಷಣಿಯ ಸ್ಥಳಗಳಲ್ಲಿ ಸೋಮವಾರ ಮಕ್ಕಳದ್ದೇ ಕಾರುಬಾರು.
ಮಕ್ಕಳ ದಿನಾಚರಣೆ ಅಂಗವಾಗಿ ನಗರದ ವಿವಿಧ ಶಾಲೆಗಳ ಮಕ್ಕಳು ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸಂಭ್ರಮಿಸಿದರು. ಇದರ ಜೊತೆಗೆ ನಗರದ ವಿವಿಧ ಸಂಘ, ಸಂಸ್ಥೆಗಳು, ಶಾಲೆಗಳು ಮಕ್ಕಳ ದಿನಾಚರಣೆಯನ್ನು ಆಚರಿಸಿದವು.
ಮಕ್ಕಳ ದಿನಾಚರಣೆ ಅಂಗವಾಗಿ ನಗರದ ವಸ್ತು ಪ್ರದರ್ಶನ ಹಾಗೂ ಮೃಗಾಲಯಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿತ್ತು. ವಸ್ತುಪ್ರದರ್ಶನಕ್ಕೆ ಭೇಟಿ ನೀಡಿದ ಮಕ್ಕಳಿಗೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡ ಅವರು ಐಸ್ ಕ್ರೀಮ್, ಚಾಕೊಲೇಟ್, ತಂಪು ಪಾನೀಯ, ಮಜ್ಜಿಗೆ ವಿತರಿಸಿ, ಮಕ್ಕಳಿಗೆ ಗುಲಾಬಿ ಹಾಗೂ ಪೆನ್ ನೀಡಿ ಶುಭಕೋರಿದರು. ವ್ಯವಸ್ಥಾಪಕ ಸಿದ್ದೇಗೌಡ, ಎಇ ನಾಗೇಂದ್ರ, ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಮೃಗಾಲಯದಲ್ಲಿ ಚಿಣ್ಣರು: ೧೪ ವರ್ಷದ ಒಳಗಿನ ಮಕ್ಕಳಿಗೆ ಸೋಮವಾರ ಮೃಗಾಲಯಕ್ಕೆ ಉಚಿತ ಪ್ರವೇಶಾವಕಾಶ ಕಲ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ ೯ ಗಂಟೆಯಿಂದಲೇ ನೂರಾರು ಮಕ್ಕಳು ಮೃಗಾಲಯಕ್ಕೆ ಭೇಟಿ ನೀಡಿ ಪ್ರಾಣಿ, ಪಕ್ಷಿಗಳನ್ನು ವೀಕ್ಷಿಸಿ ಸಂತಸಪಟ್ಟರು.
ಕಾರ್ಯಕ್ರಮ ಉದ್ಘಾಟಿಸಿದ ಸಮರ್ಥನಂ ಸಂಸ್ಥೆುಂ ಹಿತೈಷಿ ಸೀತಾಲಕ್ಷ್ಮೀ ವಾತನಾಡಿ, ಮಕ್ಕಳು ನಾಳಿನ ಪ್ರಜೆಗಳು. ಹಾಗಾಗಿ ನಮ್ಮ ದೇಶದ ಾಂವುದೇ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ವಾಡಬಾರದು ಎಂದು ನೆಹರೂ ಸದಾ ಹೇಳುತ್ತಿದ್ದರು. ಇಂದು ನಾವು ಮಕ್ಕಳಿಗೆ ಒಳ್ಳೆುಂ ಭವಿಷ್ಯವನ್ನು ರೂಪಿಸಿ ಕೊಟ್ಟರೆ ಮುಂದೆ ಅವರು ನಮ್ಮ ರಾಷ್ಟ್ರಕ್ಕೆ ಭದ್ರ ಬುನಾದಿ ಆಗಲಿದ್ದಾರೆ ಎಂದರು.
ಸಮರ್ಥನಂ ಸಂಸ್ಥೆಯ ಶಿವರಾಜು, ನರಸಿಂಹಮೂರ್ತಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಭ್ರಮಾರಂಭ, ವಿಶೇಷ ಶಿಕ್ಷಕಿಯರಾದ ಪಿ.ಪದ್ಮ, ಎಚ್.ವಿದ್ಯಾವತಿ ಸಿಬ್ಬಂದಿಗಳಾದ ರಾಘವೇಂದ್ರ, ಪವಿತ್ರ ಮತ್ತಿತರರು ಹಾಜರಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…