ಜಿಲ್ಲೆಗಳು

ಮಕ್ಕಳ ದಿನಾಚರಣೆ: ಪ್ರೇಕ್ಷಣೀಯ ಸ್ಥಳಗಳಲ್ಲಿ ಚಿಣ್ಣರ ಕಲರವ

ಮೃಗಾಲಯ, ವಸ್ತು ಪ್ರದರ್ಶನದಲ್ಲಿ ಮಕ್ಕಳಿಗೆ ಉಚಿತ ಪ್ರವೇಶ

ಮೈಸೂರು: ನಗರದ ಅರಮನೆ, ಮೃಗಾಲಯ, ವಸ್ತು ಪ್ರದರ್ಶನದ ಆವರಣ ಮುಂತಾದ ಪ್ರೇಕ್ಷಣಿಯ ಸ್ಥಳಗಳಲ್ಲಿ ಸೋಮವಾರ ಮಕ್ಕಳದ್ದೇ ಕಾರುಬಾರು.

ಮಕ್ಕಳ ದಿನಾಚರಣೆ ಅಂಗವಾಗಿ ನಗರದ ವಿವಿಧ ಶಾಲೆಗಳ ಮಕ್ಕಳು ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸಂಭ್ರಮಿಸಿದರು. ಇದರ ಜೊತೆಗೆ ನಗರದ ವಿವಿಧ ಸಂಘ, ಸಂಸ್ಥೆಗಳು, ಶಾಲೆಗಳು ಮಕ್ಕಳ ದಿನಾಚರಣೆಯನ್ನು ಆಚರಿಸಿದವು.

ಮಕ್ಕಳ ದಿನಾಚರಣೆ ಅಂಗವಾಗಿ ನಗರದ ವಸ್ತು ಪ್ರದರ್ಶನ ಹಾಗೂ ಮೃಗಾಲಯಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿತ್ತು. ವಸ್ತುಪ್ರದರ್ಶನಕ್ಕೆ ಭೇಟಿ ನೀಡಿದ ಮಕ್ಕಳಿಗೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡ ಅವರು ಐಸ್ ಕ್ರೀಮ್, ಚಾಕೊಲೇಟ್, ತಂಪು ಪಾನೀಯ, ಮಜ್ಜಿಗೆ ವಿತರಿಸಿ, ಮಕ್ಕಳಿಗೆ ಗುಲಾಬಿ ಹಾಗೂ ಪೆನ್ ನೀಡಿ ಶುಭಕೋರಿದರು. ವ್ಯವಸ್ಥಾಪಕ ಸಿದ್ದೇಗೌಡ, ಎಇ ನಾಗೇಂದ್ರ, ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್‌ ಶಾಸ್ತ್ರಿ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಮೃಗಾಲಯದಲ್ಲಿ ಚಿಣ್ಣರು: ೧೪ ವರ್ಷದ ಒಳಗಿನ ಮಕ್ಕಳಿಗೆ ಸೋಮವಾರ ಮೃಗಾಲಯಕ್ಕೆ ಉಚಿತ ಪ್ರವೇಶಾವಕಾಶ ಕಲ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ ೯ ಗಂಟೆಯಿಂದಲೇ ನೂರಾರು ಮಕ್ಕಳು ಮೃಗಾಲಯಕ್ಕೆ ಭೇಟಿ ನೀಡಿ ಪ್ರಾಣಿ, ಪಕ್ಷಿಗಳನ್ನು ವೀಕ್ಷಿಸಿ ಸಂತಸಪಟ್ಟರು.

ವಸ್ತುಪ್ರದರ್ಶನಕ್ಕೆ ಭೇಟಿ ನೀಡಿದ ಮಕ್ಕಳಿಗೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡ ಅವರು ಐಸ್ ಕ್ರೀಮ್, ಚಾಕೊಲೇಟ್ ವಿತರಿಸಿ ಶುಭಕೋರಿದರು.

ಕಾರ್ಯಕ್ರಮ ಉದ್ಘಾಟಿಸಿದ ಸಮರ್ಥನಂ ಸಂಸ್ಥೆುಂ ಹಿತೈಷಿ ಸೀತಾಲಕ್ಷ್ಮೀ ವಾತನಾಡಿ, ಮಕ್ಕಳು ನಾಳಿನ ಪ್ರಜೆಗಳು. ಹಾಗಾಗಿ ನಮ್ಮ ದೇಶದ ಾಂವುದೇ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ವಾಡಬಾರದು ಎಂದು ನೆಹರೂ ಸದಾ ಹೇಳುತ್ತಿದ್ದರು. ಇಂದು ನಾವು ಮಕ್ಕಳಿಗೆ ಒಳ್ಳೆುಂ ಭವಿಷ್ಯವನ್ನು ರೂಪಿಸಿ ಕೊಟ್ಟರೆ ಮುಂದೆ ಅವರು ನಮ್ಮ ರಾಷ್ಟ್ರಕ್ಕೆ ಭದ್ರ ಬುನಾದಿ ಆಗಲಿದ್ದಾರೆ ಎಂದರು.

ಸಮರ್ಥನಂ ಸಂಸ್ಥೆಯ ಶಿವರಾಜು, ನರಸಿಂಹಮೂರ್ತಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಭ್ರಮಾರಂಭ, ವಿಶೇಷ ಶಿಕ್ಷಕಿಯರಾದ ಪಿ.ಪದ್ಮ, ಎಚ್.ವಿದ್ಯಾವತಿ ಸಿಬ್ಬಂದಿಗಳಾದ ರಾಘವೇಂದ್ರ, ಪವಿತ್ರ ಮತ್ತಿತರರು ಹಾಜರಿದ್ದರು.

 

 

 

 

andolana

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

10 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

10 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

11 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

12 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

12 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

12 hours ago