ಮೈಸೂರಿನ ಮೃಗಾಲುಂಕ್ಕೆ ಭೇಟಿ ನೀಡಿದ ಮಕ್ಕಳು ಪ್ರಾಣಿ, ಪಕ್ಷಿಗಳನ್ನು ವೀಕ್ಷಿಸಿ ಸಂತಸಪಟ್ಟರು.
ಮೈಸೂರು: ನಗರದ ಅರಮನೆ, ಮೃಗಾಲಯ, ವಸ್ತು ಪ್ರದರ್ಶನದ ಆವರಣ ಮುಂತಾದ ಪ್ರೇಕ್ಷಣಿಯ ಸ್ಥಳಗಳಲ್ಲಿ ಸೋಮವಾರ ಮಕ್ಕಳದ್ದೇ ಕಾರುಬಾರು.
ಮಕ್ಕಳ ದಿನಾಚರಣೆ ಅಂಗವಾಗಿ ನಗರದ ವಿವಿಧ ಶಾಲೆಗಳ ಮಕ್ಕಳು ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸಂಭ್ರಮಿಸಿದರು. ಇದರ ಜೊತೆಗೆ ನಗರದ ವಿವಿಧ ಸಂಘ, ಸಂಸ್ಥೆಗಳು, ಶಾಲೆಗಳು ಮಕ್ಕಳ ದಿನಾಚರಣೆಯನ್ನು ಆಚರಿಸಿದವು.
ಮಕ್ಕಳ ದಿನಾಚರಣೆ ಅಂಗವಾಗಿ ನಗರದ ವಸ್ತು ಪ್ರದರ್ಶನ ಹಾಗೂ ಮೃಗಾಲಯಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿತ್ತು. ವಸ್ತುಪ್ರದರ್ಶನಕ್ಕೆ ಭೇಟಿ ನೀಡಿದ ಮಕ್ಕಳಿಗೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡ ಅವರು ಐಸ್ ಕ್ರೀಮ್, ಚಾಕೊಲೇಟ್, ತಂಪು ಪಾನೀಯ, ಮಜ್ಜಿಗೆ ವಿತರಿಸಿ, ಮಕ್ಕಳಿಗೆ ಗುಲಾಬಿ ಹಾಗೂ ಪೆನ್ ನೀಡಿ ಶುಭಕೋರಿದರು. ವ್ಯವಸ್ಥಾಪಕ ಸಿದ್ದೇಗೌಡ, ಎಇ ನಾಗೇಂದ್ರ, ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಮೃಗಾಲಯದಲ್ಲಿ ಚಿಣ್ಣರು: ೧೪ ವರ್ಷದ ಒಳಗಿನ ಮಕ್ಕಳಿಗೆ ಸೋಮವಾರ ಮೃಗಾಲಯಕ್ಕೆ ಉಚಿತ ಪ್ರವೇಶಾವಕಾಶ ಕಲ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ ೯ ಗಂಟೆಯಿಂದಲೇ ನೂರಾರು ಮಕ್ಕಳು ಮೃಗಾಲಯಕ್ಕೆ ಭೇಟಿ ನೀಡಿ ಪ್ರಾಣಿ, ಪಕ್ಷಿಗಳನ್ನು ವೀಕ್ಷಿಸಿ ಸಂತಸಪಟ್ಟರು.
ಕಾರ್ಯಕ್ರಮ ಉದ್ಘಾಟಿಸಿದ ಸಮರ್ಥನಂ ಸಂಸ್ಥೆುಂ ಹಿತೈಷಿ ಸೀತಾಲಕ್ಷ್ಮೀ ವಾತನಾಡಿ, ಮಕ್ಕಳು ನಾಳಿನ ಪ್ರಜೆಗಳು. ಹಾಗಾಗಿ ನಮ್ಮ ದೇಶದ ಾಂವುದೇ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ವಾಡಬಾರದು ಎಂದು ನೆಹರೂ ಸದಾ ಹೇಳುತ್ತಿದ್ದರು. ಇಂದು ನಾವು ಮಕ್ಕಳಿಗೆ ಒಳ್ಳೆುಂ ಭವಿಷ್ಯವನ್ನು ರೂಪಿಸಿ ಕೊಟ್ಟರೆ ಮುಂದೆ ಅವರು ನಮ್ಮ ರಾಷ್ಟ್ರಕ್ಕೆ ಭದ್ರ ಬುನಾದಿ ಆಗಲಿದ್ದಾರೆ ಎಂದರು.
ಸಮರ್ಥನಂ ಸಂಸ್ಥೆಯ ಶಿವರಾಜು, ನರಸಿಂಹಮೂರ್ತಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಭ್ರಮಾರಂಭ, ವಿಶೇಷ ಶಿಕ್ಷಕಿಯರಾದ ಪಿ.ಪದ್ಮ, ಎಚ್.ವಿದ್ಯಾವತಿ ಸಿಬ್ಬಂದಿಗಳಾದ ರಾಘವೇಂದ್ರ, ಪವಿತ್ರ ಮತ್ತಿತರರು ಹಾಜರಿದ್ದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…